AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್​ ಗಾಂಧಿ ಪ್ರತಿಷ್ಠಾನದ ಎಫ್​ಸಿಆರ್​ಎ ಲೈಸೆನ್ಸ್​ ರದ್ದು

ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಪ್ರಭಾವಿ ಮನೆತನವಾಗಿರುವ ಗಾಂಧಿ ಕುಟುಂಬದೊಂದಿಗೆ ಈ ಪ್ರತಿಷ್ಠಾನವು ನಿಕಟ ಸಂಬಂಧ ಹೊಂದಿದೆ.

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್​ ಗಾಂಧಿ ಪ್ರತಿಷ್ಠಾನದ ಎಫ್​ಸಿಆರ್​ಎ ಲೈಸೆನ್ಸ್​ ರದ್ದು
ಕೇಂದ್ರ ಗೃಹ ಇಲಾಖೆ ಮತ್ತು ರಾಜೀವ್ ಗಾಂಧಿ ಫೌಂಡೇಶನ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 23, 2022 | 9:49 AM

Share

ಬೆಂಗಳೂರು: ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್​ ಗಾಂಧಿ ಫೌಂಡೇಶನ್​ (Rajiv Gandhi Foundation – RGF) ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (Foreign Contribution Regulation Act – FCRA) ಅಡಿಯಲ್ಲಿ ನೀಡಿದ್ದ ಲೈಸೆನ್ಸ್​ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ. ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಪ್ರಭಾವಿ ಮನೆತನವಾಗಿರುವ ಗಾಂಧಿ ಕುಟುಂಬದೊಂದಿಗೆ ಈ ಪ್ರತಿಷ್ಠಾನವು ನಿಕಟ ಸಂಬಂಧ ಹೊಂದಿದೆ.

ಜುಲೈ 2020ರಲ್ಲಿ ಕೇಂದ್ರ ಗೃಹ ಇಲಾಖೆಯು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿಯ ವರದಿಯನ್ನು ಆಧರಿಸಿ ಪ್ರತಿಷ್ಠಾನಕ್ಕೆ ನೀಡಿದ್ದ ಲೈಸೆನ್ಸ್ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿದೆ. ಲೈಸೆನ್ಸ್​ ರದ್ದತಿ ಕುರಿತ ಮಾಹಿತಿಯನ್ನು ರಾಜೀವ್ ಗಾಂಧಿ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಳುಹಿಸಿಕೊಡಲಾಗಿದೆ.

ಕಾಂಗ್ರೆಸ್​ನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ರಾಜೀವ್ ಗಾಂಧಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಟ್ರಸ್ಟ್​ನ ವಿಶ್ವಸ್ಥರಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇದ್ದಾರೆ.

Published On - 9:43 am, Sun, 23 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್