AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕ್ವೀನ್ ವಿರುದ್ಧ ಶಿವಸೇನೆ ಸಮರ, ಕಂಗನಾಗೆ ವೈ ಪ್ಲಸ್ ಭದ್ರತೆ

ದೆಹಲಿ: ಕಂಗನಾ ರಣಾವತ್‌ ವಿವಾದಗಳು ಒಂದೆರೆಡಲ್ಲ. ಮುಂಬೈಯನ್ನು ಪಿಓಕೆ, ತಾಲಿಬಾನ್ ಎಂದೆಲ್ಲಾ ಕರೆದ ಮೇಲೆ ತೀವ್ರ ಟೀಕೆ ಎದುರಾಗಿತ್ತು. ಹಾಗೇ ಶಿವಸೇನೆ ಹಾಗೂ ಎನ್‌ಸಿಪಿ ನಾಯಕರು ಕಂಗನಾ ಮೇಲೆ ಮುಗಿಬಿದ್ದಿದ್ದರು. ಮುಂಬೈಗೆ ಭೇಟಿ ನೀಡದಂತೆ ಬೆದರಿಕೆಯೊಡ್ಡಿದ್ದರು. ಇದರ ಇಂಪ್ಯಾಕ್ಟ್ ಎಂಬಂತೆ ಕಂಗನಾಗೆ ಕೇಂದ್ರದಿಂದ ವೈ ಕೆಟಗರಿ ಭದ್ರತೆ ನೀಡಲಾಗಿದ್ದು, ಕಂಗನಾ ಮೆಂಟಲ್ ಮಹಿಳೆ ಎಂದು ಶಿವಸೇನೆ ವಕ್ತಾರ ರಾವತ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಕಂಗನಾ ಅಂದಮೇಲೆ ಕಾಂಟ್ರವರ್ಸಿ, ಕಾಂಟ್ರವರ್ಸಿ ಇರುವ ಜಾಗದಲ್ಲಿ ಕಂಗನಾ ಎಂಟ್ರಿ. ಇತ್ತೀಚೆಗೆ ಮುಂಬೈ […]

ಮಹಾರಾಷ್ಟ್ರದಲ್ಲಿ ಕ್ವೀನ್ ವಿರುದ್ಧ ಶಿವಸೇನೆ ಸಮರ, ಕಂಗನಾಗೆ ವೈ ಪ್ಲಸ್ ಭದ್ರತೆ
ಕಂಗನಾ ರಣಾವತ್​
ಆಯೇಷಾ ಬಾನು
|

Updated on: Sep 08, 2020 | 7:22 AM

Share

ದೆಹಲಿ: ಕಂಗನಾ ರಣಾವತ್‌ ವಿವಾದಗಳು ಒಂದೆರೆಡಲ್ಲ. ಮುಂಬೈಯನ್ನು ಪಿಓಕೆ, ತಾಲಿಬಾನ್ ಎಂದೆಲ್ಲಾ ಕರೆದ ಮೇಲೆ ತೀವ್ರ ಟೀಕೆ ಎದುರಾಗಿತ್ತು. ಹಾಗೇ ಶಿವಸೇನೆ ಹಾಗೂ ಎನ್‌ಸಿಪಿ ನಾಯಕರು ಕಂಗನಾ ಮೇಲೆ ಮುಗಿಬಿದ್ದಿದ್ದರು. ಮುಂಬೈಗೆ ಭೇಟಿ ನೀಡದಂತೆ ಬೆದರಿಕೆಯೊಡ್ಡಿದ್ದರು. ಇದರ ಇಂಪ್ಯಾಕ್ಟ್ ಎಂಬಂತೆ ಕಂಗನಾಗೆ ಕೇಂದ್ರದಿಂದ ವೈ ಕೆಟಗರಿ ಭದ್ರತೆ ನೀಡಲಾಗಿದ್ದು, ಕಂಗನಾ ಮೆಂಟಲ್ ಮಹಿಳೆ ಎಂದು ಶಿವಸೇನೆ ವಕ್ತಾರ ರಾವತ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಕಂಗನಾ ಅಂದಮೇಲೆ ಕಾಂಟ್ರವರ್ಸಿ, ಕಾಂಟ್ರವರ್ಸಿ ಇರುವ ಜಾಗದಲ್ಲಿ ಕಂಗನಾ ಎಂಟ್ರಿ. ಇತ್ತೀಚೆಗೆ ಮುಂಬೈ ನಗರವನ್ನ ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಈಗ ಅದು ಎಲ್ಲೆಲ್ಲಿಗೋ ಹೋಗಿ ಕಡೆಗೆ ಕಂಗನಾ ವರ್ಸಸ್ ಶಿವಸೇನೆ ಎಂಬಂತಾಗಿದೆ. ಇಂಥಾ ಹೊತ್ತಲ್ಲೇ ವಿವಾದದ ಕಿಡಿಗೆ ಪೆಟ್ರೋಲ್ ಸುರಿದಿದ್ದಾರೆ ಸಂಜಯ್ ರಾವತ್.

ಕಂಗನಾ ವಿರುದ್ಧ ರೊಚ್ಚಿಗೆದ್ದ ಮಹಾರಾಷ್ಟ್ರ ಸಿಎಂ! ತನಗನಿಸಿದ್ದನ್ನೆಲ್ಲಾ ನೇರವಾಗಿ ಹೇಳುವ ನಟಿ ಕಂಗನಾ ದಿಟ್ಟತನವೇ ಅನೇಕ ಸಮಸ್ಯೆ, ವಿವಾದಗಳಿಗೆ ಎಡೆ ಮಾಡಿಕೊಟ್ಟಿದೆ. ಕಂಗನಾರ ಪಾಕ್‌ ಆಕ್ರಮಿತ ಕಾಶ್ಮೀರ ಟ್ವೀಟ್‌ ನಂತ್ರ ಮುಂಬೈಗೆ ಬಂದ್ರೆ ಪ್ರತಿಭಟನೆ ನಡೆಸ್ತೀವಿ ಅಂತಾ ಶಿವಸೇನೆ ವಾರ್ನ್‌ ಮಾಡಿತ್ತು. ಆದ್ರೆ, ಇದಕ್ಕೆ ಸವಾಲೊಡ್ಡಿದ್ದ ಕಂಗನಾ ಸೆಪ್ಟಂಬರ್ 9ಕ್ಕೆ ಬರ್ತೀನಿ. ಧಮ್ ಇದ್ದರೆ, ತಡೆಯಿರಿ ಎಂದು ಪ್ರತ್ಯುತ್ತರ ನೀಡಿದ್ದರು. ಇದೀಗ ಕಂಗನಾ ಬಗ್ಗೆ ವಾಗ್ದಾಳಿ ನಡೆಸಲು ಖುದ್ದು ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಎಂಟ್ರಿಯಾಗಿದ್ದು, ಕೆಲವರು ಮುಂಬೈನಲ್ಲಿ ತಮ್ಮ ಕೆರಿಯರ್ ಬೆಳವಣಿಗೆ ಮಾಡಿಕೊಳ್ಳುತ್ತಾರೆ. ಆದರೆ ಮುಂಬೈಗೆ ಋಣಿಯಾಗಿರಲ್ಲ ಎಂದು ಹೇಳುವ ಮೂಲಕ ಕಂಗನಾ ಮುಂಬೈಗೆ ಋಣಿಯಾಗಿಲ್ಲ ಎಂದು ಟೀಕಿಸಿದ್ದಾರೆ.

Y ಕೆಟಗರಿ ಭದ್ರತೆ ನೀಡಲು ಕೇಂದ್ರದ ನಿರ್ಧಾರ! ಅಂದಹಾಗೆ ಕಂಗನಾ ಬೆಂಬಲಕ್ಕೆ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ನಿಂತಿದೆ. ಕಂಗನಾಗೆ ಶಿವಸೇನೆ ಬೆದರಿಕೆ ಹಾಕಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ಹಿಮಾಚಲ ಸಿಎಂ ಜಯರಾಮ ಠಾಕೂರ್, ಕಂಗನಾ ಹಿಮಾಚಲದ ಹೆಣ್ಣು ಮಗಳು. ಹಿಮಾಚಲ ಪ್ರದೇಶದ ಪೊಲೀಸರು ಮುಂಬೈನಲ್ಲೂ ಕಂಗನಾಗೆ ರಕ್ಷಣೆ ನೀಡ್ತಾರೆ ಎಂದಿದ್ದರು. ನಂತರ ಹಿಮಾಚಲ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ ಆಗಿರುವ ಕಂಗನಾಗೆ ವೈ ಕೆಟಗರಿ ಭದ್ರತೆ ನೀಡಲು ಕೇಂದ್ರ ಗೃಹಇಲಾಖೆ ನಿರ್ಧರಿಸಿದೆ.ವೈ ಕೆಟಗರಿ ಭದ್ರತೆ ಅಡಿ ಕಂಗನಾಗೆ ದಿನದ 24 ಗಂಟೆ ಪ್ಯಾರಾ ಮಿಲಿಟರಿ ಪಡೆಯ ರಕ್ಷಣೆ ಸಿಗಲಿದೆ. ವೈ ಕೆಟಗರಿ ಭದ್ರತೆಯಡಿ ಇಬ್ಬರು ಶಸ್ತ್ರಧಾರಿ ಭದ್ರತಾ ಸಿಬ್ಬಂದಿ ಸದಾ ರಕ್ಷಣೆ ನೀಡ್ತಾರೆ.

ಒಟ್ನಲ್ಲಿ ಕಂಗನಾ ವಿಚಾರ ರಾಜ್ಯ ರಾಜ್ಯಗಳ ನಡುವೆ ಕಿಚ್ಚು ಹೊತ್ತಿಸಿದೆ. ಅತ್ತ ಕೇಂದ್ರ ಸರ್ಕಾರ ಕೂಡ ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ನಾಳೆಯೇ ಕಂಗನಾ ರಣಾವತ್ ಮುಂಬೈಗೆ ಭೇಟಿ ನೀಡಲಿದ್ದು, ಮುಂದೆ ಏನಾಗಲಿದೆ..? ಅನ್ನೋದನ್ನ ಕಾದು ನೋಡಬೇಕಿದೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?