AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಫ್ರಿಡ್ಜ್​ಗಳಲ್ಲಿ ಗೋಮಾಂಸ ಪತ್ತೆ, 11 ಮನೆಗಳ ನೆಲಸಮ, 150 ಗೋವುಗಳ ರಕ್ಷಣೆ

ಮಧ್ಯಪ್ರದೇಶದಲ್ಲಿ ಹಲವು ಮನೆಗಳ ಫ್ರಿಡ್ಜ್​ನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಜಿಲ್ಲಾಡಳಿತವು 11 ಮನೆಗಳನ್ನು ನೆಲಸಮಗೊಳಿಸಿದೆ. ನೈನ್‌ಪುರದ ಭೈಸವಾಹಿ ಪ್ರದೇಶದಲ್ಲಿ ಬಲಿ ಕೊಡಲು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ತರಲಾಗಿದೆ ಎಂಬ ರಹಸ್ಯ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಜತ್ ಸಕ್ಲೇಚಾ ತಿಳಿಸಿದ್ದಾರೆ.

ಮಧ್ಯಪ್ರದೇಶ: ಫ್ರಿಡ್ಜ್​ಗಳಲ್ಲಿ ಗೋಮಾಂಸ ಪತ್ತೆ, 11 ಮನೆಗಳ ನೆಲಸಮ, 150 ಗೋವುಗಳ ರಕ್ಷಣೆ
ಮನೆ ನೆಲಸಮ
ನಯನಾ ರಾಜೀವ್
|

Updated on: Jun 16, 2024 | 10:10 AM

Share

ಫ್ರಿಡ್ಜ್​ಗಳಲ್ಲಿ ಗೋಮಾಂಸವಿಟ್ಟಿರುವ ಆರೋಪದ ಮೇರೆಗೆ ಜಿಲ್ಲಾಡಳಿತವು 11 ಮನೆಗಳನ್ನು ನೆಲಸಮಗೊಳಿಸಿದೆ. ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕ್ರಮದ ಭಾಗವಾಗಿ, ಸರ್ಕಾರಿ ಭೂಮಿಯಲ್ಲಿ 11 ಜನರು ನಿರ್ಮಿಸಿದ್ದ ಮನೆಗಳನ್ನು ಆಡಳಿತವು ನೆಲಸಮಗೊಳಿಸಿದೆ.

ನೈನ್‌ಪುರದ ಭೈಸವಾಹಿ ಪ್ರದೇಶದಲ್ಲಿ ಬಲಿ ಕೊಡಲು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ತರಲಾಗಿದೆ ಎಂಬ ರಹಸ್ಯ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಜತ್ ಸಕ್ಲೇಚಾ ತಿಳಿಸಿದ್ದಾರೆ. ಆರೋಪಿಗಳ ಅಡಗುತಾಣದ ಹಿಂದೆ 150 ಹಸುಗಳನ್ನು ಕಟ್ಟಿ ಹಾಕಿರುವುದು ಪತ್ತೆಯಾಗಿದೆ ಎಂದು ಎಸ್ಪಿ ಸಕ್ಲೇಚಾ ತಿಳಿಸಿದ್ದಾರೆ.

ಎಲ್ಲಾ 11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ನಾವು ಪ್ರಾಣಿಗಳ ಕೊಬ್ಬು, ಚರ್ಮ ಮತ್ತು ಮೂಳೆಗಳನ್ನು ಸಹ ಕಂಡುಕೊಂಡಿದ್ದೇವೆ, ಅದನ್ನು ಕೋಣೆಯಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬಲಿಕೊಡಲು ಹಸುಗಳನ್ನು ಖರೀದಿ ಮಾಡಿದ ಆರೋಪ, ಮದರಸಾ ಮೇಲೆ ಗುಂಪಿನಿಂದ ದಾಳಿ

ವಶಪಡಿಸಿಕೊಂಡ ಮಾಂಸವು ಗೋಮಾಂಸ ಎಂದು ಸ್ಥಳೀಯ ಸರ್ಕಾರಿ ಪಶುವೈದ್ಯರು ಖಚಿತಪಡಿಸಿದ್ದಾರೆ ಎಂದು ಎಸ್ಪಿ ಹೇಳಿದರು. ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಮಾದರಿಗಳನ್ನು ಹೈದರಾಬಾದ್‌ಗೆ ಕಳುಹಿಸಿದ್ದೇವೆ. ಸರ್ಕಾರಿ ಜಮೀನಿನಲ್ಲಿದ್ದ 11 ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದರು.

ಶುಕ್ರವಾರ ರಾತ್ರಿ ಹಸುಗಳು ಮತ್ತು ಗೋಮಾಂಸ ಪತ್ತೆಯಾದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ 10 ಮಂದಿಗಾಗಿ ಶೋಧ ನಡೆಯುತ್ತಿದೆ. 150 ಹಸುಗಳನ್ನು ಗೋಶಾಲೆಗೆ ಕಳುಹಿಸಲಾಗಿದೆ ಎಂದು ಸಕ್ಲೇಚಾ ತಿಳಿಸಿದರು.

ಭೈನಸ್ವಾಹಿ ಪ್ರದೇಶವು ಕೆಲವು ಸಮಯದಿಂದ ಗೋವು ಕಳ್ಳಸಾಗಣೆಯ ಕೇಂದ್ರವಾಗಿದೆ. ಮಧ್ಯಪ್ರದೇಶದಲ್ಲಿ ಗೋಹತ್ಯೆಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ. ಇಬ್ಬರು ಆರೋಪಿಗಳ ಕ್ರಿಮಿನಲ್ ಇತಿಹಾಸವನ್ನು ಸಂಗ್ರಹಿಸಲಾಗಿದ್ದು, ಉಳಿದವರ ವಿವರಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ