AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಯಾರೊಟ್ಟಿಗೋ ಲಿವ್-ಇನ್ ಸಂಬಂಧದಲ್ಲಿದ್ದಿದ್ದಕ್ಕೆ ಆಕೆಯ ಕೊಂದು, ಆತ್ಮಹತ್ಯೆಯ ಕಥೆ ಕಟ್ಟಿದ ತಂದೆ

ಮಗಳು ಯಾರೊಂದಿಗೋ ಲಿವ್-ಇನ್ ಸಂಬಂಧ(Live-in Relationship)ದಲ್ಲಿರುವುದನ್ನು ತಿಳಿದ ತಂದೆ ಕೋಪಕ್ಕೆ ಆಕೆಯನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕಥೆ ಕಟ್ಟಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಮಗಳನ್ನು ಕೊಂದು ರಾತ್ರೋ ರಾತ್ರಿ ತನ್ನ ಸಹೋದರನ ಜತೆ ಸೇರಿ ಅಂತ್ಯಕ್ರಿಯೆಯನ್ನೂ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ತಿಂಗಳ ಹಿಂದಷ್ಟೇ ಆ ಯುವತಿಯದ್ದು ಆತ್ಮಹತ್ಯೆ ಎಂದು ಘೋಷಿಸಲಾಗಿತ್ತು

ಮಗಳು ಯಾರೊಟ್ಟಿಗೋ ಲಿವ್-ಇನ್ ಸಂಬಂಧದಲ್ಲಿದ್ದಿದ್ದಕ್ಕೆ ಆಕೆಯ ಕೊಂದು, ಆತ್ಮಹತ್ಯೆಯ ಕಥೆ ಕಟ್ಟಿದ ತಂದೆ
ಸಂಬಂಧ
ನಯನಾ ರಾಜೀವ್
|

Updated on: Aug 14, 2025 | 7:56 AM

Share

ಅಹಮದಾಬಾದ್ ಆಗಸ್ಟ್​ 14: ಮಗಳು ಯಾರೊಂದಿಗೋ ಲಿವ್-ಇನ್ ಸಂಬಂಧ(Live-in Relationship)ದಲ್ಲಿರುವುದನ್ನು ತಿಳಿದ ತಂದೆ ಕೋಪಕ್ಕೆ ಆಕೆಯನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕಥೆ ಕಟ್ಟಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಮಗಳನ್ನು ಕೊಂದು ರಾತ್ರೋ ರಾತ್ರಿ ತನ್ನ ಸಹೋದರನ ಜತೆ ಸೇರಿ ಅಂತ್ಯಕ್ರಿಯೆಯನ್ನೂ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಎರಡು ತಿಂಗಳ ಹಿಂದಷ್ಟೇ ಆ ಯುವತಿಯದ್ದು ಆತ್ಮಹತ್ಯೆ ಎಂದು ಘೋಷಿಸಲಾಗಿತ್ತು, ಆದರೆ ಆಕೆಯ ಪ್ರಿಯಕರ ಗುಜರಾತ್ ಹೈಕೋರ್ಟ್​ ಮೊರೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ಹರೀಶ್ ಎಂಬುವವರು ಈ ವರ್ಷದ ಫೆಬ್ರವರಿಯಲ್ಲಿ ಪಾಲನ್‌ಪುರದಲ್ಲಿ ಚಂದ್ರಿಕಾಳನ್ನು ಭೇಟಿಯಾದರು ಇಬ್ಬರ ನಡುವೆ ಪ್ರೀತಿ ಚಿಗುರಿತ್ತು. ಒಮ್ಮೆ ಚಂದ್ರಿಕಾ ಮನೆಗೆ ಮರಳಿದಾಗ ಮತ್ತೆ ಕುಟುಂಬವು ಆಕೆಯನ್ನು ಪಾಲನ್​​ಪುರಕ್ಕೆ ಹಿಂದಿರುಗಲು ಅವಕಾಶ ನೀಡಲಿಲ್ಲ. ಇದರಿಂದ ಬಯಗೊಂಡ ಚಂದ್ರಿಕಾ ಹರೀಶ್​​ಗೆ ಸಂದೇಶ ಕಳುಹಿಸಿ, ಅವಳನ್ನು ಕರೆದುಕೊಂಡು ಹೋಗುವಂತೆ ಕೇಳಿಕೊಂಡಿದ್ದಳು.ಆಕೆಯ ಕುಟುಂಬವು ಆಕೆಯ ಮದುವೆಯನ್ನು ಬೇರೆ ವ್ಯಕ್ತಿಯ ಜತೆ ಮಾಡಬಹುದು ಎನ್ನುವ ಭಯವನ್ನೂ ವ್ಯಕ್ತಪಡಿಸಿದ್ದಳು. ಜೂನ್ 4ರಂದು ಹರೀಶ್​ ಚಂದ್ರಿಕಾರನ್ನು ಅಹಮದಾಬಾದ್​​ಗೆ ಕರೆದೊಯ್ದಿದ್ದರು.

ಅಲ್ಲಿ ಅವರು ಲಿವ್-ಇನ್ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಿದರು ಮತ್ತು ನಂತರ ಮಧ್ಯಪ್ರದೇಶ ಮತ್ತು ರಾಜಸ್ಥಾನದ ಮೂಲಕ ಪ್ರಯಾಣಿಸಿದ್ದರು. ಬಳಿಕ ಚಂದ್ರಿಕಾ ಕುಟುಂಬ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಜೂನ್ 12ರಂದು ಪೊಲೀಸರು ಅವರಿಬ್ಬರನ್ನು ಪತ್ತೆ ಮಾಡಿದ್ದರು, ಆಕೆಯನ್ನು ಕುಟುಂಬಕ್ಕೆ ಒಪ್ಪಿಸಿದ್ದರು.ಹರೀಶ್​ನನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: 16 ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದರೆ ಮಹಿಳೆ ಅತ್ಯಾಚಾರ ಆರೋಪ ಹೊರಿಸುವಂತಿಲ್ಲ

ಜೂನ್ 21 ರಂದು ಜೈಲಿನಿಂದ ಬಿಡುಗಡೆಯಾದಾಗ, ಅವರ ಫೋನ್ ಡೇಟಾ ಅಳಿಸಿಹೋಗಿರುವುದು ಕಂಡುಬಂದಿದೆ.ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ಪರಿಶೀಲಿಸಿದಾಗ, ಚಂದ್ರಿಕಾ ಅವರ ಹಲವಾರು ಸಂದೇಶಗಳು ಕಂಡುಬಂದಿದ್ದವು. ಅದರಲ್ಲಿ ಚಂದ್ರಿಕಾ ಮೆಸೇಜ್ ಇತ್ತು. ಬೇರೆ ಮದುವೆಗೆ ಪೋಷಕರು ಒತ್ತಾಯಿಸುತ್ತಿದ್ದಾರೆ ಎಂದು ಬರೆಯಲಾಗಿತ್ತು.

ನಂತರ ಹರೀಶ್​ ಗುಜರಾತ್ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದರು. ಜೂನ್ 24 ರಂದು ವಿಚಾರಣೆ ನಡೆಯುವ ಮೊದಲು, ಚಂದ್ರಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹೊರಬಿತ್ತು.ಆಕೆಯ ತಂದೆ ಹಾಗೂ ಚಿಕ್ಕಪ್ಪ ಆಕೆಯದ್ದು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು. ಹರೀಶ್​ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ