AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಯಾರೊಟ್ಟಿಗೋ ಲಿವ್-ಇನ್ ಸಂಬಂಧದಲ್ಲಿದ್ದಿದ್ದಕ್ಕೆ ಆಕೆಯ ಕೊಂದು, ಆತ್ಮಹತ್ಯೆಯ ಕಥೆ ಕಟ್ಟಿದ ತಂದೆ

ಮಗಳು ಯಾರೊಂದಿಗೋ ಲಿವ್-ಇನ್ ಸಂಬಂಧ(Live-in Relationship)ದಲ್ಲಿರುವುದನ್ನು ತಿಳಿದ ತಂದೆ ಕೋಪಕ್ಕೆ ಆಕೆಯನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕಥೆ ಕಟ್ಟಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಮಗಳನ್ನು ಕೊಂದು ರಾತ್ರೋ ರಾತ್ರಿ ತನ್ನ ಸಹೋದರನ ಜತೆ ಸೇರಿ ಅಂತ್ಯಕ್ರಿಯೆಯನ್ನೂ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ತಿಂಗಳ ಹಿಂದಷ್ಟೇ ಆ ಯುವತಿಯದ್ದು ಆತ್ಮಹತ್ಯೆ ಎಂದು ಘೋಷಿಸಲಾಗಿತ್ತು

ಮಗಳು ಯಾರೊಟ್ಟಿಗೋ ಲಿವ್-ಇನ್ ಸಂಬಂಧದಲ್ಲಿದ್ದಿದ್ದಕ್ಕೆ ಆಕೆಯ ಕೊಂದು, ಆತ್ಮಹತ್ಯೆಯ ಕಥೆ ಕಟ್ಟಿದ ತಂದೆ
ಸಂಬಂಧ
ನಯನಾ ರಾಜೀವ್
|

Updated on: Aug 14, 2025 | 7:56 AM

Share

ಅಹಮದಾಬಾದ್ ಆಗಸ್ಟ್​ 14: ಮಗಳು ಯಾರೊಂದಿಗೋ ಲಿವ್-ಇನ್ ಸಂಬಂಧ(Live-in Relationship)ದಲ್ಲಿರುವುದನ್ನು ತಿಳಿದ ತಂದೆ ಕೋಪಕ್ಕೆ ಆಕೆಯನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕಥೆ ಕಟ್ಟಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಮಗಳನ್ನು ಕೊಂದು ರಾತ್ರೋ ರಾತ್ರಿ ತನ್ನ ಸಹೋದರನ ಜತೆ ಸೇರಿ ಅಂತ್ಯಕ್ರಿಯೆಯನ್ನೂ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಎರಡು ತಿಂಗಳ ಹಿಂದಷ್ಟೇ ಆ ಯುವತಿಯದ್ದು ಆತ್ಮಹತ್ಯೆ ಎಂದು ಘೋಷಿಸಲಾಗಿತ್ತು, ಆದರೆ ಆಕೆಯ ಪ್ರಿಯಕರ ಗುಜರಾತ್ ಹೈಕೋರ್ಟ್​ ಮೊರೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ಹರೀಶ್ ಎಂಬುವವರು ಈ ವರ್ಷದ ಫೆಬ್ರವರಿಯಲ್ಲಿ ಪಾಲನ್‌ಪುರದಲ್ಲಿ ಚಂದ್ರಿಕಾಳನ್ನು ಭೇಟಿಯಾದರು ಇಬ್ಬರ ನಡುವೆ ಪ್ರೀತಿ ಚಿಗುರಿತ್ತು. ಒಮ್ಮೆ ಚಂದ್ರಿಕಾ ಮನೆಗೆ ಮರಳಿದಾಗ ಮತ್ತೆ ಕುಟುಂಬವು ಆಕೆಯನ್ನು ಪಾಲನ್​​ಪುರಕ್ಕೆ ಹಿಂದಿರುಗಲು ಅವಕಾಶ ನೀಡಲಿಲ್ಲ. ಇದರಿಂದ ಬಯಗೊಂಡ ಚಂದ್ರಿಕಾ ಹರೀಶ್​​ಗೆ ಸಂದೇಶ ಕಳುಹಿಸಿ, ಅವಳನ್ನು ಕರೆದುಕೊಂಡು ಹೋಗುವಂತೆ ಕೇಳಿಕೊಂಡಿದ್ದಳು.ಆಕೆಯ ಕುಟುಂಬವು ಆಕೆಯ ಮದುವೆಯನ್ನು ಬೇರೆ ವ್ಯಕ್ತಿಯ ಜತೆ ಮಾಡಬಹುದು ಎನ್ನುವ ಭಯವನ್ನೂ ವ್ಯಕ್ತಪಡಿಸಿದ್ದಳು. ಜೂನ್ 4ರಂದು ಹರೀಶ್​ ಚಂದ್ರಿಕಾರನ್ನು ಅಹಮದಾಬಾದ್​​ಗೆ ಕರೆದೊಯ್ದಿದ್ದರು.

ಅಲ್ಲಿ ಅವರು ಲಿವ್-ಇನ್ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಿದರು ಮತ್ತು ನಂತರ ಮಧ್ಯಪ್ರದೇಶ ಮತ್ತು ರಾಜಸ್ಥಾನದ ಮೂಲಕ ಪ್ರಯಾಣಿಸಿದ್ದರು. ಬಳಿಕ ಚಂದ್ರಿಕಾ ಕುಟುಂಬ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಜೂನ್ 12ರಂದು ಪೊಲೀಸರು ಅವರಿಬ್ಬರನ್ನು ಪತ್ತೆ ಮಾಡಿದ್ದರು, ಆಕೆಯನ್ನು ಕುಟುಂಬಕ್ಕೆ ಒಪ್ಪಿಸಿದ್ದರು.ಹರೀಶ್​ನನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: 16 ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದರೆ ಮಹಿಳೆ ಅತ್ಯಾಚಾರ ಆರೋಪ ಹೊರಿಸುವಂತಿಲ್ಲ

ಜೂನ್ 21 ರಂದು ಜೈಲಿನಿಂದ ಬಿಡುಗಡೆಯಾದಾಗ, ಅವರ ಫೋನ್ ಡೇಟಾ ಅಳಿಸಿಹೋಗಿರುವುದು ಕಂಡುಬಂದಿದೆ.ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ಪರಿಶೀಲಿಸಿದಾಗ, ಚಂದ್ರಿಕಾ ಅವರ ಹಲವಾರು ಸಂದೇಶಗಳು ಕಂಡುಬಂದಿದ್ದವು. ಅದರಲ್ಲಿ ಚಂದ್ರಿಕಾ ಮೆಸೇಜ್ ಇತ್ತು. ಬೇರೆ ಮದುವೆಗೆ ಪೋಷಕರು ಒತ್ತಾಯಿಸುತ್ತಿದ್ದಾರೆ ಎಂದು ಬರೆಯಲಾಗಿತ್ತು.

ನಂತರ ಹರೀಶ್​ ಗುಜರಾತ್ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದರು. ಜೂನ್ 24 ರಂದು ವಿಚಾರಣೆ ನಡೆಯುವ ಮೊದಲು, ಚಂದ್ರಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹೊರಬಿತ್ತು.ಆಕೆಯ ತಂದೆ ಹಾಗೂ ಚಿಕ್ಕಪ್ಪ ಆಕೆಯದ್ದು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು. ಹರೀಶ್​ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!