AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ, ಬೇರೆ ಜಾತಿಯವನ ಮದುವೆಯಾಗಿದ್ದಕ್ಕೆ ತಂದೆ, ಅಣ್ಣನಿಂದ ಯುವತಿಯ ಕೊಲೆ

ಯುವತಿ ಬೇರೆ ಜಾತಿಯವನನ್ನು ಪ್ರೀತಿಸಿ ಮನೆಯವರ ವಿರುದ್ಧವಾಗಿ ಮದುವೆಯಾಗಿದ್ದಳು. ಇದರಿಂದ ಕೋಪಗೊಂಡ ತಂದೆ ಮತ್ತು ಸಹೋದರ, ಗ್ರೇಟರ್ ನೋಯ್ಡಾದ ಚಿಪ್ಯಾನಾ ಗ್ರಾಮದ ಯುವತಿ ಮಲಗಿದ್ದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮಾಹಿತಿ ಪಡೆದ ಬಿಸ್ರಖ್ ಕೊತ್ವಾಲಿ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ನಡೆಸಿದರು ಮತ್ತು ಮೂರು ಗಂಟೆಗಳಲ್ಲಿ ಪ್ರಕರಣ ಭೇದಿಸಿದ್ದಾರೆ. ಕೊಲೆ ಆರೋಪಿ ತಂದೆ ಮತ್ತು ಸಹೋದರನನ್ನು ಬಂಧಿಸಿದರು. ಆರೋಪಿಗಳನ್ನು ಬಾಲಕಿಯ ತಂದೆ ಭಾನು ರಾಥೋಡ್ ಮತ್ತು ಸಹೋದರ ಹಿಮಾಂಶು ಎಂದು ಗುರುತಿಸಲಾಗಿದ್ದು, ಅವರು ಚಿಪ್ಯಾನಾ ನಿವಾಸಿಗಳು.

ಮರ್ಯಾದಾ ಹತ್ಯೆ, ಬೇರೆ ಜಾತಿಯವನ ಮದುವೆಯಾಗಿದ್ದಕ್ಕೆ ತಂದೆ, ಅಣ್ಣನಿಂದ ಯುವತಿಯ ಕೊಲೆ
ಆರೋಪಿಗಳು
ನಯನಾ ರಾಜೀವ್
|

Updated on: Mar 14, 2025 | 7:58 AM

Share

ನೋಯ್ಡಾ, ಮಾರ್ಚ್​ 14: ಬೇರೆ ಜಾತಿಯವನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ತಂದೆ ಹಾಗೂ ಅಣ್ಣ ಸೇರಿಕೊಂಡು ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಮಗಳ ಬೇರೆ ಜಾತಿಯ ಹುಡುಗನ್ನು ಪ್ರೀತಿಸುತ್ತಿದ್ದಾಳೆ ಎನ್ನುವ ವಿಚಾರ ಅರಗಿಸಿಕೊಳ್ಳಲಾಗದೆ ಮಗಳನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಅದಕ್ಕೆ ತಮ್ಮ ಮಗನ ಸಹಾಯವನ್ನೂ ಪಡೆದಿದ್ದರು.

ಯುವತಿಯನ್ನು ಕೊಂದ ನಂತರ, ಇಬ್ಬರೂ ಆಕೆಯ ದೇಹವನ್ನು ಸುಡುವ ಮಾಡುವ ಮೂಲಕ ಸಾಕ್ಷ್ಯವನ್ನು ನಾಶಮಾಡಲು ಪ್ರಯತ್ನಿಸಿದ್ದರು. ಇಬ್ಬರನ್ನೂ ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಸಂತ್ರಸ್ತೆ ನೇಹಾ ರಾಥೋಡ್ ಬೇರೆ ಜಾತಿಯ ವ್ಯಕ್ತಿಯೊಂದಿಗೆ ಹೊಂದಿದ್ದ ಪ್ರೇಮ ಸಂಬಂಧದಿಂದ ತಂದೆ-ಮಗ ಇಬ್ಬರೂ ಕೋಪಗೊಂಡಿದ್ದರು.

23 ವರ್ಷದ  ಯುವತಿ ಉತ್ತರ ಪ್ರದೇಶದ ಹಾಪುರ್ ನಿವಾಸಿ ಸೂರಜ್ ಜೊತೆ ಪ್ರೇಮ ಸಂಬಂಧ ಹೊಂದಿದ್ದರು. ಇದಕ್ಕೆ ಆಕೆಯ ಕುಟುಂಬದವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎಂದು ನೋಯ್ಡಾ ಸೆಂಟ್ರಲ್‌ನ ಡಿಸಿಪಿ ಶಕ್ತಿ ಮೋಹನ್ ಅವಸ್ಥಿ ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಸರ್ಕಾರಿ ಕೆಲಸಕ್ಕಾಗಿ ಗಂಡನನ್ನೇ ಕೊಂದ ಹೆಂಡತಿ; ಪೊಲೀಸ್‌ ತನಿಖೆಯಲ್ಲಿ ಕೊಲೆ ರಹಸ್ಯ ಬಯಲು

ಆಕೆಯ ಕುಟುಂಬವು ಸೂರಜ್‌ನನ್ನು ಭೇಟಿಯಾಗುವುದನ್ನು ಹಲವು ಬಾರಿ ತಡೆದಿತ್ತು, ಆದರೆ ಅವಳು ಈ ಎಲ್ಲವನ್ನೂ ಧಿಕ್ಕರಿಸಿ ಮಾರ್ಚ್ 11 ರಂದು ಗಾಜಿಯಾಬಾದ್‌ನ ಆರ್ಯ ಸಮಾಜ ಮಂದಿರದಲ್ಲಿ ಸೂರಜ್‌ನನ್ನು ವಿವಾಹವಾಗಿದ್ದಳು. ಅವರ ವಿವಾಹದ ಬಗ್ಗೆ ಮಾಹಿತಿ ಪಡೆದ ನಂತರ, ಆರೋಪಿ ಭಾನು ರಾಥೋಡ್ ಮತ್ತು ಅವರ ಮಗ ಹಿಮಾಂಶು ರಾಥೋಡ್ ಮಾರ್ಚ್ 12 ರ ಬೆಳಗ್ಗೆ ನೇಹಾಳನ್ನು ಕೊಲೆ ಮಾಡಿದ್ದರು.

ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು. ಪೊಲೀಸ್ ಕ್ಷೇತ್ರ ಘಟಕವು ಅಪರಾಧದ ಸ್ಥಳವನ್ನು ಪರಿಶೀಲಿಸಿತು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಸ್ಕ್ಯಾನ್ ಮಾಡಲಾಗಿದ್ದು, ಇತರ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರೂ ಹಾಪುರದಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದಾಗಿನಿಂದ ಒಬ್ಬರಿಗೊಬ್ಬರು ಪರಿಚಿತರಾಗಿದ್ದರು. ಆ ಯುವಕ ಪ್ರಸ್ತುತ ಹಾಪುರದಲ್ಲಿ ಪಿಕಪ್ ಟ್ರಕ್ ಓಡಿಸುತ್ತಾನೆ. ಆ ಯುವಕರು ಜಾಟ್ ಸಮುದಾಯಕ್ಕೆ ಸೇರಿದವನಾಗಿದ್ದು. ಆದರೆ ಹುಡುಗಿ ತೇಲಿ ಸಮುದಾಯಕ್ಕೆ ಸೇರಿದವಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ