AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾತೀರದಲ್ಲಿ ದೋಣಿಯಲ್ಲಿ ಕುಳಿತು ಹುಕ್ಕಾ ಪಾರ್ಟಿ, ಮಾಂಸಹಾರ ಸೇವನೆ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಇಬ್ಬರು ಪರಿಚಿತ ಮತ್ತು ಆರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಂಗಾತೀರದಲ್ಲಿ ದೋಣಿಯಲ್ಲಿ ಕುಳಿತು ಹುಕ್ಕಾ ಪಾರ್ಟಿ, ಮಾಂಸಹಾರ ಸೇವನೆ; 8 ಮಂದಿ ವಿರುದ್ಧ ಪ್ರಕರಣ ದಾಖಲು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 01, 2022 | 5:05 PM

Share

ಪ್ರಯಾಗರಾಜ್: ಪ್ರತಿದಿನ ಸಾವಿರಾರು ಜನರು ಭೇಟಿ ನೀಡುವ ಗಂಗಾ ಮತ್ತು ಯಮುನಾ ನದಿಗಳ ಸಂಗಮ ಸ್ಥಳವಾದ ‘ಸಂಗಮ್’ ಬಳಿ ದೋಣಿಯಲ್ಲಿ ‘ಹುಕ್ಕಾ ಪಾರ್ಟಿ’ ನಡೆಸುತ್ತಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ (Prayagraj) ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಕೋಳಿ ಬೇಯಿಸುವುದು ಕೂಡಾ ವಿಡಿಯೊದಲ್ಲಿದೆ. ಇಬ್ಬರು ಪರಿಚಿತ ಮತ್ತು ಆರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರೋಪಿಗಳ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಆರೋಪಿಗಳ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಹಾಗೂ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಆರೋಪ ಹೊರಿಸಲಾಗಿದೆ. ಮೂರು ದಿನಗಳ ಹಿಂದೆ ವೈರಲ್ ಆಗಿರುವ 30 ಸೆಕೆಂಡ್ ಗಳ ವಿಡಿಯೊದಲ್ಲಿ ಬಿಳಿ ಅಂಗಿ ಧರಿಸಿದ ವ್ಯಕ್ತಿಯೊಬ್ಬ ದೋಣಿಯಲ್ಲಿ ಹುಕ್ಕಾ ಸೇದುತ್ತಿರುವುದು ಕಾಣುತ್ತದೆ. ಕ್ಯಾಮೆರಾ ಕಣ್ಣುಗಳು ನಂತರ ದೋಣಿಯಲ್ಲಿ ಸುಟ್ಟ ಕಬಾಬ್‌ಗಳನ್ನು ತೋರಿಸುತ್ತದೆ. ಅವನ ಸುತ್ತಲೂ ಇತರರೂ ಕುಳಿತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಸುತ್ತಮುತ್ತಲಿನ ಇತರ ದೋಣಿಗಳನ್ನು ತೋರಿಸಲು ಕ್ಯಾಮರಾ ಮತ್ತೆ ಬೇರೆಡೆಗೆ ತಿರುಗುತ್ತದೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಯಾಗ್‌ರಾಜ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ಹುಕ್ಕಾ ಮತ್ತು ಮಾಂಸಾಹಾರಿ ಆಹಾರ ಎರಡನ್ನೂ ತೋರಿಸುತ್ತದೆ. ನಾವು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪ್ರಯಾಗರಾಜ್ ಪೊಲೀಸ್ ಮುಖ್ಯಸ್ಥ ಶೈಲೇಶ್ ಪಾಂಡೆ ವೀಡಿಯೊ ವೈರಲ್ ಆದ ದಿನದಂದು ಹೇಳಿದ್ದರು.

Published On - 4:52 pm, Thu, 1 September 22

Follow Us
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ