AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾತೀರದಲ್ಲಿ ದೋಣಿಯಲ್ಲಿ ಕುಳಿತು ಹುಕ್ಕಾ ಪಾರ್ಟಿ, ಮಾಂಸಹಾರ ಸೇವನೆ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಇಬ್ಬರು ಪರಿಚಿತ ಮತ್ತು ಆರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಂಗಾತೀರದಲ್ಲಿ ದೋಣಿಯಲ್ಲಿ ಕುಳಿತು ಹುಕ್ಕಾ ಪಾರ್ಟಿ, ಮಾಂಸಹಾರ ಸೇವನೆ; 8 ಮಂದಿ ವಿರುದ್ಧ ಪ್ರಕರಣ ದಾಖಲು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 01, 2022 | 5:05 PM

ಪ್ರಯಾಗರಾಜ್: ಪ್ರತಿದಿನ ಸಾವಿರಾರು ಜನರು ಭೇಟಿ ನೀಡುವ ಗಂಗಾ ಮತ್ತು ಯಮುನಾ ನದಿಗಳ ಸಂಗಮ ಸ್ಥಳವಾದ ‘ಸಂಗಮ್’ ಬಳಿ ದೋಣಿಯಲ್ಲಿ ‘ಹುಕ್ಕಾ ಪಾರ್ಟಿ’ ನಡೆಸುತ್ತಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ (Prayagraj) ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಕೋಳಿ ಬೇಯಿಸುವುದು ಕೂಡಾ ವಿಡಿಯೊದಲ್ಲಿದೆ. ಇಬ್ಬರು ಪರಿಚಿತ ಮತ್ತು ಆರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರೋಪಿಗಳ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಆರೋಪಿಗಳ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಹಾಗೂ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಆರೋಪ ಹೊರಿಸಲಾಗಿದೆ. ಮೂರು ದಿನಗಳ ಹಿಂದೆ ವೈರಲ್ ಆಗಿರುವ 30 ಸೆಕೆಂಡ್ ಗಳ ವಿಡಿಯೊದಲ್ಲಿ ಬಿಳಿ ಅಂಗಿ ಧರಿಸಿದ ವ್ಯಕ್ತಿಯೊಬ್ಬ ದೋಣಿಯಲ್ಲಿ ಹುಕ್ಕಾ ಸೇದುತ್ತಿರುವುದು ಕಾಣುತ್ತದೆ. ಕ್ಯಾಮೆರಾ ಕಣ್ಣುಗಳು ನಂತರ ದೋಣಿಯಲ್ಲಿ ಸುಟ್ಟ ಕಬಾಬ್‌ಗಳನ್ನು ತೋರಿಸುತ್ತದೆ. ಅವನ ಸುತ್ತಲೂ ಇತರರೂ ಕುಳಿತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಸುತ್ತಮುತ್ತಲಿನ ಇತರ ದೋಣಿಗಳನ್ನು ತೋರಿಸಲು ಕ್ಯಾಮರಾ ಮತ್ತೆ ಬೇರೆಡೆಗೆ ತಿರುಗುತ್ತದೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಯಾಗ್‌ರಾಜ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ಹುಕ್ಕಾ ಮತ್ತು ಮಾಂಸಾಹಾರಿ ಆಹಾರ ಎರಡನ್ನೂ ತೋರಿಸುತ್ತದೆ. ನಾವು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪ್ರಯಾಗರಾಜ್ ಪೊಲೀಸ್ ಮುಖ್ಯಸ್ಥ ಶೈಲೇಶ್ ಪಾಂಡೆ ವೀಡಿಯೊ ವೈರಲ್ ಆದ ದಿನದಂದು ಹೇಳಿದ್ದರು.

Published On - 4:52 pm, Thu, 1 September 22

ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ