AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾತೀರದಲ್ಲಿ ದೋಣಿಯಲ್ಲಿ ಕುಳಿತು ಹುಕ್ಕಾ ಪಾರ್ಟಿ, ಮಾಂಸಹಾರ ಸೇವನೆ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಇಬ್ಬರು ಪರಿಚಿತ ಮತ್ತು ಆರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಂಗಾತೀರದಲ್ಲಿ ದೋಣಿಯಲ್ಲಿ ಕುಳಿತು ಹುಕ್ಕಾ ಪಾರ್ಟಿ, ಮಾಂಸಹಾರ ಸೇವನೆ; 8 ಮಂದಿ ವಿರುದ್ಧ ಪ್ರಕರಣ ದಾಖಲು
TV9 Web
| Edited By: |

Updated on:Sep 01, 2022 | 5:05 PM

Share

ಪ್ರಯಾಗರಾಜ್: ಪ್ರತಿದಿನ ಸಾವಿರಾರು ಜನರು ಭೇಟಿ ನೀಡುವ ಗಂಗಾ ಮತ್ತು ಯಮುನಾ ನದಿಗಳ ಸಂಗಮ ಸ್ಥಳವಾದ ‘ಸಂಗಮ್’ ಬಳಿ ದೋಣಿಯಲ್ಲಿ ‘ಹುಕ್ಕಾ ಪಾರ್ಟಿ’ ನಡೆಸುತ್ತಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ (Prayagraj) ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಕೋಳಿ ಬೇಯಿಸುವುದು ಕೂಡಾ ವಿಡಿಯೊದಲ್ಲಿದೆ. ಇಬ್ಬರು ಪರಿಚಿತ ಮತ್ತು ಆರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರೋಪಿಗಳ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಆರೋಪಿಗಳ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಹಾಗೂ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಆರೋಪ ಹೊರಿಸಲಾಗಿದೆ. ಮೂರು ದಿನಗಳ ಹಿಂದೆ ವೈರಲ್ ಆಗಿರುವ 30 ಸೆಕೆಂಡ್ ಗಳ ವಿಡಿಯೊದಲ್ಲಿ ಬಿಳಿ ಅಂಗಿ ಧರಿಸಿದ ವ್ಯಕ್ತಿಯೊಬ್ಬ ದೋಣಿಯಲ್ಲಿ ಹುಕ್ಕಾ ಸೇದುತ್ತಿರುವುದು ಕಾಣುತ್ತದೆ. ಕ್ಯಾಮೆರಾ ಕಣ್ಣುಗಳು ನಂತರ ದೋಣಿಯಲ್ಲಿ ಸುಟ್ಟ ಕಬಾಬ್‌ಗಳನ್ನು ತೋರಿಸುತ್ತದೆ. ಅವನ ಸುತ್ತಲೂ ಇತರರೂ ಕುಳಿತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಸುತ್ತಮುತ್ತಲಿನ ಇತರ ದೋಣಿಗಳನ್ನು ತೋರಿಸಲು ಕ್ಯಾಮರಾ ಮತ್ತೆ ಬೇರೆಡೆಗೆ ತಿರುಗುತ್ತದೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಯಾಗ್‌ರಾಜ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ಹುಕ್ಕಾ ಮತ್ತು ಮಾಂಸಾಹಾರಿ ಆಹಾರ ಎರಡನ್ನೂ ತೋರಿಸುತ್ತದೆ. ನಾವು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪ್ರಯಾಗರಾಜ್ ಪೊಲೀಸ್ ಮುಖ್ಯಸ್ಥ ಶೈಲೇಶ್ ಪಾಂಡೆ ವೀಡಿಯೊ ವೈರಲ್ ಆದ ದಿನದಂದು ಹೇಳಿದ್ದರು.

Published On - 4:52 pm, Thu, 1 September 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ