AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್‌ಗೆ ಪ್ರಯಾಣಿಸಲಿರುವ ಅಡ್ಡಿ ಶೀಘ್ರ ಪರಿಹಾರ: ಅದಾರ್ ಪೂನಾವಾಲಾ ಭರವಸೆ

Adar Poonawalla: ಕೊವಿಶೀಲ್ಡ್ ಅನ್ನು ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪ್ ರಾಷ್ಟ್ರಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಂಡಿದ್ದೇನೆ.

ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್‌ಗೆ ಪ್ರಯಾಣಿಸಲಿರುವ ಅಡ್ಡಿ ಶೀಘ್ರ ಪರಿಹಾರ: ಅದಾರ್ ಪೂನಾವಾಲಾ ಭರವಸೆ
ಅದಾರ್ ಪೂನಾವಾಲ
TV9 Web
| Edited By: |

Updated on: Jun 28, 2021 | 4:39 PM

Share

ದೆಹಲಿ: ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್‌ಗೆ ಪ್ರಯಾಣಿಸಲು ಇರುವ ಅಡ್ಡಿಯನ್ನು ಶೀಘ್ರ ದಲ್ಲೇ ಬಗೆಹರಿಸಿಕೊಡುವುದಾಗಿ ಸೆರಮ್ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲಾ ಭರವಸೆ ನೀಡಿದ್ದಾರೆ. ಕೊವಿಶೀಲ್ಡ್ ಎಂಬುದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ-ಅಸ್ಟ್ರಾಜೆನೆಕಾ ಲಸಿಕೆ, ಇದನ್ನು ಪುಣೆ ಮೂಲದ ಸೆರಮ್ ಲಸಿಕೆ ತಯಾರಕರು ಭಾರತದಲ್ಲಿ ತಯಾರಿಸುತ್ತಾರೆ.

ಕೊವಿಶೀಲ್ಡ್ ಅನ್ನು ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪ್ ರಾಷ್ಟ್ರಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಂಡಿದ್ದೇನೆ. ಆಯಾ ದೇಶಗಳ ನಿಯಂತ್ರಣ ಪ್ರಾಧಿಕಾರಗಳು ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಈ ವಿಷಯವನ್ನು ಶೀಘ್ರದಲ್ಲೇ ಪರಿಹರಿಸಲು ಆಶಿಸುತ್ತೇನೆ. ”ಎಂದು ಪೂನಾವಾಲಾ ಟ್ವೀಟ್ ನಲ್ಲಿ ಹೇಳಿದ್ದಾರೆ.

Covishield ಮಾಧ್ಯಮ ವರದಿಗಳ ಪ್ರಕಾರ ಸೆರಮ್ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾದ ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್ ಒಕ್ಕೂಟದ ‘ಗ್ರೀನ್ ಪಾಸ್’ ಪಡೆಯಲು ಅರ್ಹರಲ್ಲ ಎನ್ನಲಾಗಿದೆ.

ಈಗಿನಂತೆ ಯುರೋಪ್ ಒಕ್ಕೂಟದ (EU) ವ್ಯಾಕ್ಸ್‌ಜೆವ್ರಿಯಾವನ್ನು (ಈ ಹಿಂದೆ ಕೊವಿಡ್-19 ಲಸಿಕೆ ಅಸ್ಟ್ರಾಜೆನೆಕಾ, ಆಕ್ಸ್‌ಫರ್ಡ್) ಅಂಗೀಕರಿಸುತ್ತದೆ. ಯುರೋಪಿಯನ್ ಮೆಡಿಸಿನ್ ಏಜೆನ್ಸಿ ಅನುಮೋದಿಸಿದ ಇತರ ಲಸಿಕೆಗಳು ಬಯೋಟೆಕ್-ಫೈಜರ್, ಮಾಡರ್ನಾ ಮತ್ತು ಜಾನ್ಸೆನ್ (ಜಾನ್ಸನ್ ಮತ್ತು ಜಾನ್ಸನ್) ಆಗಿದೆ.

ಇದನ್ನೂ ಓದಿ: Covishield SIIನ ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಯುರೋಪಿಯನ್ ಯೂನಿಯನ್‌ಗೆ ನೋ ಎಂಟ್ರಿ..

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ