Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್‌ಗೆ ಪ್ರಯಾಣಿಸಲಿರುವ ಅಡ್ಡಿ ಶೀಘ್ರ ಪರಿಹಾರ: ಅದಾರ್ ಪೂನಾವಾಲಾ ಭರವಸೆ

Adar Poonawalla: ಕೊವಿಶೀಲ್ಡ್ ಅನ್ನು ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪ್ ರಾಷ್ಟ್ರಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಂಡಿದ್ದೇನೆ.

ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್‌ಗೆ ಪ್ರಯಾಣಿಸಲಿರುವ ಅಡ್ಡಿ ಶೀಘ್ರ ಪರಿಹಾರ: ಅದಾರ್ ಪೂನಾವಾಲಾ ಭರವಸೆ
ಅದಾರ್ ಪೂನಾವಾಲ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 28, 2021 | 4:39 PM

ದೆಹಲಿ: ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್‌ಗೆ ಪ್ರಯಾಣಿಸಲು ಇರುವ ಅಡ್ಡಿಯನ್ನು ಶೀಘ್ರ ದಲ್ಲೇ ಬಗೆಹರಿಸಿಕೊಡುವುದಾಗಿ ಸೆರಮ್ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲಾ ಭರವಸೆ ನೀಡಿದ್ದಾರೆ. ಕೊವಿಶೀಲ್ಡ್ ಎಂಬುದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ-ಅಸ್ಟ್ರಾಜೆನೆಕಾ ಲಸಿಕೆ, ಇದನ್ನು ಪುಣೆ ಮೂಲದ ಸೆರಮ್ ಲಸಿಕೆ ತಯಾರಕರು ಭಾರತದಲ್ಲಿ ತಯಾರಿಸುತ್ತಾರೆ.

ಕೊವಿಶೀಲ್ಡ್ ಅನ್ನು ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪ್ ರಾಷ್ಟ್ರಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಂಡಿದ್ದೇನೆ. ಆಯಾ ದೇಶಗಳ ನಿಯಂತ್ರಣ ಪ್ರಾಧಿಕಾರಗಳು ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಈ ವಿಷಯವನ್ನು ಶೀಘ್ರದಲ್ಲೇ ಪರಿಹರಿಸಲು ಆಶಿಸುತ್ತೇನೆ. ”ಎಂದು ಪೂನಾವಾಲಾ ಟ್ವೀಟ್ ನಲ್ಲಿ ಹೇಳಿದ್ದಾರೆ.

Covishield ಮಾಧ್ಯಮ ವರದಿಗಳ ಪ್ರಕಾರ ಸೆರಮ್ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾದ ಕೊವಿಶೀಲ್ಡ್ ಲಸಿಕೆ ಪಡೆದವರು ಯುರೋಪ್ ಒಕ್ಕೂಟದ ‘ಗ್ರೀನ್ ಪಾಸ್’ ಪಡೆಯಲು ಅರ್ಹರಲ್ಲ ಎನ್ನಲಾಗಿದೆ.

ಈಗಿನಂತೆ ಯುರೋಪ್ ಒಕ್ಕೂಟದ (EU) ವ್ಯಾಕ್ಸ್‌ಜೆವ್ರಿಯಾವನ್ನು (ಈ ಹಿಂದೆ ಕೊವಿಡ್-19 ಲಸಿಕೆ ಅಸ್ಟ್ರಾಜೆನೆಕಾ, ಆಕ್ಸ್‌ಫರ್ಡ್) ಅಂಗೀಕರಿಸುತ್ತದೆ. ಯುರೋಪಿಯನ್ ಮೆಡಿಸಿನ್ ಏಜೆನ್ಸಿ ಅನುಮೋದಿಸಿದ ಇತರ ಲಸಿಕೆಗಳು ಬಯೋಟೆಕ್-ಫೈಜರ್, ಮಾಡರ್ನಾ ಮತ್ತು ಜಾನ್ಸೆನ್ (ಜಾನ್ಸನ್ ಮತ್ತು ಜಾನ್ಸನ್) ಆಗಿದೆ.

ಇದನ್ನೂ ಓದಿ: Covishield SIIನ ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಯುರೋಪಿಯನ್ ಯೂನಿಯನ್‌ಗೆ ನೋ ಎಂಟ್ರಿ..

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?