AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: 50 ವರ್ಷಗಳಲ್ಲಿ 20 ಬಾರಿ ಚುನಾವಣೆಯಲ್ಲಿ ಸೋತಿದ್ದರೂ ಕುಗ್ಗದ ಉತ್ಸಾಹ, ಮತ್ತೆ ನಿಲ್ತೇನೆ ಎಂದ ತೀತರ್ ಸಿಂಗ್

ತೀತರ್(Teetar Singh)​ ಸಿಂಗ್​ಗೆ ಈಗ 78 ವರ್ಷ ವಯಸ್ಸು, ಕಳೆದ 50 ವರ್ಷಗಳಿಂದ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾ ಬಂದಿದ್ದಾರೆ. 20 ಚುನಾವಣೆಯಲ್ಲಿ ಸ್ಪರ್ಧಿಸಿರುವ ಅವರು ನಿರಂತರವಾಗಿ ಸೋಲು ಕಂಡಿದ್ದಾರೆ. ಆದರೂ ಆತ್ಮವಿಶ್ವಾಸ, ಉತ್ಸಾಹ ಕಳೆದುಕೊಂಡಿಲ್ಲ ಇದೀಗ ರಾಜಸ್ಥಾನದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುತ್ತಿದ್ದಾರೆ. ಅವರ ನಾಮಪತ್ರ ಸಲ್ಲಿಸಿದ್ದು, ನವೆಂಬರ್ 25ರಂದು ನಡೆಯಲಿರುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.

ರಾಜಸ್ಥಾನ: 50 ವರ್ಷಗಳಲ್ಲಿ 20 ಬಾರಿ ಚುನಾವಣೆಯಲ್ಲಿ ಸೋತಿದ್ದರೂ ಕುಗ್ಗದ ಉತ್ಸಾಹ, ಮತ್ತೆ ನಿಲ್ತೇನೆ ಎಂದ ತೀತರ್ ಸಿಂಗ್
ತೀತರ್ ಸಿಂಗ್Image Credit source: Etv Bharat
ನಯನಾ ರಾಜೀವ್
|

Updated on: Nov 07, 2023 | 11:16 AM

Share

ತೀತರ್(Teetar Singh)​ ಸಿಂಗ್​ಗೆ ಈಗ 78 ವರ್ಷ ವಯಸ್ಸು, ಕಳೆದ 50 ವರ್ಷಗಳಿಂದ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾ ಬಂದಿದ್ದಾರೆ. 20 ಚುನಾವಣೆಯಲ್ಲಿ ಸ್ಪರ್ಧಿಸಿರುವ ಅವರು ನಿರಂತರವಾಗಿ ಸೋಲು ಕಂಡಿದ್ದಾರೆ. ಆದರೂ ಆತ್ಮವಿಶ್ವಾಸ, ಉತ್ಸಾಹ ಕಳೆದುಕೊಂಡಿಲ್ಲ ಇದೀಗ ರಾಜಸ್ಥಾನದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುತ್ತಿದ್ದಾರೆ. ಅವರ ನಾಮಪತ್ರ ಸಲ್ಲಿಸಿದ್ದು, ನವೆಂಬರ್ 25ರಂದು ನಡೆಯಲಿರುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.

ವಿಶೇಷವೆಂದರೆ ಪ್ರತಿ ಬಾರಿಯೂ ತೀತರ್ ಸಿಂಗ್ ಅವರ ಜಮೀನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದರೂ ಚುನಾವಣೆಗೆ ಸ್ಪರ್ಧಿಸುವ ಗೀಳು ಹೊಂದಿದ್ದಾರೆ.

ಸಾರ್ವಜನಿಕರ ಪ್ರತಿನಿಧಿಯಾಗುವ ಮೂಲಕ ಬಡವರ ಉದ್ಧಾರವಾಗಬೇಕು ಎನ್ನುತ್ತಾರೆ. ಐದನೇ ತರಗತಿವರೆಗೆ ಓದಿದ್ದಾರೆ, ವಯಸ್ಸಾಗುತ್ತಿದ್ದಂತೆ ಓದುವುದು, ಬರೆಯುವುದು ಹೇಗೆ ಎಂಬುದು ಮರೆತುಹೋಗಿದೆ. 2013ರ ವಿಧಾನಸಭೆ ಚುನಾವಣೆಯಲ್ಲಿ ತೀತರ್ ಸಿಂಗ್ 427 ಮತಗಳು ಮತ್ತು 2018ರಲ್ಲಿ 653 ಮತಗಳನ್ನು ಪಡೆದಿದ್ದರು.

ಅವರ ಕುಟುಂಬವು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದೆ, ನಾಮಪತ್ರ ಸಲ್ಲಿಸಲು ಕೆಲವು ಬಾರಿ ಮೇಕೆ, ಗೃಹಪಯೋಗಿ ವಸ್ತುಗಳನ್ನು ಮಾರಾಟ ಮಾಡಿದ್ದರು.

ಎರಡು ಡಜನ್ ಮೇಕೆಗಳಲ್ಲಿ ಈಗ 3 ಮೇಕೆಗಳು ಮಾತ್ರ ಉಳಿದಿವೆ, ಈ ಬಾರಿ ಸಾಲ ಮಾಡಿ, ದೇಣಿಗೆ ಸಂಗ್ರಹಿಸಿ ನಾಮಪತ್ರ ಸಲ್ಲಿಸಿದ್ದಾರೆ. ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಎಲ್ಲರಿಗೂ ವಿವಾಹವಾಗಿದೆ.

ಮತ್ತಷ್ಟು ಓದಿ: ರಾಜಸ್ಥಾನ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ

ನಾನು ಜನಪ್ರಿಯತೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಜನರಿಗೆ ಸರ್ಕಾರವು ಭೂಮಿ, ಸೌಲಭ್ಯಗಳನ್ನು ನೀಡಬೇಕು ಎಂದರು. ಪಂಚಾಯತಿಯಿಂದ ಲೋಕಸಭೆ ಚುನಾವಣೆಯವರೆಗೆ ಪ್ರತಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಆದರೆ ಪ್ರತಿ ಬಾರಿಯೂ ಸೋಲನ್ನು ಎದುರಿಸಿದ್ದೇನೆ.

ಭೂರಹಿತರು ಮತ್ತು ಬಡ ಕೂಲಿಕಾರ್ಮಿಕರಿಗೆ ಸರ್ಕಾರ ಭೂಮಿ ಮಂಜೂರು ಮಾಡಬೇಕೆಂಬುದು ಅವರ ಬೇಡಿಕೆಯಾಗಿತ್ತು ಮತ್ತು ಇದರೊಂದಿಗೆ ಅವರು ಅವಕಾಶ ಸಿಕ್ಕಾಗಲೆಲ್ಲಾ ಚುನಾವಣಾ ಕಣಕ್ಕೆ ಇಳಿಯಲು ಪ್ರಾರಂಭಿಸಿದರು.

ಅವರು ಒಂದರ ನಂತರ ಒಂದರಂತೆ ಚುನಾವಣೆಗೆ ಸ್ಪರ್ಧಿಸಿದರು ಆದರೆ ಭೂಮಿ ಮಂಜೂರು ಮಾಡಬೇಕೆಂಬ ಅವರ ಬೇಡಿಕೆ ಇನ್ನೂ ಈಡೇರಿಲ್ಲ ಮತ್ತು ಅವರ ಪುತ್ರರೂ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ ಎಂದು ಸಿಂಗ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!