AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಕೇವಲ 20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ

ಬಿಡಿಗಾಸಿಗಾಗಿ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.

Haryana: ಕೇವಲ 20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ
ಕ್ರೈಂ
ನಯನಾ ರಾಜೀವ್
|

Updated on: Jul 21, 2025 | 9:03 AM

Share

ನೂಹ್, ಜುಲೈ 21: ಹಣ ಕೊಡಲಿಲ್ಲ ಎನ್ನವು ಕೋಪದಲ್ಲಿ ಮಗನೊಬ್ಬ ಹೆತ್ತ ತಾಯಿಯನ್ನೇ ಕಡಿದು ಕೊಲೆ(Murder) ಮಾಡಿರುವ ಘಟನೆ ಹರ್ಯಾಣದ ನೂಹ್​ನಲ್ಲಿ ನಡೆದಿದೆ. ಕೇವಲ 20 ರೂಪಾಯಿಗಾಗಿ 56 ವರ್ಷದ ತಾಯಿಯನ್ನು ಮಗ ಹತ್ಯೆ ಮಾಡಿದ್ದಾನೆ. ಜೈಸಿಂಗ್‌ಪುರ ಗ್ರಾಮದಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಗ ಮಾದಕ ವ್ಯಸನಿಯಾಗಿದ್ದು, ಬಹಳ ದಿನಗಳಿಂದ ಗಾಂಜಾ ಮತ್ತು ಅಫೀಮು ಸೇವಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.

ಎಫ್​ಐಆರ್ ದಾಖಲಿಸಲಾಗಿದೆ, ಮರಣೋತ್ತರ ಪರೀಕ್ಷೆಯ ನಂತರ ರಾಜಿಯಾ ಅವರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ರಾಜಿಯಾ ಅವರ ಪತಿ ಮುಬಾರಕ್ ಕೇವಲ ನಾಲ್ಕು ತಿಂಗಳ ಹಿಂದೆ ನಿಧನರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ತಮಿಳುನಾಡು: ಪೊಲೀಸ್​ ಠಾಣೆ ಬಳಿ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿಯ ಬರ್ಬರ ಹತ್ಯೆ

ಮತ್ತೊಂದು ಘಟನೆ ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ(Murder) ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.

ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.

ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಕೊಲೆಯಲ್ಲಿ ಆಕೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯಿಂದ ಬೇರ್ಪಟ್ಟಿರುವ ಮಗುವಿನ ತಂದೆ ಕೂಡ ಪೊಲೀಸರಲ್ಲಿ ಹೇಳಿಕೆ ದಾಖಲಿಸಿದ್ದಾರೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್