AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana: ಕೇವಲ 20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ

ಬಿಡಿಗಾಸಿಗಾಗಿ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.

Haryana: ಕೇವಲ 20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ
ಕ್ರೈಂ
ನಯನಾ ರಾಜೀವ್
|

Updated on: Jul 21, 2025 | 9:03 AM

Share

ನೂಹ್, ಜುಲೈ 21: ಹಣ ಕೊಡಲಿಲ್ಲ ಎನ್ನವು ಕೋಪದಲ್ಲಿ ಮಗನೊಬ್ಬ ಹೆತ್ತ ತಾಯಿಯನ್ನೇ ಕಡಿದು ಕೊಲೆ(Murder) ಮಾಡಿರುವ ಘಟನೆ ಹರ್ಯಾಣದ ನೂಹ್​ನಲ್ಲಿ ನಡೆದಿದೆ. ಕೇವಲ 20 ರೂಪಾಯಿಗಾಗಿ 56 ವರ್ಷದ ತಾಯಿಯನ್ನು ಮಗ ಹತ್ಯೆ ಮಾಡಿದ್ದಾನೆ. ಜೈಸಿಂಗ್‌ಪುರ ಗ್ರಾಮದಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಗ ಮಾದಕ ವ್ಯಸನಿಯಾಗಿದ್ದು, ಬಹಳ ದಿನಗಳಿಂದ ಗಾಂಜಾ ಮತ್ತು ಅಫೀಮು ಸೇವಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ ಸ್ಥಿತಿಯಲ್ಲಿದ್ದ ತಾಯಿ ಜತೆಯೇ ಒಂದೇ ಮನೆಯಲ್ಲಿ ಆತ ಇಡೀ ರಾತ್ರಿ ಕಳೆದಿದ್ದಾನೆ. ಶನಿವಾರ ರಾತ್ರಿ ಜೆಮ್ಶೆಡ್ ಎಂಬಾತ ತಾಯಿ ರಜಿಯಾ ಬಳಿ 20 ರೂ. ಕೊಡುವಂತೆ ಕೇಳಿದ್ದ. ಆದರೆ ಅವರು ನಿರಾಕರಿಸಿದ್ದರು. ಅದಕ್ಕೆ ಕೋಪಗೊಂಡ ಮಗ ತಾಯಿಯನ್ನು ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.

ಎಫ್​ಐಆರ್ ದಾಖಲಿಸಲಾಗಿದೆ, ಮರಣೋತ್ತರ ಪರೀಕ್ಷೆಯ ನಂತರ ರಾಜಿಯಾ ಅವರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ರಾಜಿಯಾ ಅವರ ಪತಿ ಮುಬಾರಕ್ ಕೇವಲ ನಾಲ್ಕು ತಿಂಗಳ ಹಿಂದೆ ನಿಧನರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ತಮಿಳುನಾಡು: ಪೊಲೀಸ್​ ಠಾಣೆ ಬಳಿ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿಯ ಬರ್ಬರ ಹತ್ಯೆ

ಮತ್ತೊಂದು ಘಟನೆ ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ(Murder) ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.

ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.

ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಕೊಲೆಯಲ್ಲಿ ಆಕೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯಿಂದ ಬೇರ್ಪಟ್ಟಿರುವ ಮಗುವಿನ ತಂದೆ ಕೂಡ ಪೊಲೀಸರಲ್ಲಿ ಹೇಳಿಕೆ ದಾಖಲಿಸಿದ್ದಾರೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ