AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಮೇಲೆ ದಾಳಿ ನಡೆಸಿ ಅರೆ ಜೀವ ಮಾಡಿದ ಹಸು

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಬಾಲಕಿ ಮೇಲೆ ಹಸುವೊಂದು ದಾಳಿ ನಡೆಸಿರುವ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ. ಬಾಲಕಿ ತಾಯಿ ಹಾಗೂ ತನ್ನ 5 ವರ್ಷದ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ

ತಮಿಳುನಾಡು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಮೇಲೆ ದಾಳಿ ನಡೆಸಿ ಅರೆ ಜೀವ ಮಾಡಿದ ಹಸು
ಹಸು ದಾಳಿ
Follow us
ನಯನಾ ರಾಜೀವ್
|

Updated on: Aug 11, 2023 | 10:06 AM

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಬಾಲಕಿ ಮೇಲೆ ಹಸುವೊಂದು ದಾಳಿ ನಡೆಸಿರುವ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ. ಬಾಲಕಿ ತಾಯಿ ಹಾಗೂ ತನ್ನ 5 ವರ್ಷದ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ನಡೆದುಕೊಂಡು ಹೋಗುತ್ತಿರುವಾಗ ಎರಡು ಹಸುಗಳು ಬಂದಿವೆ, ಅದರಲ್ಲಿ ಒಂದು ಹಸು ಬಾಲಕಿ ಮೇಲೆ ಕೋಡಗಿನಿಂದ ತಿವಿದು, ಕಾಲಿನಿಂದ ಮೆಟ್ಟಿ ದಾಳಿ ನಡೆಸಿ ಅರೆ ಜೀವ ಮಾಡಿದೆ.

ಆಕೆಯ ತಾಯಿ ಮಗಳ ಸಹಾಯಕ್ಕೆಂದು ಮುಂದಾದರೂ ಆ ಹಸು ತಾಯಿಯನ್ನು ಗದರಿಸಿ ಬಾಲಕಿ ಮೇಲೆ ದಾಳಿ ಮಾಡಿದೆ. ಕೊನೆಗೆ ಅಲ್ಲಿದ್ದವರು ಕಲ್ಲು, ಇಟ್ಟಿಗೆಗಳನ್ನು ಹಸುವಿನ ಮೇಲೆಸದರೂ ಯಾವುದೇ ಪ್ರಯೋಜನವಾಗಲಿಲ್ಲ, ಮಧ್ಯದಲ್ಲಿ ಅಲ್ಲಿದ್ದ ವ್ಯಕ್ತಿಯೊಬ್ಬ ಕಲ್ಲೆಸೆದು ಬಾಲಕಿಯನ್ನು ರಕ್ಷಿಸಬೇಕು ಎಂದುಕೊಂಡು ಬಾಲಕಿಯನ್ನು ಎಳೆದುಕೊಳ್ಳುವಷ್ಟರಲ್ಲಿ ಮತ್ತೆ ದಾಳಿ ನಡೆಸಿದೆ.

ಮತ್ತಷ್ಟು ಓದಿ: ದಾವಣಗೆರೆ: ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ

ಅಂತ್ಯದಲ್ಲಿ ಹಿಂದಿನಿಂದ ವ್ಯಕ್ತಿಯ ಕೋಲಿನಿಂದ ಹೊಡೆದಾಗ ಬಾಲಕಿಯನ್ನು ಬಿಟ್ಟು ಓಡಿ ಹೋಗಿದೆ. ಆಗ ತಕ್ಷಣವೇ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡ ಬಾಲಕಿಯನ್ನು ಆಯೆಷಾ ಎಂದು ಹೇಳಲಾಗುತ್ತಿದೆ, ಈ ಘಟನೆ ಆಗಸ್ಟ್ 9ಕ್ಕೆ ನಡೆದಿದ್ದು, ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಮಗುವಿನ ತಾಯಿ ನೀಡಿದ ದೂರು ಮತ್ತು ಹೆಚ್ಚಿನ ತನಿಖೆಯ ನಂತರ ಹಸುವಿನ ಮಾಲೀಕನನ್ನು ಬಂಧಿಸಲಾಗಿದೆ. ಜಾನುವಾರ ಮಾಲೀಕನಿಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಹಸು ಯಾವುದಾದರೂ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದೆಯೇ ಮತ್ತು ಯಾವುದಾದರೂ ಕಾಯಿಲೆಯಿಂದಾಗಿ ಈ ರೀತಿ ವರ್ತಿಸಿದೆಯೇ ಖಚಿತಪಡಿಸಿಕೊಳ್ಳಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ