AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಮೇಲೆ ದಾಳಿ ನಡೆಸಿ ಅರೆ ಜೀವ ಮಾಡಿದ ಹಸು

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಬಾಲಕಿ ಮೇಲೆ ಹಸುವೊಂದು ದಾಳಿ ನಡೆಸಿರುವ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ. ಬಾಲಕಿ ತಾಯಿ ಹಾಗೂ ತನ್ನ 5 ವರ್ಷದ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ

ತಮಿಳುನಾಡು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಮೇಲೆ ದಾಳಿ ನಡೆಸಿ ಅರೆ ಜೀವ ಮಾಡಿದ ಹಸು
ಹಸು ದಾಳಿ
ನಯನಾ ರಾಜೀವ್
|

Updated on: Aug 11, 2023 | 10:06 AM

Share

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಬಾಲಕಿ ಮೇಲೆ ಹಸುವೊಂದು ದಾಳಿ ನಡೆಸಿರುವ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ. ಬಾಲಕಿ ತಾಯಿ ಹಾಗೂ ತನ್ನ 5 ವರ್ಷದ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ನಡೆದುಕೊಂಡು ಹೋಗುತ್ತಿರುವಾಗ ಎರಡು ಹಸುಗಳು ಬಂದಿವೆ, ಅದರಲ್ಲಿ ಒಂದು ಹಸು ಬಾಲಕಿ ಮೇಲೆ ಕೋಡಗಿನಿಂದ ತಿವಿದು, ಕಾಲಿನಿಂದ ಮೆಟ್ಟಿ ದಾಳಿ ನಡೆಸಿ ಅರೆ ಜೀವ ಮಾಡಿದೆ.

ಆಕೆಯ ತಾಯಿ ಮಗಳ ಸಹಾಯಕ್ಕೆಂದು ಮುಂದಾದರೂ ಆ ಹಸು ತಾಯಿಯನ್ನು ಗದರಿಸಿ ಬಾಲಕಿ ಮೇಲೆ ದಾಳಿ ಮಾಡಿದೆ. ಕೊನೆಗೆ ಅಲ್ಲಿದ್ದವರು ಕಲ್ಲು, ಇಟ್ಟಿಗೆಗಳನ್ನು ಹಸುವಿನ ಮೇಲೆಸದರೂ ಯಾವುದೇ ಪ್ರಯೋಜನವಾಗಲಿಲ್ಲ, ಮಧ್ಯದಲ್ಲಿ ಅಲ್ಲಿದ್ದ ವ್ಯಕ್ತಿಯೊಬ್ಬ ಕಲ್ಲೆಸೆದು ಬಾಲಕಿಯನ್ನು ರಕ್ಷಿಸಬೇಕು ಎಂದುಕೊಂಡು ಬಾಲಕಿಯನ್ನು ಎಳೆದುಕೊಳ್ಳುವಷ್ಟರಲ್ಲಿ ಮತ್ತೆ ದಾಳಿ ನಡೆಸಿದೆ.

ಮತ್ತಷ್ಟು ಓದಿ: ದಾವಣಗೆರೆ: ಚಿರತೆ ದಾಳಿಯಿಂದ ಮಾಲೀಕನನ್ನು ಕಾಪಾಡಿದ ಹಸು ಗೌರಿ

ಅಂತ್ಯದಲ್ಲಿ ಹಿಂದಿನಿಂದ ವ್ಯಕ್ತಿಯ ಕೋಲಿನಿಂದ ಹೊಡೆದಾಗ ಬಾಲಕಿಯನ್ನು ಬಿಟ್ಟು ಓಡಿ ಹೋಗಿದೆ. ಆಗ ತಕ್ಷಣವೇ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡ ಬಾಲಕಿಯನ್ನು ಆಯೆಷಾ ಎಂದು ಹೇಳಲಾಗುತ್ತಿದೆ, ಈ ಘಟನೆ ಆಗಸ್ಟ್ 9ಕ್ಕೆ ನಡೆದಿದ್ದು, ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಮಗುವಿನ ತಾಯಿ ನೀಡಿದ ದೂರು ಮತ್ತು ಹೆಚ್ಚಿನ ತನಿಖೆಯ ನಂತರ ಹಸುವಿನ ಮಾಲೀಕನನ್ನು ಬಂಧಿಸಲಾಗಿದೆ. ಜಾನುವಾರ ಮಾಲೀಕನಿಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಹಸು ಯಾವುದಾದರೂ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದೆಯೇ ಮತ್ತು ಯಾವುದಾದರೂ ಕಾಯಿಲೆಯಿಂದಾಗಿ ಈ ರೀತಿ ವರ್ತಿಸಿದೆಯೇ ಖಚಿತಪಡಿಸಿಕೊಳ್ಳಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ