Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ದೆಹಲಿಯ ರಸ್ತೆಯಲ್ಲಿ ಕುದುರೆ ಗಾಡಿ ಓಟ, 10 ಮಂದಿ ಬಂಧನ, 4 ಕುದುರೆಗಳನ್ನು ವಶಕ್ಕೆ ಪಡೆದ ಪೊಲೀಸರು
ಕುದುರೆ ಗಾಡಿ ಓಟ
Follow us
ನಯನಾ ರಾಜೀವ್
|

Updated on: Apr 24, 2023 | 8:27 AM

ರಾಷ್ಟ್ರ ರಾಜಧಾನಿ ದೆಹಲಿಯ ರಸ್ತೆಯೊಂದರಲ್ಲಿ ಕುದುರೆ ಗಾಡಿ ಓಟ ನಡೆಸುತ್ತಿದ್ದ 10 ಮಂದಿಯನ್ನು ಪೊಲೀಸರು ಬಂಧಿಸಿ, 4 ಕುದುರೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ 2 ದ್ವಿಚಕ್ರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಕುದುರೆಗಳನ್ನು ಎಂಸಿಡಿಗೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 289/268/188/34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಂದು ಮುಂಜಾನೆ ರಾಜ್‌ಘಾಟ್‌ನಿಂದ ದೆಹಲಿ ಗೇಟ್, ಸಿವಿಕ್ ಸೆಂಟರ್ ಕಡೆಗೆ ಜವಾಹರಲಾಲ್ ನೆಹರು ಮಾರ್ಗದಲ್ಲಿ ಕುದುರೆ-ಗಾಡಿ ರೇಸಿಂಗ್‌ನಲ್ಲಿ ತೊಡಗಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಪ್ರಮುಖ ಶಾಪಿಂಗ್ ಸೆಂಟರ್ ಕಮಲಾ ಮಾರ್ಕೆಟ್‌ ಬಳಿ ಈ ಘಟನೆ ನಡೆದಿದೆ.

ವಿಡಿಯೋದಲ್ಲಿ ಹೆಲ್ಮೆಟ್​ ಇಲ್ಲದ ಇಬ್ಬರು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಾ, ಕುದುರೆ ಗಾಡಿಯನ್ನು ವೇಗವಾಗಿ ಓಡಿಸುವಂತೆ ಪ್ರಚೋದನೆ ನೀಡುತ್ತಿರುವುದು ಕಂಡು ಬಂದಿದೆ.

ಮತ್ತಷ್ಟು ಓದಿ: Cheetah: ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ನಿತ್ಯ ಸಾವಿರಾರು ವಾಹನಗಳು ಓಡಾಡುವ ರಸ್ತೆಯಲ್ಲಿ ಇಂತಹ ಸ್ಪರ್ಧೆಗಳನ್ನು ನಡೆಸುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತದೆ, ಅವರು ತಲುಪ ಬೇಕಾದ ಸ್ಥಳವನ್ನು ತಲುಪುವಲ್ಲಿ ವಿಳಂಬವಾಗುತ್ತದೆ. ಹಾಗೆಯೇ ಅನುಮತಿ ಇಲ್ಲದೆ ಹೀಗೆ ರಸ್ತೆಯಲ್ಲಿ ರೇಸ್​ಗಳನ್ನು ಯಾವುದೇ ಕಾರಣಕ್ಕೂ ನಡೆಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ