ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುವಂತಿಲ್ಲ: ಹೈಕೋರ್ಟ್​

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ನಿರ್ವಹಣೆಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರವೆಸಗಿದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಸಂತ್ರಸ್ತೆಗೆ ಗುರುತಿನ ಚೀಟಿ ನೀಡುವಂತೆ ಒತ್ತಾಯಿಸುವಂತಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಅತ್ಯಾಚಾರ, ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುವಂತಿಲ್ಲ: ಹೈಕೋರ್ಟ್​
ವೈದ್ಯ-ಸಾಂದರ್ಭಿಕ ಚಿತ್ರ
Image Credit source: India Today

Updated on: Dec 24, 2024 | 2:10 PM

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಪ್ರತಿಬಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರ ಪೀಠ ಸೋಮವಾರ ಹಲವು ನಿರ್ದೇಶನಗಳನ್ನು ನೀಡಿದೆ.

ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ವೈದ್ಯಕೀಯ ಕೇಂದ್ರಗಳು ಅತ್ಯಾಚಾರ ಸಂತ್ರಸ್ತರು, ಆ್ಯಸಿಡ್ ದಾಳಿಗೆ ಒಳಗಾದವರು, ಇತ್ಯಾದಿ ಪ್ರಕರಣಗಳಲ್ಲಿ ಉಚಿತ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸುವುದು ಆಸ್ಪತ್ರೆಯ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಪೀಠವು ಹೇಳಿದೆ.

ಮತ್ತಷ್ಟು ಓದಿ: ಮೊಬೈಲ್ ವಿಡಿಯೋ ನೋಡಿ 9 ವರ್ಷದ ಬಾಲಕನಿಂದ 3 ವರ್ಷದ ಮಗು ಮೇಲೆ ಅತ್ಯಾಚಾರ!

ಅಪರಾಧಗಳಲ್ಲಿ ಸಂತ್ರಸ್ತರನ್ನು ತಕ್ಷಣವೇ ಪರೀಕ್ಷಿಸಬೇಕು, ಅಗತ್ಯವಿದ್ದರೆ ಎಚ್​ಐವಿಯಂತಹ ಲೈಂಗಿಕವಾಗಿ ಹರಡುವ ರೋಗಗಳಿಗೆ ಚಿಕಿತ್ಸೆ ನೀಡಬೇಕು. ಸಂತ್ರಸ್ತರಿಗೆ ದೈಹಿಕ ಹಾಗೂ ಮಾನಸಿಕ ಸಮಾಲೋಚನೆ ನೀಡಲಾಗುತ್ತದೆ. ಗರ್ಭಧಾರಣೆ ಬಗ್ಗೆ ಪರೀಕ್ಷಿಸಲಾಗುತ್ತದೆ ಮತ್ತು ಅಗತ್ಯವಿದ್ದರೆ ಗರ್ಭನಿರೋಧಕವನ್ನು ಒದಗಿಸಲಾಗುತ್ತದೆ.

ತುರ್ತು ಸಂದರ್ಭಗಳಲ್ಲಿ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲು ಸಂಬಂಧಪಟ್ಟ ವೈದ್ಯಕೀಯ ಸಂಸ್ಥೆಯು ಗುರುತಿನ ಚೀಟಿಯನ್ನು ನೀಡುವಂತೆ ಒತ್ತಾಯಿಸಬಾರದು ಎಂದು ನ್ಯಾಯಾಲಯ ಹೇಳಿದೆ.

ಮಗಳ ಮೇಲೆ ಅತ್ಯಾಚಾರವೆಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಯ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ನ್ಯಾಯಾಲಯ ಹಾಗೂ ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದ ಹಸ್ತಕ್ಷೇಪ ಹೊರತಾಗಿಯೂ ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕಾಯಬೇಕಾಯಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us