AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ: 6 ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Fire Accident: ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ: 6 ಮಂದಿ ಸಾವು
ಅಗ್ನಿ ಅವಘಡ
ನಯನಾ ರಾಜೀವ್
|

Updated on:Apr 25, 2024 | 2:57 PM

Share

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಅಗ್ನಿ ಅವಘಡ(Fire Accident) ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಟ್ನಾ ಜಂಕ್ಷನ್​ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್​ನಲ್ಲಿ ಅಗ್ನಿ ಅಪಘಾತ ನಡೆದಿದೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ,ನಾವು ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿತು. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಸೂಕ್ತ ಕ್ರಮವನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

ಕಟ್ಟಡದ ಮುಂಭಾಗದಲ್ಲಿರುವ ಸೇತುವೆ ಮೇಲೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಟೇಷನ್ ರಸ್ತೆಯೂ ಸಂಪೂರ್ಣ ಬಂದ್ ಆಗಿದೆ. ಇಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದೂವರೆ ಗಂಟೆಗಳ ನಂತರ ವ್ಯಕ್ತಿಯ ಶವ ಹೊರತೆಗೆಯಲಾಯಿತು. ಅರ್ಧ ಗಂಟೆ ಬಳಿಕ ಇಬ್ಬರು ಬಾಲಕಿಯರ ಮೃತದೇಹಗಳನ್ನು ಹೊರ ತೆಗೆಯಲಾಯಿತು.

ಮತ್ತಷ್ಟು ಓದಿ: ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಹೈ ಫ್ಲೇಮ್ ಗ್ಯಾಸ್​​ನಿಂದ ಹೊತ್ತಿಕೊಂಡ ಬೆಂಕಿ

ಪಾಲ್ ಹೋಟೆಲ್‌ನಲ್ಲಿ ಬೆಂಕಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಟ್ನಾ ಸೆಂಟ್ರಲ್ ರೇಂಜ್ ಟಿಎಸ್‌ಪಿ ಸತ್ಯ ಪ್ರಕಾಶ್ ಖಚಿತಪಡಿಸಿದ್ದಾರೆ. ಅದರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಇದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು 20 ಮಂದಿ ಚಿಕಿತ್ಸೆಗಾಗಿ ಪಿಎಂಸಿಎಚ್ ಗೆ ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿ ನಾಲ್ಕು ಅಂತಸ್ತಿನ ಕಟ್ಟಡವನ್ನು ಆವರಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಕ್ಕಪಕ್ಕದ ಹೋಟೆಲ್, ಅಂಗಡಿಗಳ ಜನರು ರಸ್ತೆಗೆ ಬಂದರು. ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದು, ಜನರನ್ನು ಹೊರತೆಗೆದಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಸ್ಥಳದಲ್ಲಿ ಸುಮಾರು ಹತ್ತಾರು ಸಣ್ಣ ಮತ್ತು ದೊಡ್ಡ ಅಗ್ನಿಶಾಮಕ ವಾಹನಗಳಿವೆ. ಬಲವಾದ ಗಾಳಿಯಿಂದಾಗಿ ಪಾಲ್ ಹೋಟೆಲ್‌ನ ಬಲಭಾಗದಲ್ಲಿರುವ ಎರಡೂ ಹೋಟೆಲ್‌ಗಳು ಬೆಂಕಿಗೆ ಆಹುತಿಯಾಗಿವೆ. ಇದುವರೆಗೂ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎನ್ನುವ ಮಾಹಿತಿ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:48 pm, Thu, 25 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ