AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ. ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ […]

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?
Guru
Guru|

Updated on:Jun 25, 2020 | 7:45 PM

Share

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ.

ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ ಮತ್ತು ರೆಸ್ಟೋರೆಂಟ್‌ಗಳನ್ನ ಹೊಂದಿರುವ ಈ ಸಂಘ, ದೆಹಲಿಯಲ್ಲಿನ ತನ್ನ ಯಾವುದೇ ಹೋಟೆಲ್​‌ಗಳಲ್ಲಿ ಚೀನಿಯರಿಗೆ ಮತ್ತು ಚೀನಾದೊಡನೆ ನಂಟು ಹೊಂದಿದವರಿಗೆ ರೂಂ ನೀಡದಿರಲು ನಿರ್ಧರಿಸಿದೆ. ಅಷ್ಟೇ ಅಲ್ಲ, ರೆಸ್ಟೋರೆಂಟ್‌ಗಳಲ್ಲಿ ಅತಿಥಿ ಸತ್ಕಾರಕ್ಕೂ ನೋ ಎಂದಿದೆ. ಇದರ ಜೊತೆಗೆ ತಮ್ಮ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಯಾವುದೇ ಚೀನಿ ನಿರ್ಮಿತ ವಸ್ತುಗಳನ್ನ ಬಳಸದಿರಲು ತೀರ್ಮಾನಿದೆ.

ಇಂಥ ಕ್ರಮಗಳ ಮೂಲಕ ದೇಶದ ಯೋಧರ ಸಾವಿಗೆ ಕಾರಣರಾದವರ ವಿರುದ್ಧದ ಹೋರಾಟಕ್ಕೆ ಹೋಟೆಲ್​ಗಳ ಸಂಘ ಕೈ ಜೋಡಿಸಿದೆ. ಇದು ಕೇವಲ ದೆಹಲಿಯಲ್ಲಿ ಮಾತ್ರಾವಾ ಅಥವಾ ಈ ಟ್ರೆಂಡ್‌ ದೇಶದ ಇತರೆಡೆಯೂ ಮುಂದುವರಿಯುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

Published On - 7:28 pm, Thu, 25 June 20

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು