AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ. ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ […]

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?
Guru
Guru|

Updated on:Jun 25, 2020 | 7:45 PM

Share

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ.

ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ ಮತ್ತು ರೆಸ್ಟೋರೆಂಟ್‌ಗಳನ್ನ ಹೊಂದಿರುವ ಈ ಸಂಘ, ದೆಹಲಿಯಲ್ಲಿನ ತನ್ನ ಯಾವುದೇ ಹೋಟೆಲ್​‌ಗಳಲ್ಲಿ ಚೀನಿಯರಿಗೆ ಮತ್ತು ಚೀನಾದೊಡನೆ ನಂಟು ಹೊಂದಿದವರಿಗೆ ರೂಂ ನೀಡದಿರಲು ನಿರ್ಧರಿಸಿದೆ. ಅಷ್ಟೇ ಅಲ್ಲ, ರೆಸ್ಟೋರೆಂಟ್‌ಗಳಲ್ಲಿ ಅತಿಥಿ ಸತ್ಕಾರಕ್ಕೂ ನೋ ಎಂದಿದೆ. ಇದರ ಜೊತೆಗೆ ತಮ್ಮ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಯಾವುದೇ ಚೀನಿ ನಿರ್ಮಿತ ವಸ್ತುಗಳನ್ನ ಬಳಸದಿರಲು ತೀರ್ಮಾನಿದೆ.

ಇಂಥ ಕ್ರಮಗಳ ಮೂಲಕ ದೇಶದ ಯೋಧರ ಸಾವಿಗೆ ಕಾರಣರಾದವರ ವಿರುದ್ಧದ ಹೋರಾಟಕ್ಕೆ ಹೋಟೆಲ್​ಗಳ ಸಂಘ ಕೈ ಜೋಡಿಸಿದೆ. ಇದು ಕೇವಲ ದೆಹಲಿಯಲ್ಲಿ ಮಾತ್ರಾವಾ ಅಥವಾ ಈ ಟ್ರೆಂಡ್‌ ದೇಶದ ಇತರೆಡೆಯೂ ಮುಂದುವರಿಯುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

Published On - 7:28 pm, Thu, 25 June 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ