AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ. ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ […]

ಚೀನಾ ವಿರುದ್ಧ ದೆಹಲಿಯ 3 ಸಾವಿರ ಹೋಟೆಲ್ಸ್​ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?
Guru
Guru|

Updated on:Jun 25, 2020 | 7:45 PM

Share

ದೆಹಲಿ: ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಸಂಘರ್ಷದ ಕಾವು ಇನ್ನೂ ಆರಿಲ್ಲ. ಯಾವಾಗ ಭಾರತದ 20 ಸೈನಿಕರ ಸಾವಿಗೆ ಚೀನಾ ಕಾರಣವಾಯಿತೋ, ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಭಾರತದ ಸೈನಿಕರು ಗಡಿಯಲ್ಲಿ ಹುತಾತ್ಮರಾಗುತ್ತಿದ್ದಂತೆ ಚೀನಾದ ವಸ್ತುಗಳನ್ನ ಬಹಿಷ್ಕರಿಸಿ ಎನ್ನುವ ಕೂಗು ದೇಶಾದ್ಯಂತ ಎದ್ದಿದೆ. ಈ ಮೂಲಕ ದುರುಳ ಚೀನಾಕ್ಕೆ ತಕ್ಕ ಪಾಠ ಕಲಿಸಿ ಅನ್ನೋ ಕೂಗು ಕೇಳಿಬರುತ್ತಿದೆ.

ಈ ಕೂಗಿಗೆ ದೆಹಲಿಯ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಸಂಘ ಧ್ವನಿಗೂಡಿಸಿದೆ. ಸುಮಾರು 3,000ಕ್ಕೂ ಹೆಚ್ಚು ಹೋಟೆಲ್​‌ ಮತ್ತು ರೆಸ್ಟೋರೆಂಟ್‌ಗಳನ್ನ ಹೊಂದಿರುವ ಈ ಸಂಘ, ದೆಹಲಿಯಲ್ಲಿನ ತನ್ನ ಯಾವುದೇ ಹೋಟೆಲ್​‌ಗಳಲ್ಲಿ ಚೀನಿಯರಿಗೆ ಮತ್ತು ಚೀನಾದೊಡನೆ ನಂಟು ಹೊಂದಿದವರಿಗೆ ರೂಂ ನೀಡದಿರಲು ನಿರ್ಧರಿಸಿದೆ. ಅಷ್ಟೇ ಅಲ್ಲ, ರೆಸ್ಟೋರೆಂಟ್‌ಗಳಲ್ಲಿ ಅತಿಥಿ ಸತ್ಕಾರಕ್ಕೂ ನೋ ಎಂದಿದೆ. ಇದರ ಜೊತೆಗೆ ತಮ್ಮ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಯಾವುದೇ ಚೀನಿ ನಿರ್ಮಿತ ವಸ್ತುಗಳನ್ನ ಬಳಸದಿರಲು ತೀರ್ಮಾನಿದೆ.

ಇಂಥ ಕ್ರಮಗಳ ಮೂಲಕ ದೇಶದ ಯೋಧರ ಸಾವಿಗೆ ಕಾರಣರಾದವರ ವಿರುದ್ಧದ ಹೋರಾಟಕ್ಕೆ ಹೋಟೆಲ್​ಗಳ ಸಂಘ ಕೈ ಜೋಡಿಸಿದೆ. ಇದು ಕೇವಲ ದೆಹಲಿಯಲ್ಲಿ ಮಾತ್ರಾವಾ ಅಥವಾ ಈ ಟ್ರೆಂಡ್‌ ದೇಶದ ಇತರೆಡೆಯೂ ಮುಂದುವರಿಯುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

Published On - 7:28 pm, Thu, 25 June 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ