Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್, ರೆಸ್ಟೋರೆಂಟ್​ಗಳು ಗ್ರಾಹಕರಿಂದ ಸರ್ವೀಸ್ ಚಾರ್ಜ್ ಸಂಗ್ರಹಿಸುವಂತಿಲ್ಲ; ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಆದೇಶ

ಹೋಟೇಲ್, ರೆಸ್ಟೋರೆಂಟ್ ಗಳು ಗ್ರಾಹಕರಿಂದ ಸರ್ವೀಸ್ ಚಾರ್ಜ್ ಸಂಗ್ರಹಿಸುವಂತಿಲ್ಲ ಹಾಗೂ ಗ್ರಾಹಕರಿಗೆ ಸರ್ವೀಸ್ ಚಾರ್ಜ್ ನೀಡುವಂತೆ ಬಲವಂತ ಮಾಡುವಂತಿಲ್ಲ ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಇಂದು (ಜುಲೈ 4) ಆದೇಶ ಹೊರಡಿಸಿದೆ.

ಹೋಟೆಲ್, ರೆಸ್ಟೋರೆಂಟ್​ಗಳು ಗ್ರಾಹಕರಿಂದ ಸರ್ವೀಸ್ ಚಾರ್ಜ್ ಸಂಗ್ರಹಿಸುವಂತಿಲ್ಲ; ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಆದೇಶ
ಸಾಂಧರ್ಬಿಕ ಚಿತ್ರImage Credit source: NDTV
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 04, 2022 | 6:37 PM

ನವದೆಹಲಿ: ಹೋಟೆಲ್ (Hotel), ರೆಸ್ಟೋರೆಂಟ್​​ಗಳು (Restaurants) ಗ್ರಾಹಕರಿಂದ (Customer) ಸರ್ವೀಸ್ ಚಾರ್ಜ್ (Service Charge) ಸಂಗ್ರಹಿಸುವಂತಿಲ್ಲ ಹಾಗೂ ಗ್ರಾಹಕರಿಗೆ ಸರ್ವೀಸ್ ಚಾರ್ಜ್ ನೀಡುವಂತೆ ಬಲವಂತ ಮಾಡುವಂತಿಲ್ಲ ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಇಂದು (ಜುಲೈ 4) ಆದೇಶ ಹೊರಡಿಸಿದೆ. ಹೋಟೆಲ್ , ರೆಸ್ಟೋರೆಂಟ್ ಸರ್ವೀಸ್ ಚಾರ್ಜ್ ವಿಧಿಸಿದರೇ, ರಾಷ್ಟ್ರೀಯ ಗ್ರಾಹಕರ ಹೆಲ್ಪ್​ಲೈನ್​​ಗೆ 1915ಗೆ ದೂರು ನೀಡಬಹುದು ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಆದೇಶದಲ್ಲಿ ತಿಳಿಸಿದೆ.

ಹೋಟೆಲ್, ರೆಸ್ಟೋರೆಂಟ್​ಗಳು ಈಗಾಗಲೇ ತಿಂಡಿ-ತಿನಿಸುಗಳ ದರವನ್ನು ಹೆಚ್ಚಿಸಿದ್ದು, ಈ ಮಧ್ಯೆ ಸೇವಾ ಶುಲ್ಕ ಗ್ರಾಹಕರಿಕೆ ಹೊರೆಯಾಗುತ್ತದೆ. ಹೀಗಾಗಿ ಸೇವಾ ಶುಲ್ಕ ವಿಧಿಸುವುದು ಅನ್ಯಾಯದ ವ್ಯಾಪಾರವೆಂದು ಮತ್ತು ಗ್ರಾಹಕರ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು CCPA ಈ ಮಾರ್ಗಸೂಚಿಯನ್ನು ಹೊರಡಿಸಿದೆ.

ಇದನ್ನು ಓದಿ: ಭ್ರಷ್ಟಾಚಾರ ಆರೋಪ: ಎಸಿಬಿ ಅಧಿಕಾರಿಗಳಿಂದ IAS ಅಧಿಕಾರಿ ಮಂಜುನಾಥ್ ಬಂಧನ

ಮಾರ್ಗಸೂಚಿಗಳ ಪ್ರಕಾರ, “ಯಾವುದೇ ಹೋಟೆಲ್‌ಗಳು ಅಥವಾ ರೆಸ್ಟೋರೆಂಟ್‌ಗಳು ಗ್ರಾಹಕರಿಂದ  ಸರ್ವೀಸ್ ಚಾರ್ಜ್  ಸಂಗ್ರಹಿಸುವಂತಿಲ್ಲ ಹಾಗೂ ಗ್ರಾಹಕರಿಗೆ ಸರ್ವೀಸ್ ಚಾರ್ಜ್ ನೀಡುವಂತೆ ಬಲವಂತ ಮಾಡುವಂತಿಲ್ಲ  ಅಥವಾ ಬೇರೆ ಯಾವುದೇ ಹೆಸರಿನಿಂದ ಸೇವಾ ಶುಲ್ಕವನ್ನು ಸಂಗ್ರಹಿಸುವಂತಿಲ್ಲ ಎಂದು ತಿಳಿಸಿದೆ.

ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್‌ಗಳು ಸೇವಾ ಶುಲ್ಕವನ್ನು ಪಾವತಿಸಲು ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಸೇವಾ ಶುಲ್ಕ ಪಾವತಿಸುವುದು ಗ್ರಾಹಕರ ವಿವೇಚನೆಗೆ ಬಿಟ್ಟಿದ್ದು. ಸೇವಾ ಶುಲ್ಕದ ಸಂಗ್ರಹದ ಆಧಾರದ ಮೇಲೆ ಸೇವೆಗಳಲ್ಲಿ ಕೊರತೆ ಉಂಟು ಮಾಡುವಂತಿಲ್ಲ ಎಂದು ತಿಳಿಸಿದೆ.

ಇದನ್ನು ಓದಿ: ಉನ್ನತ ಶಿಕ್ಷಣ ಜು 10ರಿಂದ ಪ್ರವೇಶ ಆರಂಭ, ಒಂದೇ ಅರ್ಜಿ ಮೂಲಕ ಯಾವುದೇ ಕಾಲೇಜು ಆಯ್ಕೆ – ಸಚಿವ ಡಾ. ಅಶ್ವಥ್ ನಾರಾಯಣ

ಇದಲ್ಲದೆ, ಆಹಾರದ ಬಿಲ್‌ನೊಂದಿಗೆ  ಜಿಎಸ್‌ಟಿ ವಿಧಿಸುವ ಮೂಲಕ ಸೇವಾ ಶುಲ್ಕವನ್ನು ಸಂಗ್ರಹಿಸುವಂತಿಲ್ಲ. ಮಾರ್ಗಸೂಚಿಯನ್ನು ಉಲ್ಲಂಘಿಸಿ ಹೋಟೆಲ್ ಅಥವಾ ರೆಸ್ಟೊರೆಂಟ್ ಸೇವಾ ಶುಲ್ಕವನ್ನು ವಿಧಿಸಿದರೆ ಗ್ರಾಹಕರು  ಬಿಲ್ ಮೊತ್ತದಿಂದ ಸೇವಾ ಶುಲ್ಕವನ್ನು ತೆಗೆದುಹಾಕವಂತೆ ಹೋಟೆಲ್ ಅಥವಾ ರೆಸ್ಟೊರೆಂಟ್​ಗೆ ತಿಳಿಸಬಹುದು. ಈ ಸಂಬಂಧ ಗ್ರಾಹಕರು 1915 ಗೆ ಕರೆ ಮಾಡುವ ಮೂಲಕ  ಗ್ರಾಹಕ ಆಯೋಗಕ್ಕೂ ದೂರು ಸಲ್ಲಿಸಬಹುದು.

Published On - 6:04 pm, Mon, 4 July 22

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...