Terror Attack: ಜಮ್ಮು ಕಾಶ್ಮೀರದಲ್ಲಿ 3 ದಿನಗಳಲ್ಲಿ ಮೂರನೇ ಉಗ್ರ ದಾಳಿ, ಸೇನಾ ನೆಲೆ ಮೇಲೆ ಉಗ್ರರಿಂದ ಗುಂಡಿನ ದಾಳಿ

|

Updated on: Jun 12, 2024 | 8:01 AM

ಜಮ್ಮು ಮತ್ತು ಕಾಶ್ಮೀರದ ದೋಡಾದ ಭದೇರ್ವಾ ಬನಿ ರಸ್ತೆಯಲ್ಲಿರುವ ಚತ್ತರಗಲ್ಲ ಪ್ರದೇಶದಲ್ಲಿ ಸೇನೆಯ ತಾತ್ಕಾಲಿಕ ಕಾರ್ಯಾಚರಣೆ ನೆಲೆ (TOB) ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಕನಿಷ್ಠ ಒಬ್ಬ ಸೈನಿಕ ಗಾಯಗೊಂಡಿದ್ದಾರೆ. ಉಗ್ರರ ಪತ್ತೆಗೆ ಎನ್‌ಕೌಂಟರ್ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕರು ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಕಥುವಾದಲ್ಲಿ ಮನೆಯ ಮೇಲೆ ದಾಳಿ ಮಾಡಿದ ನಂತರ ಇದು ಮೂರನೇ ಘಟನೆಯಾಗಿದೆ. ಗಾಯಗೊಂಡ ಯೋಧನನ್ನು ಭಾದರ್‌ವಾ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Terror Attack: ಜಮ್ಮು ಕಾಶ್ಮೀರದಲ್ಲಿ 3 ದಿನಗಳಲ್ಲಿ ಮೂರನೇ ಉಗ್ರ ದಾಳಿ, ಸೇನಾ ನೆಲೆ ಮೇಲೆ ಉಗ್ರರಿಂದ ಗುಂಡಿನ ದಾಳಿ
ಉಗ್ರರು-ಸಾಂದರ್ಭಿಕ ಚಿತ್ರ
Image Credit source: Timesnow
Follow us on

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 3 ದಿನಗಳಲ್ಲಿ ಮೂರನೇ ಉಗ್ರ ದಾಳಿ(Terror Attack) ನಡೆದಿದೆ. ಸೇನಾ ನೆಲೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸೈನಿಕರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಕಥುವಾ ದಾಳಿಯ ಕೆಲವೇ ಗಂಟೆಗಳ ಬಳಿಕ ಭಯೋತ್ಪಾದಕರು ಸೇನಾ ನೆಲೆ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಭಾನುವಾರ ರಿಯಾಸಿಯಲ್ಲಿ ಯಾತ್ರಾರ್ಥಿಗಳಿದ್ದ ಬಸ್​ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ 10 ಮಂದಿ ಪ್ರಾಣ ಕಳೆದುಕೊಂಡಿದ್ದರು, 30 ಮಂದಿ ಗಾಯಗೊಂಡಿದ್ದರು. ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಒಂದು ಗುಂಡು ಬಸ್ ಚಾಲಕನ ತಲೆಗೆ ತಾಗಿದ್ದು, ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್​ ಕಂದಕಕ್ಕೆ ಬಿದ್ದಿತ್ತು. ಚಾಲಕನಿಗೆ ಗುಂಡು ತಗುಲುತ್ತಿದ್ದಂತೆ ಬಸ್​ನಲ್ಲಿದ್ದ ಹಲವರು ಸತ್ತಂತೆ ನಟಿಸಿದ್ದರು. ಬದುಕುಳಿದ 30 ಮಂದಿ ಪೈಕಿ ಕನಿಷ್ಠ 15 ಮಂದಿಗೆ ಗುಂಡು ತಗುಲಿದೆ.

ಜಮ್ಮು ಮತ್ತು ಕಾಶ್ಮೀರದ ದೋಡಾದ ಭದೇರ್ವಾ ಬನಿ ರಸ್ತೆಯಲ್ಲಿರುವ ಚತ್ತರಗಲ್ಲ ಪ್ರದೇಶದಲ್ಲಿ ಸೇನೆಯ ತಾತ್ಕಾಲಿಕ ಕಾರ್ಯಾಚರಣೆ ನೆಲೆ (TOB) ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಕನಿಷ್ಠ ಒಬ್ಬ ಸೈನಿಕ ಗಾಯಗೊಂಡಿದ್ದಾರೆ. ಉಗ್ರರ ಪತ್ತೆಗೆ ಎನ್‌ಕೌಂಟರ್ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: ಚಾಲಕನ ತಲೆಗೆ ಗುಂಡು ತಗುಲಿದ್ದು ನೋಡಿದ್ದೆವು, ನಾವೂ ಕೂಡ ಸತ್ತಂತೆ ನಟಿಸಿದ್ದೆವು, ರಿಯಾಸಿ ಉಗ್ರ ದಾಳಿ ಬಗ್ಗೆ ಬದುಕುಳಿದವರ ಮಾತು

ಚಟರ್ಗಾಲಾ ಪ್ರದೇಶದಲ್ಲಿ 4 ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಜಂಟಿ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದರು.

ಕಥುವಾದಲ್ಲಿ ಭಯೋತ್ಪಾದಕರನ್ನು ಹಿಡಿಯಲು ಮತ್ತೊಂದು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕಥುವಾದ ಹೀರಾನಗರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಡ್ರೋನ್ ಬಳಸಲಾಗುತ್ತಿದೆ.

ಕಥುವಾದಲ್ಲಿ ಮನೆಯೊಂದರ ಮೇಲೆ ದಾಳಿ ನಡೆಸಿದ ಇಬ್ಬರು ಭಯೋತ್ಪಾದಕರ ಪೈಕಿ ಒಬ್ಬನನ್ನು ನಿನ್ನೆ ರಾತ್ರಿ ಎನ್‌ಕೌಂಟರ್‌ನಲ್ಲಿ ತಟಸ್ಥಗೊಳಿಸಲಾಗಿದೆ. ಇತರ ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ