AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ

ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ನ ಹಸ್ತಕ್ಷೇಪದ ನಂತರ ಅಸ್ಸಾಂ ರಾಜ್ಯದ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಬೋರಾ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ. ಅಸ್ಸಾಂ ಘಟಕದ ಮುಖ್ಯಸ್ಥ ಗೌರವ್ ಗೊಗೊಯ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಇಂದು ಭೂಪೇನ್ ಬೋರಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಅವರು ಪಕ್ಷದ ಹೈಕಮಾಂಡ್‌ಗೆ ತಮ್ಮ ರಾಜೀನಾಮೆಯನ್ನು ಘೋಷಿಸಿ ಪತ್ರವನ್ನು ಕಳುಹಿಸಿದ್ದರು.

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ
Bhupen BorahImage Credit source: PTI
ಸುಷ್ಮಾ ಚಕ್ರೆ
|

Updated on: Feb 16, 2026 | 7:24 PM

Share

ನವದೆಹಲಿ, ಫೆಬ್ರವರಿ 16: ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕತ್ವದ ಹಸ್ತಕ್ಷೇಪದ ನಂತರ ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸುತ್ತಿರುವುದಾಗಿ ಅಸ್ಸಾಂ (Assam) ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಹೇಳಿದ್ದಾರೆ. ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಅಂಗೀಕರಿಸಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಭೂಪೇನ್ ಬೋರಾ ಅವರ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿತೇಂದ್ರ ಸಿಂಗ್, ರಾಜೀನಾಮೆಗೆ ಕಾರಣವಾದ ಕಳವಳಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಭೂಪೇನ್ ಅವರೊಂದಿಗೆ ವಿವರವಾದ ಚರ್ಚೆಗಳನ್ನು ನಡೆಸಿದೆ ಎಂದು ಹೇಳಿದರು. ”ಪಕ್ಷದ ನಾಯಕರು ಭೂಪೇನ್ ಬೋರಾ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ 15 ನಿಮಿಷಗಳ ಕಾಲ ಮಾತನಾಡಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ

”ಇದು ನಮ್ಮ ಆಂತರಿಕ ವಿಷಯ. ಅವರನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಅವರ ರಾಜೀನಾಮೆಯನ್ನು ಹಿಂಪಡೆಯಲು ಒಪ್ಪಿಕೊಂಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ. ಭೂಪೇನ್ ಬೋರಾ ಅವರು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಪಕ್ಷದ ಹೈಕಮಾಂಡ್​​ನಿಂದ ಹೆಚ್ಚು ಸಮಯವನ್ನು ಕೋರಿದ್ದಾರೆ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ​​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು?

ತಮ್ಮ ನಿವಾಸದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಭೂಪೇಂದ್ರ ಬೋರಾ, “ನನ್ನ ಹಳೆಯ ಸಹೋದ್ಯೋಗಿಗಳು ಮತ್ತು ಪಕ್ಷದ ಹೈಕಮಾಂಡ್ ನಾಯಕರು ನನ್ನ ಮನೆಗೆ ಬಂದಿದ್ದರು. ನಾನು ಅವರನ್ನು ಗೌರವಿಸುತ್ತೇನೆ. ನನ್ನ ಕುಟುಂಬದೊಂದಿಗೆ ಮಾತನಾಡಲು ಮತ್ತು ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳಲು ನಾಳೆ ಬೆಳಿಗ್ಗೆವರೆಗೆ ಸಮಯ ಕೇಳಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ