ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ ಚೆನ್ನೈ ಆಸ್ಪತ್ರೆ, ಏಮ್ಸ್‌ಗೆ ಕರೆದೊಯ್ಯುವಂತೆ ಬಿಜೆಪಿ ಒತ್ತಾಯ

ಆಸ್ಪತ್ರೆಯಲ್ಲಿ ತಪಾಸಣೆಗೊಳಗಾದ ಸೆಂಥಿಲ್ ಅವರಿಗೆ ಕೊರೊನರಿ ಆಂಜಿಯೊಗ್ರಾಮ್ ನಡೆಸಿದ್ದು,  ಆದಷ್ಟು ಬೇಗ ಬೈಪಾಸ್ ಸರ್ಜರಿ  ನಡೆಸಲು ಆಸ್ಪತ್ರೆ ಸೂಚಿಸಿದೆ

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ ಚೆನ್ನೈ ಆಸ್ಪತ್ರೆ, ಏಮ್ಸ್‌ಗೆ ಕರೆದೊಯ್ಯುವಂತೆ ಬಿಜೆಪಿ ಒತ್ತಾಯ
ವಿ ಸೆಂಥಿಲ್ ಬಾಲಾಜಿ
Follow us
|

Updated on:Jun 14, 2023 | 1:21 PM

ಚೆನ್ನೈ: ತಮಿಳುನಾಡು (Tamil Nadu) ಸಚಿವ ಹಾಗೂ ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ (Senthil Balaji )ಅವರನ್ನು ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ED)ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆತಂದಾಗ ಸಚಿವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.  ಇಡಿ ಮಂಗಳವಾರ ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಗಂಟೆಗಳ ವಿಚಾರಣೆ ಬಳಿಕ ಇಂದು ಬೆಳಗ್ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವರನ್ನು ಬಂಧಿಸಲಾಯಿತು. ಬಂಧನದ ನಂತರ ತನಿಖಾ ಸಂಸ್ಥೆ ಬಾಲಾಜಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಂತೆ, ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ನಾಟಕೀಯ ದೃಶ್ಯ ನಡೆಯಿತು. ಹೊರಗೆ ಅವರ ಬೆಂಬಲಿಗರು ಜಾರಿ ನಿರ್ದೇಶನಾಲಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗ ಡಿಎಂಕೆ ನಾಯಕ ಆಂಬ್ಯುಲೆನ್ಸ್‌ನಲ್ಲಿ ಹೊರಳಾಡಿ ಅಳುತ್ತಿದ್ದರು. ಎದೆ ನೋವು ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೊಳಗಾದ ಸೆಂಥಿಲ್ ಅವರಿಗೆ ಕೊರೊನರಿ ಆಂಜಿಯೊಗ್ರಾಮ್ ನಡೆಸಿದ್ದು,  ಆದಷ್ಟು ಬೇಗ ಬೈಪಾಸ್ ಸರ್ಜರಿ  ನಡೆಸಲು ಆಸ್ಪತ್ರೆ ಸೂಚಿಸಿದೆ ಎಂದು ಚೆನ್ನೈನಲ್ಲಿರುವ ತಮಿಳುನಾಡು ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ  ಪ್ರಕಟಣೆ ತಿಳಿಸಿದೆ.

ಇಂದು ಬೆಳಗ್ಗೆ 10:40ಕ್ಕೆ ಸಚಿವ ಸೆಂಥಿಲ್ ಬಾಲಾಜಿ ಅವರಿಗೆ ಕೊರೊನರಿ ಆಂಜಿಯೋಗ್ರಾಮ್ ಮಾಡಲಾಗಿದೆ ಎಂದು ಒಮಂದೂರಾರ್ ಆಸ್ಪತ್ರೆಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಕೊರೊನರಿ ಆಂಜಿಯೋಗ್ರಾಮ್ ಮಾಡಿದಾಗ ಟ್ರಿಪಲ್ ವೆಸೆಲ್ ಡಿಸೀಸ್ ಇರುವುದು ಪತ್ತೆಯಾಯಿತು ಇದಕ್ಕಾಗಿ ಸಿಎಬಿಜಿ-ಬೈಪಾಸ್ ಸರ್ಜರಿಯನ್ನು ಆದಷ್ಟು ಬೇಗ ನಡೆಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

ಇದನ್ನೂ ಓದಿ: V Senthil Balaji Profile: ಕರ್ನಾಟಕ ಕಾಂಗ್ರೆಸ್​ಗೆ ಡಿಕೆ ಶಿವಕುಮಾರ್ ಹೇಗೋ ತಮಿಳುನಾಡಿನ ಡಿಎಂಕೆಗೆ ಸೆಂಥಿಲ್ ಬಾಲಾಜಿ ಹಾಗೆ!

ಏತನ್ಮಧ್ಯೆ, ಸೆಂಥಿಲ್ ಬಾಲಾಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ನವದೆಹಲಿಗೆ ಸ್ಥಳಾಂತರಿಸಲು ಹಲವಾರು ಬಿಜೆಪಿ ನಾಯಕರು ಒತ್ತಾಯಿಸಿದ್ದು, ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯು ಮುಂದಿನ ಇಡಿ ಕ್ರಮದಿಂದ ಅವರನ್ನು ರಕ್ಷಿಸಲು ಪ್ರಯತ್ನಿಸಬಹುದು ಎಂದು ಹೇಳಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಸೆಂಥಿಲ್ ಬಾಲಾಜಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ.. ನಮ್ಮ ನಾಯಕ ಹಾಗೂ ಮಾಜಿ ಸಚಿವ ಜಯಕುಮಾರ್ ಅವರನ್ನು ಬಂಧಿಸಿದಾಗ 20 ದಿನಗಳ ಕಾಲ ಜೈಲಿನಲ್ಲಿಟ್ಟಿದ್ದರು. ಔಷಧಗಳನ್ನು ಸೇವಿಸಲು ಸಹ ಅವರಿಗೆ ಅನುಮತಿ ಇರಲಿಲ್ಲ. ಸೆಂಥಿಲ್ ಬಾಲಾಜಿ ಈಗ ನಾಟಕ ಮಾಡುತ್ತಿದ್ದಾರೆ. ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Wed, 14 June 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ