Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

ಕೇರಳದಲ್ಲಿ ಐದಾರು ದಿನಗಳಿಂದಲೂ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರದಿಂದ ಇಲ್ಲಿಯವರೆಗೆ 24 ಜನರು ಮೃತಪಟ್ಟಿದ್ದಾರೆ. 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆಯಾಗಿದೆ.

Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ
ಕೇರಳದಲ್ಲಿನದಿಗೆ ಬಿದ್ದ ಮನೆ
Follow us
| Updated By: Lakshmi Hegde

Updated on: Oct 18, 2021 | 10:59 AM

ಕೇರಳದಲ್ಲಂತೂ ಮಳೆ, ಪ್ರವಾಹದಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಅಲ್ಲಿನ ಬಹುತೇಕ ಜಿಲ್ಲೆಗಳ ಜನರು ಜೀವ ಕೈಯಲ್ಲಿ ಹಿಡಿದು ಕಾಲಕಳೆಯುವಂತಾಗಿದೆ.  ಪ್ರವಾಹ ಮನೆಗಳಿಗೆ ನುಗ್ಗುತ್ತಿದೆ..ಈ ಮಧ್ಯೆ ಮನೆಯೊಂದು ರಭಸವಾದ ನೀರಿನಲ್ಲಿ ಕೊಚ್ಚಿಕೊಂಡು ಹೋದ ಭಯಾನಕ ವಿಡಿಯೋ ವೈರಲ್​ ಆಗಿದೆ. ಕೊಟ್ಟಾಯಂನ ಮುಂಡಕಾಯಂ ಎಂಬಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿದವರು ನಿಜಕ್ಕೂ ತಮಗೆ ಭಯವಾಗುತ್ತಿದೆ ಎಂದಿದ್ದಾರೆ. 

ಭಾರಿಮಳೆಯಿಂದ ಕೆಂಪುಬಣ್ಣಕ್ಕೆ ತಿರುಗಿ, ರಭಸವಾಗಿ ಹರಿಯುತ್ತಿರುವ ನದಿಯೊಂದು ಒಂದು ಮನೆಯನ್ನು ಕೊಚ್ಚಿಕೊಂಡು ಹೋಗಿರುವ ವಿಡಿಯೋ ಇದು. ಅಲ್ಲೆಲ್ಲ ಜನರು ನೋಡುತ್ತ ನಿಂತಿದ್ದಾರೆ. ಅವರ ಕಣ್ಣೆದುರಲ್ಲೇ ಮನೆ ನದಿಗೆ ಉರುಳಿ ಬಿದ್ದು, ಕೊಚ್ಚಿಕೊಂಡು ಹೋಗುತ್ತದೆ. ಅದರ ಗೋಡೆಗಳು ಕುಸಿಯುವುದಿಲ್ಲ. ಬದಲಿಗೆ ಇಡೀ ಮನೆಯೇ ಬುಡಸಮೇತ ಬೀಳುವ ದೃಶ್ಯ ಎಂಥವರಿಗಾದರೂ ಹೆದರಿಕೆ ಹುಟ್ಟಿಸುವಂತಿದೆ.

ಕೇರಳದಲ್ಲಿ ಐದಾರು ದಿನಗಳಿಂದಲೂ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರದಿಂದ ಇಲ್ಲಿಯವರೆಗೆ 24 ಜನರು ಮೃತಪಟ್ಟಿದ್ದಾರೆ. 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆಯಾಗಿದೆ. ಅದರಲ್ಲಿ 13 ಮೃತದೇಹಗಳು ಪತ್ತೆಯಾಗಿದ್ದು ಕೊಟ್ಟಾಯಂ ಜಿಲ್ಲೆಯಲ್ಲಿ. ಕೊಟ್ಟಾಯಂ ಮತ್ತು ಇಡುಕ್ಕಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ. ಇನ್ನು ತಿರುವನಂತಪುರಂನಲ್ಲೂ ಒಂದು ಮನೆ ಕುಸಿದುಬಿದ್ದಿದೆ. ಆ ಮನೆಯಲ್ಲಿ ಆರು ಮಂದಿ ಇದ್ದು, ಎಲ್ಲರೂ ಅವಶೇಷಗಳಡಿ ಸಿಲುಕಿದ್ದರು. ಅದೃಷ್ಟವಶಾತ್​ ಎಲ್ಲರನ್ನೂ ಪ್ರಾಣಾಪಾಯದಿಂದ ಪಾರುಮಾಡಲಾಗಿದೆ.  ಈ ಮನೆಯಲ್ಲಿ 80 ವರ್ಷದ ಮಹಿಳೆ ಲೀಲಾ ಎಂಬುವರು ಅಡುಗೆ ಮನೆ ಸಮೀಪ ಮಲಗಿದ್ದರು. ಮನೆ ಕುಸಿಯುತ್ತಿರುವುದು ಮೊದಲು ಅವರಿಗೇ ಗೊತ್ತಾಗಿದ್ದು. ಇವರ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರೆಲ್ಲ ಬಂದು ಇವರನ್ನೆಲ್ಲ ಕಾಪಾಡಿದ್ದಾರೆ.

ಇದನ್ನೂ ಓದಿ: ಸೂರತ್​ನ ಪ್ಯಾಕೇಜಿಂಗ್ ಪ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಇಬ್ಬರು ಸಾವು, 125 ಮಂದಿಗೆ ಗಾಯ

Sri Reddy: ‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್