AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿಗೆ ನಿಲುಕದ ದುರಂತ, ಮಗಳ ಮದುವೆಗಾಗಿ ಸಿದ್ಧತೆ ನಡೆಸಿದ್ದ ಮನೆ ಬೆಂಕಿಗೆ ಆಹುತಿ, ಭಸ್ಮವಾದ ಹಣ ಚಿನ್ನಾಭರಣ

Wedding Tragedy: ಮನೆಯಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ನಗದು, ಚಿನ್ನಾಭರಣ, ಬೆಳ್ಳಿಯ ಆಭರಣಗಳು ಬೆಂಕಿಗೆ ಆಹುತಿಯಾಗಿವೆ. ಮದುವೆ ದಿನ ಸಮೀಪಿಸುತ್ತಿದ್ದಂತೆ ಮುಂದೇನು ಮಾಡಬೇಕು ಎಂದು ತೋಚದೆ ಮನೆಯವರು ತೀವ್ರ ಅಳಲು ತೋಡಿಕೊಳ್ಳುತ್ತಿದ್ದಾರೆ.

ಮಾತಿಗೆ ನಿಲುಕದ ದುರಂತ, ಮಗಳ ಮದುವೆಗಾಗಿ ಸಿದ್ಧತೆ ನಡೆಸಿದ್ದ ಮನೆ ಬೆಂಕಿಗೆ ಆಹುತಿ, ಭಸ್ಮವಾದ ಹಣ ಚಿನ್ನಾಭರಣ
ಮದುವೆಗಾಗಿ ಸಿದ್ಧತೆ ನಡೆಸಿದ್ದ ಮನೆ ಬೆಂಕಿಗೆ ಆಹುತಿ, ಭಸ್ಮವಾದ ಹಣ ಆಭರಣ
ಸಾಧು ಶ್ರೀನಾಥ್​
|

Updated on: Feb 21, 2024 | 1:14 PM

Share

ಕರ್ನೂಲ್ ಜಿಲ್ಲೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸಂಭ್ರಮ ಮನೆಮಾಡಿದ್ದ ಆ ಮನೆಯಲ್ಲಿ ವಿಷಾದವಷ್ಟೇ ಉಳಿದಿದೆ. ಹೆಣ್ಣು ಮಗಳಿಗಾಗಿ ಮದುವೆ ಮಾಡಲು ಪಟ್ಟ ಶ್ರಮವೆಲ್ಲ ವ್ಯರ್ಥವಾಗಿದೆ. ಮದುವೆ ದಿನಾಂಕದ ಬಗ್ಗೆಯೂ ಸಂಬಂಧಿಕರಿಗೆ ಮಾಹಿತಿ ನೀಡಿ, ಆಹ್ವಾನಿಸಲಾಗಿತ್ತು. ಮದುವೆಯ ದಿನ ಹತ್ತಿರವಾಗುತ್ತಿದಂತೆ ಸಾಲಸೋಲ ಮಾಡಿ ನಗದು, ಚಿನ್ನಾಭರಣ, ಬೆಳ್ಳಿ ಆಭರಣಗಳನ್ನು ಮನೆಯಲ್ಲಿ ಎತ್ತಿಟ್ಟಿದ್ದಾರೆ. ಸರಿಯಾಗಿ ಅದೇ ವೇಳೆಗೆ ದುರಂತ ಕ್ಷಣ ಎದುರಾಗಿದೆ. ಅಗ್ನಿ ಅನಾಹುತ ಘಟಿಸಿ, ಆಭರಣ, ಹಣ ಎಲ್ಲಾ ಬೆಂಕಿಗೆ ಆಹುತಿಯಾಗಿದೆ. ಈ ಅಚಾನಕ್ಕಾದ ಪ್ರಮಾದವು ನಡೆಯಬೇಕಿದ್ದ ಮದುವೆಗೆ ವಿಘ್ನ ತಂದಿದೆ. ಮನೆಯಲ್ಲಿ ದುಃಖ ಮಡುಗಟ್ಟಿದೆ.

ಕಟಿಕೆ ಮೋಹನ್ ರಾವ್, ನಾಗೇಶ್ವರ್ ರಾವ್ ಅವರು ಕರ್ನೂಲ್ ಜಿಲ್ಲೆಯ ದೇವನಕೊಂಡ ಮಂಡಲದ ಕರಿವೇಮಲ್ ಗ್ರಾಮದ ನಿವಾಸಿಗಳು. ತಮ್ಮ ಸಹೋದರಿಗೆ ವಿವಾಹ ನಿಶ್ಚಯ ಮಾಡಿದರು. ಅದಕ್ಕಾಗಿ ಅಲ್ಲಿ ಇಲ್ಲಿ ಸಾಲಸೋಲ ಮಾಡಿ 15 ಲಕ್ಷ ರೂಪಾಯಿ ನಗದು, 10 ತೊಲೆ ಚಿನ್ನ, 20 ಪೌಂಡ್ ಬೆಳ್ಳಿಯನ್ನು ತಂದು ಮನೆಯಲ್ಲಿ ಮದುವೆ ಸಮಾರಂಭಕ್ಕಾಗಿ ಇಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಆ ಮನೆ ಬೆಂಕಿ ಬಿದ್ದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ.

Also Read:  ಶ್ರೀಕಾಕುಳಂನಲ್ಲಿ ನಡುರಾತ್ರಿ ಜ್ಯುವೆಲ್ಲರಿ ಶಾಪ್​​ ದರೋಡೆ.. ಅಸಲಿಗೆ ಅವರಿಗೆ ಪಿಸ್ತೂಲು ಎಲ್ಲಿಂದ ಬಂತು?

ಮನೆಯಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ನಗದು, ಚಿನ್ನಾಭರಣ, ಬೆಳ್ಳಿಯ ಆಭರಣಗಳು ಬೆಂಕಿಗೆ ಆಹುತಿಯಾಗಿವೆ. ಸಂತ್ರಸ್ತ ಕುಟುಂಬದವರು ತೀವ್ರ ಶೋಕ ವ್ಯಕ್ತಪಡಿಸುತ್ತಿದ್ದಾರೆ. ಮದುವೆ ದಿನ ಸಮೀಪಿಸುತ್ತಿದ್ದಂತೆ ಮುಂದೇನು ಮಾಡಬೇಕು ಎಂದು ತೋಚದೆ ಮನೆಯವರು ತೀವ್ರ ಅಳಲು ತೋಡಿಕೊಳ್ಳುತ್ತಿದ್ದಾರೆ. ಪೊಲೀಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್