AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗರಣಗಳಿಂದ ಬಚಾವ್ ಆಗಲು BJPಗೆ ಅಜಿತ್ ಬೆಂಬಲ, ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ CM ಆಗಿದ್ದೇಗೆ?

ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ 2ನೇ ಬಾರಿಗೆ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ . ಎನ್.ಸಿಪಿ ಪಕ್ಷದ ಅಜಿತ್ ಪವಾರ್ ಇದಕ್ಕೆ ಬೆಂಬಲ ನೀಡಿದ್ದಾರೆ. ಹೀಗೆ ಬಿಜೆಪಿಯ ದೇವೇಂದ್ರ ಫಡ್ನವೀಸ್ 2ನೇ ಬಾರಿಗೆ ಸಿಎಂ ಆಗಲು ಸಹಾಯ ಮಾಡಿದ್ದು ಶರದ್ ಪವಾರ್ ಕುಟುಂಬದೊಳಗಿನ ಕಲಹ. ಈ ಕಲಹದಿಂದಲೇ ಅಜಿತ್ ಪವಾರ್ ತಮ್ಮ ಚಿಕ್ಕಪ್ಪನ ವಿರುದ್ದವೇ ಬಂಡಾಯ ಸಾರಿದ್ದಾರೆ. ಪವಾರ್ ಕುಟುಂಬದೊಳಗೆ ಪಕ್ಷದ ಮೇಲಿನ ಹಿಡಿತಕ್ಕಾಗಿ ಕಲಹ: ಮಹಾರಾಷ್ಟ್ರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ 2ನೇ ಬಾರಿಗೆ ಸಿಎಂ […]

ಹಗರಣಗಳಿಂದ ಬಚಾವ್ ಆಗಲು BJPಗೆ ಅಜಿತ್ ಬೆಂಬಲ, ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ CM ಆಗಿದ್ದೇಗೆ?
ಸಾಧು ಶ್ರೀನಾಥ್​
|

Updated on:Nov 24, 2019 | 8:08 AM

Share

ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ 2ನೇ ಬಾರಿಗೆ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ . ಎನ್.ಸಿಪಿ ಪಕ್ಷದ ಅಜಿತ್ ಪವಾರ್ ಇದಕ್ಕೆ ಬೆಂಬಲ ನೀಡಿದ್ದಾರೆ. ಹೀಗೆ ಬಿಜೆಪಿಯ ದೇವೇಂದ್ರ ಫಡ್ನವೀಸ್ 2ನೇ ಬಾರಿಗೆ ಸಿಎಂ ಆಗಲು ಸಹಾಯ ಮಾಡಿದ್ದು ಶರದ್ ಪವಾರ್ ಕುಟುಂಬದೊಳಗಿನ ಕಲಹ. ಈ ಕಲಹದಿಂದಲೇ ಅಜಿತ್ ಪವಾರ್ ತಮ್ಮ ಚಿಕ್ಕಪ್ಪನ ವಿರುದ್ದವೇ ಬಂಡಾಯ ಸಾರಿದ್ದಾರೆ.

ಪವಾರ್ ಕುಟುಂಬದೊಳಗೆ ಪಕ್ಷದ ಮೇಲಿನ ಹಿಡಿತಕ್ಕಾಗಿ ಕಲಹ: ಮಹಾರಾಷ್ಟ್ರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ 2ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಸಹಾಯ ಮಾಡಿದ್ದು ಶರದ್‌ ಪವಾರ್ ಕುಟುಂಬದೊಳಗಿನ ಕಲಹ. ಶರದ್ ಪವಾರಗೆ ಅಜಿತ್ ಪವಾರ್ ಸ್ವಂತ ಅಣ್ಣನ ಮಗ. ತನ್ನ ಚಿಕ್ಕಪ್ಪನ ವಿರುದ್ಧವೇ ಅಜಿತ್ ಪವಾರ್ ಈಗ ಬಂಡಾಯ ಎದ್ದಿದ್ದಾರೆ. ಅಜಿತ್ ಪವಾರ್ ಹೀಗೆ ಬಂಡಾಯವೇಳಲು ಕಾರಣವಾಗಿದ್ದು ಕೌಟುಂಬಿಕ ಕಲಹ.

ಕಳೆದ ಲೋಕಸಭಾ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಟಿಕೆಟ್ ಹಂಚಿಕೆ ಸಂಬಂಧ ಶರದ್ ಪವಾರ್ ಹಾಗೂ ಅಜಿತ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ಭಿನ್ನಾಭಿಪ್ರಾಯವೂ ಬೂದಿ ಮುಚ್ಚಿದ ಕೆಂಡದಂತಿತ್ತು. ಈಗ ಅದು ಸ್ಪೋಟಗೊಂಡಿದೆ. ಟಿಕೆಟ್ ಹಂಚಿಕೆಯ ಭಿನ್ನಾಭಿಪ್ರಾಯ ಮಾತ್ರವಲ್ಲದೇ, ಅಜಿತ್ ಪವಾರ್ ತಮ್ಮ ಪುತ್ರ ಪಾರ್ಥಗೆ ಮಾಲ್ವಲ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೇಳಿದ್ರು. ಆದರೆ, ಟಿಕೆಟ್ ನೀಡಲು ಶರದ್ ಪವಾರ್ ಹಿಂದೇಟು ಹಾಕಿದ್ದರು. ಆದರೂ ಒತ್ತಡಕ್ಕೆ ಮಣಿದು ಟಿಕೆಟ್ ನೀಡಿದ್ರು.

ಆದರೇ ಪಾರ್ಥ ಪವಾರ್ ಚುನಾವಣೆಯಲ್ಲಿ ಬಾರಿ ಅಂತರದಿಂದ ಸೋಲನ್ನಪ್ಪಿದ್ದಾರೆ. ಮತ್ತೊಂದೆಡೆ ಶರದ್ ಪವಾರ್ ಅವರ ಮತ್ತೊಬ್ಬ ಸೋದರನ ಮಗ ರೋಹಿತ್ ಪವಾರ್, ಅಸೆಂಬ್ಲಿ ಚುನಾವಣೆಯಲ್ಲಿ ಕರಜತ್ ಜಮಖೇಢ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಇದು ಅಜಿತ್ ಪವಾರ್​ಗೆ ಅಭದ್ರತೆಯನ್ನು ಹೆಚ್ಚಿಸಿತು.

ಹಗರಣಗಳಿಂದ ಬಚಾವ್ ಆಗಲು ಬಿಜೆಪಿಗೆ ಅಜಿತ್ ಬೆಂಬಲ: ಎಲ್ಲಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಜೊತೆಗೆ ಎನ್.ಸಿಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದಾಗ ಇದೇ ಅಜಿತ್ ಪವಾರ್ ಡಿಸಿಎಂ ಆಗಿದ್ದರು . ಆಗ ಮಹಾರಾಷ್ಟ್ರ ಸರ್ಕಾರದಲ್ಲಿ ಅಜಿತ್ ಪವಾರ್ ನೀರಾವರಿ ಖಾತೆ ಮಂತ್ರಿಯೂ ಆಗಿದ್ದರು. ಈ ವೇಳೆಯಲ್ಲೇ ನೀರಾವರಿ ಕ್ಷೇತ್ರದಲ್ಲಿ ಹಗರಣ ನಡೆಸಿದ ಆರೋಪವೂ ಇದೆ.

ಇದರ ಬಗ್ಗೆ ದೇವೇಂದ್ರ ಫಡ್ನವೀಸ್ ಎಸಿಬಿ ತನಿಖೆಗೂ ಆದೇಶ ನೀಡಿದ್ದಾರೆ. ಜತೆಗೇ ಅಜಿತ್ ಪವಾರ್ ವಿರುದ್ದ ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ 25 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆಸಿದ ಆರೋಪವೂ ಇದೆ. ಇದರ ಬಗ್ಗೆ ಇ.ಡಿ. ಕೇಸ್ ದಾಖಲಿಸಿಕೊಂಡಿದೆ. ಹೀಗಾಗಿ ಎಸಿಬಿ ತನಿಖೆ ಹಾಗೂ ಇ.ಡಿ. ತನಿಖೆಯಿಂದ ತಪ್ಪಿಸಿಕೊಳ್ಳಲು ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ನೀಡಿ ಜೈಲಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಅನ್ನೋ ಆರೋಪವೂ ಕೇಳಿ ಬಂದಿದೆ.

ಶರದ್ ಪವಾರ್ ಕುಟುಂಬದೊಳಗಿನ ಕಲಹ ಈಗ ಬಯಲಿಗೆ ಬಂದಿದೆ ಅನ್ನೋ ಮಾತುನ್ನು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಶಿವಸೇನೆ, ಎನ್.ಸಿಪಿ ಹಾಗೂ ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಒಪ್ಪಿಗೆ ನೀಡದೇ ಇದ್ದರೇ, ಎನ್.ಸಿಪಿಯ ಒಂದು ಬಣವೇ ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ನಾಯಕರು ಮೊದಲೇ ಸೋನಿಯಾಗಾಂಧಿಗೆ ಎಚ್ಚರಿಸಿದ್ದರು.

ಜತೆಗೇ ಬಿಜೆಪಿ ನಾಯಕರು ಪ್ರಪುಲ್ ಪಟೇಲ್ ಮೂಲಕ ಶರದ್ ಪವಾರ್ ಮನವೊಲಿಸಿ ಎನ್.ಸಿಪಿ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದರು. ಬಿಜೆಪಿ ಬೆಂಬಲಿಸಿದರೇ, ಶರದ್ ಪವಾರ್ ಹಾಗೂ ಪ್ರಪುಲ್ ಪಟೇಲ್ ವಿರುದ್ಧದ ಇ.ಡಿ. ಕೇಸ್ ನಿಂದ ಬಚಾವ್ ಮಾಡುವ ಭರವಸೆ ನೀಡಿದ್ರು. ಹೀಗಾಗಿಯೇ ಸೋನಿಯಾ ಗಾಂಧಿ ಕೂಡ ಶಿವಸೇನೆ ಜೊತೆಗಿನ ಮೈತ್ರಿಗೆ ಒಪ್ಪಿಗೆ ನೀಡಿದ್ದಾರೆ. ಆದರೆ, ಕೊನೆಗೂ ಸೋನಿಯಾಗಾಂಧಿಗೆ ಇದ್ದ ಭಯ ನಿಜವಾಗಿದೆ. ಮೈತ್ರಿಗೆ ಒಪ್ಪಿಗೆ ನೀಡದೇ ಇದ್ದರೇ, ಕರ್ನಾಟಕ ಮಾದರಿಯಲ್ಲಿ ತಮ್ಮ ಶಾಸಕರನ್ನು ಬಿಜೆಪಿ ತನ್ನಡೆಗೆ ಸೆಳೆದುಕೊಳ್ಳಬಹುದು ಅನ್ನೋ ಸೋನಿಯಾಗಾಂಧಿ ಭಯ ಈಗ ನಿಜವಾಗಿದೆ.

Published On - 8:02 am, Sun, 24 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ