AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನರೇಂದ್ರ ಮೋದಿ ಒಬಿಸಿ ಆದದ್ದು ಹೇಗೆ?’; ಜಾತಿ ಗಣತಿ ಪರ ಮತ್ತೆ ರಾಹುಲ್ ಗಾಂಧಿ ಬ್ಯಾಟಿಂಗ್

Caste Census: ಮೀಸಲಾತಿಯ ಬಗ್ಗೆ ಕಾಂಗ್ರೆಸ್, ಬಿಜೆಪಿ ಮತ್ತು ಎಡಪಕ್ಷಗಳಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್​ಸಿ, ಎಸ್​ಟಿಗಳ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುತ್ತದೆ ಎಂದು ಬಿಜೆಪಿ ಆರೋಪಿಸಿದೆ. ಹಾಗೇ, ಪ್ರಧಾನಿ ಮೋದಿ ಜಗತ್ತಿನಲ್ಲಿ ಇರುವುದು ಶ್ರೀಮಂತರು ಮತ್ತು ಬಡವರು ಎಂಬ 2 ಜಾತಿ ಮಾತ್ರ ಎಂದಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

'ನರೇಂದ್ರ ಮೋದಿ ಒಬಿಸಿ ಆದದ್ದು ಹೇಗೆ?'; ಜಾತಿ ಗಣತಿ ಪರ ಮತ್ತೆ ರಾಹುಲ್ ಗಾಂಧಿ ಬ್ಯಾಟಿಂಗ್
ರಾಹುಲ್ ಗಾಂಧಿ
ಸುಷ್ಮಾ ಚಕ್ರೆ
|

Updated on: May 27, 2024 | 9:05 PM

Share

ನವದೆಹಲಿ: ಮೀಸಲಾತಿ ಕುರಿತು ನಡೆಯುತ್ತಿರುವ ಆರೋಪಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ. ಬಿಹಾರದ ಭೋಜ್‌ಪುರದಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯನ್ನು (Lok Sabha Election Rally) ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜಗತ್ತಿನಲ್ಲಿ ಕೇವಲ 2 ಜಾತಿಗಳಿವೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ತನ್ನನ್ನು ಒಬಿಸಿ ಎಂದು ಏಕೆ ಗುರುತಿಸಿಕೊಳ್ಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಾನು ಜಾತಿ ಗಣತಿಯ ವಿಷಯವನ್ನು ಪ್ರಸ್ತಾಪಿಸಿದಾಗ, ನರೇಂದ್ರ ಮೋದಿ ಅವರು ಭಾರತದಲ್ಲಿ ಕೇವಲ 2 ಜಾತಿಗಳಿವೆ. ಅವುಗಳೆಂದರೆ, ಶ್ರೀಮಂತರು ಮತ್ತು ಬಡವರು. ಕೇವಲ ಎರಡೇ ಜಾತಿಗಳಿದ್ದರೆ ನರೇಂದ್ರ ಮೋದಿ ಹೇಗೆ ಒಬಿಸಿ ಆದರು? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!

‘‘ಭಾರತ ದೇಶದಲ್ಲಿ ಶೇ.50ರಷ್ಟು ಜನಸಂಖ್ಯೆ ಹಿಂದುಳಿದವರು, ಶೇ.15ರಷ್ಟು ದಲಿತರು, ಶೇ.8ರಷ್ಟು ಆದಿವಾಸಿಗಳು ಇದ್ದಾರೆ. ಹಿಂದುಳಿದವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರು ಎಷ್ಟು ಮಂದಿ ಇದ್ದಾರೆ ಎಂಬುದು ದೇಶಕ್ಕೆ ಗೊತ್ತಾಗಬೇಕು. ನಾವೂ ಕೂಡ ಆರ್ಥಿಕ ಸಮೀಕ್ಷೆ ನಡೆಯಬೇಕು ಎಂದು ಹೇಳಿದ್ದೆವು. ದೇಶದಲ್ಲಿ ಕೇವಲ 2 ಜಾತಿಗಳಿದ್ದರೆ ಮೋದಿಯವರು ಒಬಿಸಿ ಆಗಿದ್ದು ಹೇಗೆ? ನಮ್ಮ ಸರ್ಕಾರ ಬಂದ ಕೂಡಲೇ ಜಾತಿ ಗಣತಿ, ಆರ್ಥಿಕ ಸಮೀಕ್ಷೆ ಮತ್ತು ಸಾಂಸ್ಥಿಕ ಸಮೀಕ್ಷೆ ನಡೆಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಿಂದ ರಾಹುಲ್ ಗಾಂಧಿ, ಕೇಜ್ರಿವಾಲ್​ಗೆ ಬೆಂಬಲ; ಮೋದಿ ಹೇಳಿದ್ದೇನು?

2023ರ ನವೆಂಬರ್​ನಲ್ಲಿ ಛತ್ತೀಸ್‌ಗಢದ ದುರ್ಗ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಭಾರತದಲ್ಲಿ ಒಂದೇ ಜಾತಿ ಇದೆ. ಅದು ಬಡತನ ಎಂದು ಹೇಳಿದ್ದರು. “ಬಡವರಿಗೆ ಮೋದಿ ಅವರ ಸೇವಕ, ಅವರ ಸಹೋದರ ಮತ್ತು ಅವರ ಮಗ” ಎಂದು ಕೂಡ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ