AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳು ಬಿಜೆಪಿಗೆ ಹೇಗೆ ಹಾನಿ ಮಾಡಿವೆ?: ವೈರಲ್ ವಿಡಿಯೊ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ನಾಯಿಗೆ ಬಿಸ್ಕೆಟ್ ನೀಡಿದ ವೈರಲ್ ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಆ ನಾಯಿ ಹೆದರಿತ್ತು, ನಡುಗುತ್ತಿತ್ತು. ನಾನು ಅದಕ್ಕೆ ತಿನ್ನಿಸಲು ಪ್ರಯತ್ನಿಸಿದಾಗ ಅದು ಹೆದರಿತು. ಹಾಗಾಗಿ ನಾನು ನಾಯಿಯ ಮಾಲೀಕರಿಗೆ ಬಿಸ್ಕೆಟ್‌ಗಳನ್ನು ನೀಡಿದ್ದೇನೆ. ಆಮೇಲೆ ನಾಯಿ ಅವರ  ಕೈಯಿಂದ ಬಿಸ್ಕೆಟ್ ತಿಂದಿತು. ಸಮಸ್ಯೆ ಏನು ಎಂದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ನಾಯಿಗಳು ಬಿಜೆಪಿಗೆ ಹೇಗೆ ಹಾನಿ ಮಾಡಿವೆ?: ವೈರಲ್ ವಿಡಿಯೊ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on:Feb 06, 2024 | 5:05 PM

Share

ದೆಹಲಿ ಫೆಬ್ರುವರಿ 06: ಜಾರ್ಖಂಡ್‌ನಲ್ಲಿ (Jharkhand) ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ (Bharat Jodo Nyay Yatra) ವೇಳೆ ನಾಯಿಮರಿಗೆ ಬಿಸ್ಕೆಟ್ ತಿನ್ನಿಸುತ್ತಿರುವ ವಿಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪ್ರತಿಕ್ರಿಯೆ ನೀಡಿದ್ದಾರೆ. ರಾಹುಲ್ ಗಾಂಧಿ ನಾಯಿಮರಿಯನ್ನು ಮುದ್ದಿಸುತ್ತಿರುವುದು ಮತ್ತು ನಂತರ ಅದಕ್ಕೆ ಬಿಸ್ಕೆಟ್ ತಿನ್ನಿಸುವುದನ್ನು ವಿಡಿಯೊ ತೋರಿಸಿದೆ. ರಾಹುಲ್ ನಾಯಿಮರಿಗೆ ಬಿಸ್ಕೆಟ್ ನೀಡಿದಾಗ ಅದು ತಿನ್ನಲು ನಿರಾಕರಿಸುತ್ತದೆ. ಆಗ ರಾಹುಲ್ ತನ್ನೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿಯ ಕೈಗೆ ಬಿಸ್ಕೆಟ್‌ಗಳನ್ನು ನೀಡಿದರು. ಈ ವಿಡಿಯೊ ಮೂಲಕ ಕಾಂಗ್ರೆಸ್ ನಾಯಕರನ್ನು ಬಿಜೆಪಿ ಗುರಿಯಾಗಿಸಿದ್ದು, ಅವರು ತಮ್ಮ ಬೆಂಬಲಿಗರನ್ನು ನಾಯಿಗಳಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಂದ ಹಾಗೆ ವಿಡಿಯೊದಲ್ಲಿರುವ ವ್ಯಕ್ತಿ ನಿಜವಾಗಿಯೂ ನಾಯಿಯ ಮಾಲೀಕರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ನಾಯಿ ಹೆದರಿತ್ತು, ನಡುಗುತ್ತಿತ್ತು. ನಾನು ಅದಕ್ಕೆ ತಿನ್ನಿಸಲು ಪ್ರಯತ್ನಿಸಿದಾಗ ಅದು ಹೆದರಿತು. ಹಾಗಾಗಿ ನಾನು ನಾಯಿಯ ಮಾಲೀಕರಿಗೆ ಬಿಸ್ಕೆಟ್‌ಗಳನ್ನು ನೀಡಿದ್ದೇನೆ. ಆಮೇಲೆ ನಾಯಿ ಅವರ  ಕೈಯಿಂದ ಬಿಸ್ಕೆಟ್ ತಿಂದಿತು. ಸಮಸ್ಯೆ ಏನು ಎಂದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ. ವಿಡಿಯೋದಲ್ಲಿರುವ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿರುವ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, “ಇಲ್ಲ, ಅವರು ಕಾಂಗ್ರೆಸ್ ಕಾರ್ಯಕರ್ತನಾಗಿರಲಿಲ್ಲ. ಬಿಜೆಪಿಗೆ ನಾಯಿಗಳ ಮೇಲಿನ ವ್ಯಾಮೋಹ ನನಗೆ ಅರ್ಥವಾಗುತ್ತಿಲ್ಲ. ನಾಯಿಗಳು ಅವರಿಗೆ ಹೇಗೆ ಹಾನಿ ಮಾಡಿದೆ? ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

ಇದಕ್ಕೂ ಮುನ್ನ ಹಲವು ಬಿಜೆಪಿ ನಾಯಕರು ವೈರಲ್ ವಿಡಿಯೊ ಕುರಿತು ಕಾಂಗ್ರೆಸ್ ಸಂಸದರನ್ನು ಗುರಿಯಾಗಿಸಿಕೊಂಡಿದ್ದರು. ಅವರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಇದ್ದರು. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಶರ್ಮಾ ಇತರ ಹಿರಿಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಘಟನೆಯನ್ನು ಆಗಾಗ್ಗೆ ವಿವರಿಸುತ್ತಾರೆ.

ಗಾಂಧಿಯವರ ಮುದ್ದಿನ ನಾಯಿ ಪಿಡಿ ಪ್ಲೇಟ್‌ನಿಂದ ಬಿಸ್ಕೆಟ್‌ಗಳನ್ನು ತಿನ್ನುತ್ತದೆ. ನಂತರ ಕಾಂಗ್ರೆಸ್ ನಾಯಕರಿಗೆ ಅದೇ ಪ್ಲೇಟ್‌ನಿಂದ ಬಿಸ್ಕೆಟ್ ನೀಡಲಾಯಿತು ಎಂದು ಶರ್ಮಾ ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ. ಈ ಸಂದರ್ಶನಗಳಲ್ಲಿ, ಶರ್ಮಾ ಅವರು ಪಕ್ಷದ ಪ್ರಮುಖ ವಿಷಯಗಳ ಬಗ್ಗೆ ಗಾಂಧಿ ಗಂಭೀರವಾಗಿಲ್ಲ ಎಂಬ ಅವರ ಹೇಳಿಕೆಯನ್ನು ಹೆಚ್ಚಿಸಲು ಆಪಾದಿತ ಘಟನೆಯನ್ನು ಬಳಸಿದ್ದಾರೆ.

ಇದನ್ನೂ  ಓದಿ: ನಾಯಿ ತಿನ್ನಲಿಲ್ಲ ಎಂದು ಅದೇ ಬಿಸ್ಕತ್ತನ್ನು ತನ್ನ ಕಾರ್ಯಕರ್ತನಿಗೆ ಕೊಟ್ಟ ರಾಹುಲ್ ಗಾಂಧಿ, ವಿಡಿಯೋ ವೈರಲ್

ನಾಯಿಮರಿ ವಿಡಿಯೊದಲ್ಲಿ ಅವರನ್ನು ಟ್ಯಾಗ್ ಮಾಡಿದ ‘X’ ಬಳಕೆದಾರರಿಗೆ ಪ್ರತಿಕ್ರಿಯಿಸಿದ ಶರ್ಮಾ. ರಾಹುಲ್ ಗಾಂಧಿ ಮಾತ್ರವಲ್ಲದೆ ಇಡೀ ಕುಟುಂಬಕ್ಕೆ ನನಗೆ ಆ ಬಿಸ್ಕೆಟ್ ತಿನಿಸಲು ಸಾಧ್ಯವಾಗಲಿಲ್ಲ. ನಾನು ಹೆಮ್ಮೆಯ ಅಸ್ಸಾಮಿ ಮತ್ತು ಭಾರತೀಯ, ನಾನು ತಿನ್ನಲು ನಿರಾಕರಿಸಿದ್ದೇನೆ ಮತ್ತು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ” ಎಂದು ಅವರು ಹೇಳಿದರು. ಮತ್ತೋರ್ವ ಬಿಜೆಪಿ ನಾಯಕ ಅಮಿತ್ ಮಾಳವಿಯಾ, “ರಾಜಕುಮಾರ ಪಕ್ಷದ ಕಾರ್ಯಕರ್ತರನ್ನು ನಾಯಿಗಳಂತೆ ನಡೆಸಿಕೊಂಡಾಗ ಪಕ್ಷವು ಅಳಿದುಹೋಗುವುದು ಸಹಜ” ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Tue, 6 February 24

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ