AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ದಿನ ಪ್ರಶ್ನೆಗಳಿಂದ ಓಡ್ತೀರಿ? ಈಗ ಛತ್ತೀಸ್‌ಗಢದಲ್ಲಿ ‘ಭಾಗ್ ಭೂಪೇಶ್ ಭಾಗ್’: ಅನುರಾಗ್ ಠಾಕೂರ್

ಭೂಪೇಶ್ ಬಘೇಲ್ ಅವರ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಈಗ ಮಹಾದೇವ್ ಆಪ್ ಭ್ರಷ್ಟಾಚಾರ ಕೂಡ ಒಂದು. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್​ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಚಿವ ಅನುರಾಗ್ ಠಾಕೂರ್ ಕಾಂಗ್ರೆಸ್​​​ ವಿರುದ್ಧ ಕಿಡಿಕಾರಿದ್ದಾರೆ. ಭೂಪೇಶ್ ಬಾಘೇಲ್ ಮಹದೇವ್ ಆ್ಯಪ್‌ನಿಂದ 508 ಕೋಟಿ ತೆಗೆದುಕೊಂಡಿದ್ದಾರೆ. ಅದಕ್ಕೆ ಈ ಆಪ್​ನ್ನು ಬ್ಯಾನ್ ಮಾಡಿಲ್ಲ. ಇನ್ನು ಇದನ್ನು ಬ್ಯಾನ್​​ ಮಾಡಲು ಕೇಂದ್ರಕ್ಕೆ ಪತ್ರ ಬರೆದಿದ್ದಾರಾ? ಈ ಯಾವ ಪ್ರಶ್ನೆಗೂ ಉತ್ತರ ನೀಡುತ್ತಿಲ್ಲ. ಎಷ್ಟು ದಿನ ಪ್ರಶ್ನೆಗಳಿಂದ ಓಡುತ್ತೀರಿ? ಈಗ ಛತ್ತೀಸ್‌ಗಢವು 'ಭಾಗ್ ಭೂಪೇಶ್ ಭಾಗ್' ಎಂದು ಹೇಳುತ್ತಿದೆ.

ಎಷ್ಟು ದಿನ ಪ್ರಶ್ನೆಗಳಿಂದ ಓಡ್ತೀರಿ? ಈಗ ಛತ್ತೀಸ್‌ಗಢದಲ್ಲಿ 'ಭಾಗ್ ಭೂಪೇಶ್ ಭಾಗ್': ಅನುರಾಗ್ ಠಾಕೂರ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 07, 2023 | 12:12 PM

Share

ಭೋಪಾಲ್, ನ.7: ಛತ್ತೀಸ್‌ಗಢನಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಈ ಮಧ್ಯೆ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ (bhupesh baghel) ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಕೇಂದ್ರ ಸರ್ಕಾರದ ಸಚಿವರು ಕೂಡ ಈ ಬಗ್ಗೆ ಆರೋಪ ಮಾಡಿದ್ದಾರೆ. ಭೂಪೇಶ್ ಬಘೇಲ್ ಅವರು ಮಹಾದೇವ್ ಬೆಟ್ಟಿಂಗ್ ಆ್ಯಪ್ (mahadev online betting) ಪ್ರವರ್ತಕರಿಂದ 508 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ (anurag thakur) ಅವರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದವರು ದೊಡ್ಡ ದರೋಡೆಕೋರ ಎಂದು ಹೇಳಿದ್ದಾರೆ. ಮಹಾದೇವ್ ಆ್ಯಪ್‌ನಿಂದ ಪಡೆದ ಹಣವನ್ನು ಮುಖ್ಯಮಂತ್ರಿ ಹಾಗೂ ಅವರ ಮಂತ್ರಿಗಳಿಗೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಭೂಪೇಶ್ ಬಘೇಲ್ ಅವರ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಈಗ ಮಹಾದೇವ್ ಆಪ್ ಭ್ರಷ್ಟಾಚಾರ ಕೂಡ ಒಂದು. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್​ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಚಿವ ಅನುರಾಗ್ ಠಾಕೂರ್ ಕಾಂಗ್ರೆಸ್​​​ ವಿರುದ್ಧ ಕಿಡಿಕಾರಿದ್ದಾರೆ. ಭೂಪೇಶ್ ಬಾಘೇಲ್ ಮಹದೇವ್ ಆ್ಯಪ್‌ನಿಂದ 508 ಕೋಟಿ ತೆಗೆದುಕೊಂಡಿದ್ದಾರೆ. ಅದಕ್ಕೆ ಈ ಆಪ್​ನ್ನು ಬ್ಯಾನ್ ಮಾಡಿಲ್ಲ. ಇನ್ನು ಇದನ್ನು ಬ್ಯಾನ್​​ ಮಾಡಲು ಕೇಂದ್ರಕ್ಕೆ ಪತ್ರ ಬರೆದಿದ್ದಾರಾ? ಈ ಯಾವ ಪ್ರಶ್ನೆಗೂ ಉತ್ತರ ನೀಡುತ್ತಿಲ್ಲ. ಎಷ್ಟು ದಿನ ಪ್ರಶ್ನೆಗಳಿಂದ ಓಡುತ್ತೀರಿ? ಈಗ ಛತ್ತೀಸ್‌ಗಢವು ‘ಭಾಗ್ ಭೂಪೇಶ್ ಭಾಗ್’ ಎಂದು ಹೇಳುತ್ತಿದೆ. ಇನ್ನು ದೆಹಲಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಹಾಗೂ ಅರವಿಂದ್ ಕೇಜ್ರಿವಾಲ್ ಎಲ್ಲಿಗೆ ಹೋಗಿದ್ದಾರೆ, ಅಲ್ಲಿಗೆ ನೀವು ಹೋಗುತ್ತಿರ ಎಂದು ಹೇಳಿದ್ದಾರೆ.

ಈಗಾಗಲೇ ಆನ್‌ಲೈನ್ ಬೆಟ್ಟಿಂಗ್ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಮಹದೇವ್ ಬುಕ್ ಆ್ಯಪ್ ಮನಿ ಲಾಂಡರಿಂಗ್ ಪ್ರಕರಣವು ಮತ್ತೆ ಮರುಜೀವ ಪಡೆದುಕೊಂಡಿದೆ, ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಕೈವಾಡ ಇದೆ ಎಂಬ ಆರೋಪದ ಮೇಲೆ ಇಡಿ ಪ್ರಕರಣ ದಾಖಲಿಸಿಕೊಂಡಿದೆ. ಈ ಆ್ಯಪ್ ಅನ್ನು ದುಬೈ ಮೂಲದ  ಜ್ಯೂಸ್ ಮಾರಾಟಗಾರ ಸೌರಭ್ ಚಂದ್ರಕರ್ ಮತ್ತು ಅವರ ಸಹಚರ ರವಿ ಉಪ್ಪಲ್ ನಡೆಸುತ್ತಿದ್ದರು. ಈ ಇಬ್ಬರು ಛತ್ತೀಸ್‌ಗಢ ಮೂಲದವರು ಎಂದು ಹೇಳಲಾಗಿದೆ. ಈ ಆಪ್ಯ ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಿದೆ. ಆನ್‌ಲೈನ್ ಕ್ಯಾಸಿನೊ ಮತ್ತು ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಕೂಡ ನೀಡುತ್ತದೆ ಎಂದು ಇಡಿ ಹೇಳಿದೆ.

ಇದನ್ನೂ ಓದಿ; ಮಹಾದೇವ್ ಬೆಟ್ಟಿಂಗ್ ಆ್ಯಪ್​ ಪ್ರಕರಣ: ಛತ್ತೀಸ್​ಗಢ ಸಿಎಂ ಭೂಪೇಶ್ ಬಘೇಲ್ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ

ಇನ್ನು ಬಾಲಿವುಡ್​​ ತಾರೆಯಾರದ ರಣಬೀರ್ ಕಪೂರ್, ಹುಮಾ ಖುರೇಷಿ, ಬೊಮನ್ ಇರಾನಿ ಮತ್ತು ಶ್ರದ್ಧಾ ಕಪೂರ್​​ನ್ನು ಇಡಿ ವಿಚಾರಣೆಗೆ ಕರೆಸಿಕೊಂಡಿದೆ. ಈಗಾಗಲೇ ಛತ್ತೀಸ್‌ಗಢ ಚುನಾವಣೆ ನಡೆಯುತ್ತಿದ್ದು, ಸಿಎಂ ಮೇಲೆ ಇಂತಹ ಬಹುದೊಡ್ಡ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಇಡಿ ತನಿಖೆಯನ್ನು ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​