AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತಂದಿರಾ?’-ಕಾಂಗ್ರೆಸ್ ನಾಯಕ ಅಧೀರ್​ ರಂಜನ್​ ಚೌಧರಿ ಪ್ರಶ್ನೆ

ನೀವು ಗಿಲ್ಗಿಟ್​ ಬಲ್ಟಿಸ್ತಾನವನ್ನು ವಾಪಸ್​ ತರುತ್ತೇವೆ ಎನ್ನುತ್ತಿದ್ದೀರಿ, ಆದರೆ ಅದಕ್ಕೂ ಮೊದಲು ಕಾಶ್ಮೀರ ವ್ಯಾಲಿಯಲ್ಲಿ ಪಡಬಾರದ ಕಷ್ಟ ಅನುಭವಿಸಿ, ಹೋದವರನ್ನು, ಸ್ಥಳಾಂತರ ಆದವರನ್ನು ಕರೆತನ್ನಿ ಎಂದು ಅಧೀರ್​ ರಂಜನ್ ಚೌಧರಿ ಹೇಳಿದರು.

‘ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತಂದಿರಾ?'-ಕಾಂಗ್ರೆಸ್ ನಾಯಕ ಅಧೀರ್​ ರಂಜನ್​ ಚೌಧರಿ ಪ್ರಶ್ನೆ
ಗೃಹ ಸಚಿವ ಅಮಿತ್​ ಶಾ ಮತ್ತು ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ
Lakshmi Hegde
|

Updated on: Feb 13, 2021 | 6:10 PM

Share

ದೆಹಲಿ: ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 (ವಿಶೇಷ ಸ್ಥಾನಮಾನ)ನ್ನು ರದ್ದುಗೊಳಿಸುವ ಮೊದಲು ನೀಡಿದ್ದ ಅಭಿವೃದ್ಧಿ ಭರವಸೆಗಳನ್ನೆಲ್ಲ ಈಡೇರಿಸಿದ್ದೀರಾ ಎಂದು ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿಯವರು, ಗೃಹ ಸಚಿವ ಅಮಿತ್​ ಶಾ ಅವರನ್ನು ಪ್ರಶ್ನಿಸಿದರು. ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಧೀರ್ ರಂಜನ್ ಚೌಧರಿ, ಜಮ್ಮುಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೊದಲು ನೀವು ನೀಡಿದ್ದ ಭರವಸೆಯೆಲ್ಲ ಹಾಗೇ ಇದೆ. ಯಾವುದೂ ಪೂರ್ಣಗೊಂಡಿಲ್ಲ. ಅಷ್ಟೇ ಏಕೆ, ಇಂದಿಗೂ ಸಹ ಜಮ್ಮು-ಕಾಶ್ಮೀರ ಸಹಜ ಸ್ಥಿತಿಗೆ ಮರಳಿಲ್ಲ ಎಂದು ಹೇಳಿದರು.

ಕಾಶ್ಮೀರದಲ್ಲಿ ಸುಮಾರು 90 ಸಾವಿರ ಕೋಟಿ ರೂ.ಮೌಲ್ಯದ ಸ್ಥಳೀಯ ಉದ್ಯಮಗಳು ಸಂಪೂರ್ಣ ನೆಲಕಚ್ಚಿವೆ. ಜಮ್ಮು-ಕಾಶ್ಮೀರವನ್ನು ಇನ್ನು ಹೇಗೆ ಅಭಿವೃದ್ಧಿ ಮಾಡುತ್ತೀರಿ ಎಂದು ನೀವು ನಮಗೆ ಹೇಳಿ. ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್​ ಕರೆತರುವುದಾಗಿ ಹೇಳಿದ್ದೀರಿ..ಅದು ಸಾಧ್ಯವಾಯಿತಾ? ಎಷ್ಟು ಜನ ಕಾಶ್ಮೀರಿ ಪಂಡಿತರನ್ನು, ಬ್ರಾಹ್ಮಣರನ್ನು ವಾಪಸ್​ ಕರೆತಂದಿದ್ದೀರಿ? ಕಾಶ್ಮೀರಿ ಪಂಡಿತರಿಗೆ 200-300 ಎಕರೆ ಭೂಮಿ ಕೊಡಲು ನಿಮಗೆ ಸಾಧ್ಯವಾಗಲಿಲ್ಲ ಎಂದರು.

ನೀವು ಗಿಲ್ಗಿಟ್​ ಬಲ್ಟಿಸ್ತಾನವನ್ನು ವಾಪಸ್​ ತರುತ್ತೇವೆ ಎನ್ನುತ್ತಿದ್ದೀರಿ, ಆದರೆ ಅದಕ್ಕೂ ಮೊದಲು ಕಾಶ್ಮೀರ ವ್ಯಾಲಿಯಲ್ಲಿ ಪಡಬಾರದ ಕಷ್ಟ ಅನುಭವಿಸಿ, ಹೋದವರನ್ನು, ಸ್ಥಳಾಂತರ ಆದವರನ್ನು ಕರೆತನ್ನಿ ಎಂದು ಹೇಳಿದರು.

ಇದನ್ನೂ ಓದಿ: Spinal Muscular Atrophy | ಕಂದನ ಉಳಿಸು ಕರ್ನಾಟಕ: ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ ಚಂದ್ರಶೇಖರ್..!

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ