AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತಂದಿರಾ?’-ಕಾಂಗ್ರೆಸ್ ನಾಯಕ ಅಧೀರ್​ ರಂಜನ್​ ಚೌಧರಿ ಪ್ರಶ್ನೆ

ನೀವು ಗಿಲ್ಗಿಟ್​ ಬಲ್ಟಿಸ್ತಾನವನ್ನು ವಾಪಸ್​ ತರುತ್ತೇವೆ ಎನ್ನುತ್ತಿದ್ದೀರಿ, ಆದರೆ ಅದಕ್ಕೂ ಮೊದಲು ಕಾಶ್ಮೀರ ವ್ಯಾಲಿಯಲ್ಲಿ ಪಡಬಾರದ ಕಷ್ಟ ಅನುಭವಿಸಿ, ಹೋದವರನ್ನು, ಸ್ಥಳಾಂತರ ಆದವರನ್ನು ಕರೆತನ್ನಿ ಎಂದು ಅಧೀರ್​ ರಂಜನ್ ಚೌಧರಿ ಹೇಳಿದರು.

‘ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆತಂದಿರಾ?'-ಕಾಂಗ್ರೆಸ್ ನಾಯಕ ಅಧೀರ್​ ರಂಜನ್​ ಚೌಧರಿ ಪ್ರಶ್ನೆ
ಗೃಹ ಸಚಿವ ಅಮಿತ್​ ಶಾ ಮತ್ತು ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ
Lakshmi Hegde
|

Updated on: Feb 13, 2021 | 6:10 PM

Share

ದೆಹಲಿ: ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 (ವಿಶೇಷ ಸ್ಥಾನಮಾನ)ನ್ನು ರದ್ದುಗೊಳಿಸುವ ಮೊದಲು ನೀಡಿದ್ದ ಅಭಿವೃದ್ಧಿ ಭರವಸೆಗಳನ್ನೆಲ್ಲ ಈಡೇರಿಸಿದ್ದೀರಾ ಎಂದು ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿಯವರು, ಗೃಹ ಸಚಿವ ಅಮಿತ್​ ಶಾ ಅವರನ್ನು ಪ್ರಶ್ನಿಸಿದರು. ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಧೀರ್ ರಂಜನ್ ಚೌಧರಿ, ಜಮ್ಮುಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೊದಲು ನೀವು ನೀಡಿದ್ದ ಭರವಸೆಯೆಲ್ಲ ಹಾಗೇ ಇದೆ. ಯಾವುದೂ ಪೂರ್ಣಗೊಂಡಿಲ್ಲ. ಅಷ್ಟೇ ಏಕೆ, ಇಂದಿಗೂ ಸಹ ಜಮ್ಮು-ಕಾಶ್ಮೀರ ಸಹಜ ಸ್ಥಿತಿಗೆ ಮರಳಿಲ್ಲ ಎಂದು ಹೇಳಿದರು.

ಕಾಶ್ಮೀರದಲ್ಲಿ ಸುಮಾರು 90 ಸಾವಿರ ಕೋಟಿ ರೂ.ಮೌಲ್ಯದ ಸ್ಥಳೀಯ ಉದ್ಯಮಗಳು ಸಂಪೂರ್ಣ ನೆಲಕಚ್ಚಿವೆ. ಜಮ್ಮು-ಕಾಶ್ಮೀರವನ್ನು ಇನ್ನು ಹೇಗೆ ಅಭಿವೃದ್ಧಿ ಮಾಡುತ್ತೀರಿ ಎಂದು ನೀವು ನಮಗೆ ಹೇಳಿ. ಅಮಿತ್​ ಜೀ, ನೀವು ಕಾಶ್ಮೀರಿ ಪಂಡಿತರನ್ನು ವಾಪಸ್​ ಕರೆತರುವುದಾಗಿ ಹೇಳಿದ್ದೀರಿ..ಅದು ಸಾಧ್ಯವಾಯಿತಾ? ಎಷ್ಟು ಜನ ಕಾಶ್ಮೀರಿ ಪಂಡಿತರನ್ನು, ಬ್ರಾಹ್ಮಣರನ್ನು ವಾಪಸ್​ ಕರೆತಂದಿದ್ದೀರಿ? ಕಾಶ್ಮೀರಿ ಪಂಡಿತರಿಗೆ 200-300 ಎಕರೆ ಭೂಮಿ ಕೊಡಲು ನಿಮಗೆ ಸಾಧ್ಯವಾಗಲಿಲ್ಲ ಎಂದರು.

ನೀವು ಗಿಲ್ಗಿಟ್​ ಬಲ್ಟಿಸ್ತಾನವನ್ನು ವಾಪಸ್​ ತರುತ್ತೇವೆ ಎನ್ನುತ್ತಿದ್ದೀರಿ, ಆದರೆ ಅದಕ್ಕೂ ಮೊದಲು ಕಾಶ್ಮೀರ ವ್ಯಾಲಿಯಲ್ಲಿ ಪಡಬಾರದ ಕಷ್ಟ ಅನುಭವಿಸಿ, ಹೋದವರನ್ನು, ಸ್ಥಳಾಂತರ ಆದವರನ್ನು ಕರೆತನ್ನಿ ಎಂದು ಹೇಳಿದರು.

ಇದನ್ನೂ ಓದಿ: Spinal Muscular Atrophy | ಕಂದನ ಉಳಿಸು ಕರ್ನಾಟಕ: ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ ಚಂದ್ರಶೇಖರ್..!

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು