AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಬಾಂಡ್​ಗಳ ಮೂಲಕ ಯಾವ ಯಾವ ಪಕ್ಷಗಳಲ್ಲಿ ಎಷ್ಟು ಹಣ ಸಂದಾಯವಾಗಿದೆ? ಇಲ್ಲಿದೆ ಮಾಹಿತಿ

ಚುನಾವಣಾ ಬಾಂಡ್ ಅಥವಾ ಎಲೆಕ್ಟೋರಲ್ ಬಾಂಡ್ ಯೋಜನೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣವು 8 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ದಾನಿಗಳ ಗುರುತನ್ನು ಗೌಪ್ಯವಾಗಿಡುವ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಇದರಿಂದ ಕಪ್ಪುಹಣಕ್ಕೆ ಉತ್ತೇಜನ ಸಿಗಬಹುದು ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಬಾಂಡ್​ಗಳ ಮೂಲಕ ಯಾವ ಯಾವ ಪಕ್ಷಗಳಲ್ಲಿ ಎಷ್ಟು ಹಣ ಸಂದಾಯವಾಗಿದೆ? ಇಲ್ಲಿದೆ ಮಾಹಿತಿ
ಬಿಜೆಪಿ, ಕಾಂಗ್ರೆಸ್​ Image Credit source: India Today
Follow us
ನಯನಾ ರಾಜೀವ್
|

Updated on: Nov 02, 2023 | 11:42 AM

ಚುನಾವಣಾ ಬಾಂಡ್ ಅಥವಾ ಎಲೆಕ್ಟೋರಲ್ ಬಾಂಡ್(Electoral  Bond) ಯೋಜನೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್(Supreme Court) ವಿಚಾರಣೆ ನಡೆಸುತ್ತಿದೆ. ಈ ಪ್ರಕರಣವು 8 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ದಾನಿಗಳ ಗುರುತನ್ನು ಗೌಪ್ಯವಾಗಿಡುವ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಇದರಿಂದ ಕಪ್ಪುಹಣಕ್ಕೆ ಉತ್ತೇಜನ ಸಿಗಬಹುದು ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್​ ಎಷ್ಟು ಚುನಾವಣಾ ಬಾಂಡ್​ಗಳನ್ನು ಪಡೆದಿವೆ ಎಂಬುದನ್ನು ನೋಡೋಣ. ಎಡಿಆರ್​ ಅಂಕಿ ಅಂಶಗಳ ಪ್ರಕಾರ ಬಿಜೆಪಿಯು ಶೇ.57ರಷ್ಟು ಹಣವನ್ನು ಸ್ವೀಕರಿಸಿದೆ ಮತ್ತು ವಿರೋಧ ಪಕ್ಷವು ಕೇವಲ ಶೇ.10ರಷ್ಟು ಹಣವನ್ನು ದೇಣಿಗೆಯಾಗಿ ಪಡೆದಿವೆ.

ಎಡಿಆರ್ ಡೇಟಾದ ಪ್ರಕಾರ ಎಲೆಕ್ಟೋರಲ್ ಬಾಂಡ್​ಗಳು 2021-22ರವರೆಗೆ ಒಟ್ಟಾರೆಯಾಗಿ ಎಲ್ಲಾ ರಾಜಕೀಯ ಪಕ್ಷಗಳಿಗೆ 9,188 ಕೋಟಿ ರೂಪಾಯಿಗಿಂತ ಹೆಚ್ಚಿನ ದೇಣಿಗೆಯನ್ನು ನೀಡಿವೆ.

2016-17ರಿಂದ 2021-22ರವರೆಗೆ ಲಭ್ಯವಿರುವ ಅಂಕಿಅಂಶಗಳು, ಏಳು ರಾಷ್ಟ್ರೀಯ ಪಕ್ಷಗಳು ಮತ್ತು 24 ಪ್ರಾದೇಶಿಕ ಪಕ್ಷಗಳು ಒಟ್ಟಾರೆಯಾಗಿ ಒಟ್ಟು 9188.35 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್​ಗಳ ಮೂಲಕ ಪಡೆದಿವೆ.

ಮತ್ತಷ್ಟು ಓದಿ: 2024ರ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಸ್ಥಾನಗಳಲ್ಲಿ ಎನ್‌ಡಿಎಗೆ ಗೆಲುವು: ಅಮಿತ್ ಶಾ

ಪಕ್ಷಗಳು ಚುನಾವಣಾ ಆಯೋಗಕ್ಕೆ ನೀಡಿರುವ ಮಾಹಿತಿ ಪ್ರಕಾರ ಕಳೆದ ಐದು ವರ್ಷಗಳಲ್ಲಿ 10,000 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಚುನಾವಣಾ ಬಾಂಡ್‌ಗಳ ಮೂಲಕ ಈ ಮೊತ್ತವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಡೆದಿದ್ದರೆ, ಕಾಂಗ್ರೆಸ್ ಕೇವಲ 952.29 ಕೋಟಿ ರೂ. ಈ ಡೇಟಾ 2017-2018 ಮತ್ತು 2021-2022 ಆಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಒಟ್ಟು 9,208.23 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು 2017-2018 ಮತ್ತು 2021-2022 ರ ಅವಧಿಯಲ್ಲಿ ಮಾರಾಟ ಮಾಡಲಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಒಟ್ಟು 5,271.97 ಕೋಟಿ ರೂ. ಅದೇ ಸಮಯದಲ್ಲಿ ಕಾಂಗ್ರೆಸ್ 952.9 ಕೋಟಿ ದೇಣಿಗೆ ಪಡೆದಿದೆ.

ಸ್ಥಳೀಯ ಪಕ್ಷಗಳಿಗೂ ಉತ್ತಮ ಫಂಡಿಂಗ್ ಸಿಕ್ಕಿದೆ ರಾಜ್ಯಗಳಲ್ಲಿ ಸುದೀರ್ಘ ಕಾಲ ಅಧಿಕಾರದಲ್ಲಿರುವ ಟಿಎಂಸಿ, ಬಿಜೆಡಿ, ಡಿಎಂಕೆಯಂತಹ ರಾಜಕೀಯ ಪಕ್ಷಗಳೂ ಎಲೆಕ್ಟೋರಲ್ ಬಾಂಡ್ ಮೂಲಕ ಸಾಕಷ್ಟು ಹಣ ಪಡೆದಿವೆ.

ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) 767.88 ಕೋಟಿ ರೂ., ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಪಕ್ಷ ಬಿಜು ಜನತಾ ದಳ (ಬಿಜೆಡಿ) 622 ಕೋಟಿ ರೂ. ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) 50 ಕೋಟಿ ರೂ. ಸಂದಾಯವಾಗಿದೆ.

ಅದೇ ಸಮಯದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) 48.83 ಕೋಟಿ ರೂ. ಮತ್ತು ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ (ಜೆಡಿಯು) 24.40 ಕೋಟಿ ರೂ.ಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ಪಡೆದುಕೊಂಡಿದೆ. ಇದಲ್ಲದೇ ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) 51.5 ಕೋಟಿ ರೂ. ಪಡೆದಿದೆ.

ಏನಿದು ಎಲೆಕ್ಟೋರಲ್ ಬಾಂಡ್ ಸ್ಕೀಮ್? ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು 2018 ರಲ್ಲಿ ಕಾನೂನುಬದ್ಧವಾಗಿ ಜಾರಿಗೊಳಿಸಲಾಗಿದೆ. ಯೋಜನೆಯನ್ನು ಅನುಷ್ಠಾನಗೊಳಿಸುವಾಗ, ರಾಜಕೀಯ ಪಕ್ಷಗಳ ನಿಧಿಯಲ್ಲಿ ಪಾರದರ್ಶಕತೆಯನ್ನು ತರುತ್ತದೆ ಎಂದು ಸರ್ಕಾರ ವಾದಿಸಿತ್ತು. ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಧನಸಹಾಯ ಮಾಡುವ ಹಣಕಾಸಿನ ಸಾಧನವಾಗಿದೆ.

ಪ್ರತಿ ವರ್ಷ, ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ 10 ದಿನಗಳ ಅವಧಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಯ್ದ ಶಾಖೆಗಳಲ್ಲಿ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಲಾಗುತ್ತದೆ.

ಯಾವುದೇ ನಾಗರಿಕನು ಬಾಂಡ್‌ಗಳನ್ನು ಖರೀದಿಸಬಹುದು ಮತ್ತು ಅವರ ಇಚ್ಛೆಯಂತೆ ಯಾವುದೇ ಪಕ್ಷಕ್ಕೆ ನೀಡಬಹುದು. ಆದರೆ, ಆ ಪ್ರಜೆಯ ಗುರುತನ್ನು ಗೌಪ್ಯವಾಗಿಡಲಾಗಿದೆ. ಬಾಂಡ್ ಖರೀದಿಸಿದ 15 ದಿನಗಳಲ್ಲಿ ಇದನ್ನು ಬಳಸಬೇಕು. ವಿವಿಧ ಬೆಲೆಗಳ ಎಲೆಕ್ಟೋರಲ್ ಬಾಂಡ್‌ಗಳು ಲಭ್ಯವಿದೆ. ಅವುಗಳ ಬೆಲೆ 1000, 10,000, 1 ಲಕ್ಷ, 10 ಲಕ್ಷ ಮತ್ತು 1 ಕೋಟಿ ರೂ. ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ