AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಸ್ಪೀಕರ್​ ಆಯ್ಕೆಗೆ ಈವರೆಗೆ ಎಷ್ಟು ಬಾರಿ ನಡೆದಿದೆ ಚುನಾವಣೆ, ಪ್ರಕ್ರಿಯೆ ಏನು?

Lok Sabha Speaker Election: ದೇಶದ ಇತಿಹಾಸದಲ್ಲಿ ಲೋಕಸಭೆಯ ಸ್ಪೀಕರ್ ಹುದ್ದೆಗೆ ಮೊದಲ ಚುನಾವಣೆ 1952ರಲ್ಲಿ ನಡೆಯಿತು. ಆಗ ಕಾಂಗ್ರೆಸ್​ ಪರವಾಗಿ ಆಗಿನ ಪ್ರಧಾನಿ ಜವಾಹರ್​ಲಾಲ್ ನೆಹರು ಜಿವಿ ಪಾಲವಂಕರ್​ ಅವರನ್ನು ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯಾಗಿ ಹೆಸರಿಸಿದ್ದರು. ಇದೇ ವೇಳೆ ಎಕೆ ಗೋಪಾಲನ್ ಅವರು ಸ್ಪೀಕರ್ ಸ್ಥಾನಕ್ಕೆ ಶಂಕರ್ ಶಾಂತಾರಾಮ್ ಮೋರೆ ಅವರ ಹೆಸರನ್ನು ಪ್ರಸ್ತಾಪಿಸಿದ್ದರು.

ಲೋಕಸಭಾ ಸ್ಪೀಕರ್​ ಆಯ್ಕೆಗೆ ಈವರೆಗೆ ಎಷ್ಟು ಬಾರಿ ನಡೆದಿದೆ ಚುನಾವಣೆ, ಪ್ರಕ್ರಿಯೆ ಏನು?
ಓಂ ಬಿರ್ಲಾ
ನಯನಾ ರಾಜೀವ್
|

Updated on: Jun 26, 2024 | 2:16 PM

Share

18ನೇ ಲೋಕಸಭೆಯ ಸ್ಪೀಕರ್​ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಅವರನ್ನು ಆಯ್ಕೆ ಮಾಡಲಾಗಿದೆ. ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು.

ಸ್ಪೀಕರ್​ ಆಯ್ಕೆ ಹೇಗಾಗುತ್ತೆ? ಸಂವಿಧಾನದ 93ನೇ ವಿಧಿ ಸ್ಪೀಕರ್​ ಆಯ್ಕೆ ಬಗ್ಗೆ ಹೇಳುತ್ತೆ, ಹೊಸ ಲೋಕಸಭೆ ಮತಚನೆಯಾದ ನಂತರವೇ ಈ ಹುದ್ದೆ ತೆರವಾಗುತ್ತದೆ. ಅಧಿವೇಶನ ಪ್ರಾರಂಭವಾದ ನಂತರ ರಾಷ್ಟ್ರಪತಿ ಹಂಗಾಮಿ ಸ್ಪೀಕರ್ ನೇಮಕ ಮಾಡುತ್ತಾರೆ, ಇದರಿಂದ ಲೋಕಸಭೆಯ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಬಹುದು.

ವಿಶೇಷವೆಂದರೆ ಲೋಕಸಭೆಯ ಸ್ಪೀಕರ್​ ಅನ್ನು ಬಹುಮತದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಒಟ್ಟು ಸದಸ್ಯರಲ್ಲಿ ಹೆಚ್ಚು ಮತ ಪಡೆದವರು ಸ್ಪೀಕರ್ ಆಗುವ ಅವಕಾಶ ಪಡೆಯುತ್ತಾರೆ.

ದೇಶದಲ್ಲಿ ಮೂರು ಬಾರಿ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು ದೇಶದಲ್ಲಿ ಸ್ಪೀಕರ್ ಚುನಾವಣೆ ನಡೆದಿರುವುದು ಇದೇ ಮೊದಲಲ್ಲ, ಇದಕ್ಕೂ ಮುನ್ನ ಮೂರು ಬಾರಿ ಚುನಾವಣೆ ನಡೆದಿತ್ತು. ಆದರೆ ಎರಡು ಬಾರಿ ವಿರೋಧ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೂ ಧ್ವನಿ ಮತದ ಮೂಲಕ ಸ್ಪೀಕರ್ ಆಯ್ಕೆಯಾಗಿದ್ದರು.

1952ರಲ್ಲಿ ಮೊದಲ ಬಾರಿಗೆ ಚುನಾವಣೆ ನಡೆದಿತ್ತು, ಆಗ ಕಾಂಗ್ರೆಸ್​ ಪರವಾಗಿ ಜವಾಹರ್​ಲಾಲ್ ನೆಹರೂ ಅವರು ಜಿವಿ ಮಾವಲಂಕರ್ ಅವರನ್ನು ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯಾಗಿ ಹೆಸರಿಸಿದ್ದರು. ಇದೇ ವೇಳೆ ಎಕೆ ಗೋಪಾಲನ್ ಅವರು ಸ್ಪೀಕರ್ ಸ್ಥಾನಕ್ಕೆ ಶಂಕರ್ ಶಾಂತಾರಾಮ್ ಮೋರೆ ಅವರ ಹೆಸರನ್ನು ಪ್ರಸ್ತಾಪಿಸಿದ್ದರು.

ನಂತರ ಮತ ವಿಭಜನೆಯಾಯಿತು. ಆ ಅವಧಿಯಲ್ಲಿ ಮಾವಲಂಕರ್ ಪರವಾಗಿ 394 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 55 ಮತಗಳು ಚಲಾಣೆಗೊಂಡಿತ್ತು.

ಶಂಕರ್ ಶಾಂತಾರಾಮ್ ಮೋರೆ ಕೂಡ ಮಾವಲಂಕರ್ ಪರವಾಗಿ ಮತ ಚಲಾವಣೆ ಮಾಡಿದ್ದು ಕುತೂಹಲಕರ ಸಂಗತಿ. ಅವರು ಅದಕ್ಕೂ ಮೊದಲು 1949ರ ನವೆಂಬರ್ 26 ರಂದು ತಾತ್ಕಾಲಿಕ ಸಂಸತ್ತಿನ ಸ್ಪೀಕರ್ ಆಗಿ ಚುನಾಯಿತರಾಗಿದ್ದರು ಮತ್ತು 1952ರವರೆಗೆ ಈ ಹುದ್ದೆಯಲ್ಲಿದ್ದರು.

1967ರಲ್ಲೂ ನಡೆದಿತ್ತು ಚುನಾವಣೆ

1967ರಲ್ಲಿ ಕಾಂಗ್ರೆಸ್​ನ ನೀಲಂ ಸಂಜೀವ್​ರೆಡ್ಡಿ ಅವರು ಟಿ ವಿಶ್ವನಾಥನ್ ಅವರನ್ನು ಎದುರಿಸಿದರು. ರೆಡ್ಡಿ 278 ಮತಗಳನ್ನು ಪಡೆದರೆ, ವಿಶ್ವನಾಥನ್ 207 ಮತಗಳನ್ನು ಪಡೆದಿದ್ದರು.

1976ರಲ್ಲೂ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿತ್ತು ಇದು ಎರಡನೇ ಸಂದರ್ಭ, 1976ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ವೇಳೆ ಲೋಕಸಭೆ ಸ್ಪೀಕರ್ ಹುದ್ದೆಗೂ ಚುನಾವಣೆ ನಡೆದಿತ್ತು, ಬಲಿರಾಮ್ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದು ಬಲಿರಾಮ್ ಗೆದ್ದಿದ್ದರು. 1976 ಜನವರಿ 5ರಂದು ಸ್ಪೀಕರ್ ಆಗಿ ಆಯ್ಕೆಯಾದರು.

18ನೇ ಲೋಕಸಭೆ ಸ್ಪೀಕರ್ ಆಯ್ಕೆ ವಿಚಾರದಲ್ಲಿ ವಿವಾದ ಎದ್ದಿತ್ತು ಲೋಕಸಭಾ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಎನ್​ಡಿಎ ಹಾಗೂ ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿರಲಿಲ್ಲ. ಎನ್​ಡಿಎ ಲೋಕಸಭಾ ಸ್ಪೀಕರ್ ಬೆಂಬಲಕ್ಕೆ ಬದಲಾಗಿ ಪ್ರತಿಪಕ್ಷಗಳ ಮೈತ್ರಿಕೂಟ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಎನ್​ಡಿಎಯಿಂದ ಓಂ ಬಿರ್ಲಾ, ಇಂಡಿಯಾ ಒಕ್ಕೂಟದಿಂದ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದರು. ಈಗ ಧ್ವನಿಮತದ ಮೂಲಕ ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ