AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Howrah Tragedy: ಕಳ್ಳಭಟ್ಟಿ ಸೇವಿಸಿ ಹೌರಾದಲ್ಲಿ 7 ಮಂದಿ ಸಾವು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿ ಅಕ್ರಮ ಬಾರ್‌ನಲ್ಲಿ ಇವರೆಲ್ಲರೂ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದಾದ ಬಳಿಕ ಅನೇಕರು ಅಸ್ವಸ್ಥಗೊಂಡಿದ್ದರು. ಇಂದು ಬೆಳಿಗ್ಗೆ 7 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Howrah Tragedy: ಕಳ್ಳಭಟ್ಟಿ ಸೇವಿಸಿ ಹೌರಾದಲ್ಲಿ 7 ಮಂದಿ ಸಾವು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ಹೌರಾದಲ್ಲಿ ಆಲ್ಕೋಹಾಲ್​ನಿಂದ ಸಾವನ್ನಪ್ಪಿದವರ ಮನೆ ಮುಂದೆ ಸೇರಿದ ಜನImage Credit source: ANI
TV9 Web
| Edited By: |

Updated on: Jul 20, 2022 | 1:23 PM

Share

ಹೌರಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಕಳ್ಳಭಟ್ಟಿ (country liquor) ಸೇವಿಸಿ 7 ಮಂದಿ ಮೃತಪಟ್ಟಿರುವ ಘಟನೆ ಇಂದು (ಬುಧವಾರ) ಬೆಳಗ್ಗೆ ನಡೆದಿದೆ. ಈ ದುರಂತದಲ್ಲಿ 20 ಜನರು ಅಸ್ವಸ್ಥರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಮಂಗಳವಾರ ರಾತ್ರಿ ಅಕ್ರಮ ಬಾರ್‌ನಲ್ಲಿ ಇವರೆಲ್ಲರೂ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದಾದ ಬಳಿಕ ಅನೇಕರು ಅಸ್ವಸ್ಥಗೊಂಡಿದ್ದರು. ಇಂದು ಬೆಳಿಗ್ಗೆ 7 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ವರ್ಗಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.

ಇಂದು ಬೆಳಗ್ಗೆ ನಡೆದ ಈ ಭೀಕರ ಘಟನೆಯ ನಂತರ ಘುಸುರಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮಾಲಿಪಂಚ್ಘೋರಾ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ರೈಲ್ವೆ ಮಾರ್ಗದ ಪಕ್ಕದಲ್ಲಿ ಹುಕ್ಕಾ ಪಾಯಿಂಟ್ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂದಿಯ ಸಹಕಾರದಲ್ಲೇ ಹುಕ್ಕಾ ಪಾಯಿಂಟ್ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ, ಪೊಲೀಸರು ಆ ಆರೋಪವನ್ನು ನಿರಾಕರಿಸಿದ್ದಾರೆ.

ಇಂದು ಬೆಳಗ್ಗೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಸ್ಥಳೀಯರು, ಮಹಿಳೆಯರು ಅಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಮೀಪದ ಮದ್ಯದಂಗಡಿಯನ್ನೂ ಧ್ವಂಸಗೊಳಿಸಲಾಗಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ