AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​​ನಲ್ಲಿ ಬೆಂಕಿ; 8 ಅಗ್ನಿಶಾಮಕ ವಾಹನಗಳು ದೌಡು

Fire At Samsung Service Centre ಉರಿಯುತ್ತಿರುವ ಬೆಂಕಿಯ ನಡುವೆ ಮುಂಬೈ ಸ್ಕೈಲೈನ್‌ ಮುಂದೆ ದಟ್ಟಹೊಗೆ ಕಾಣಿಸಿಕೊಂಡಿದೆ. ಕಂಜುರ್ಮಾರ್ಗ್ ಪೂರ್ವ ಪೊಲೀಸ್ ಠಾಣೆ ಬಳಿಯ ಸ್ಯಾಮ್ ಸಂಗ್ ಸರ್ವೀಸ್  ಸೆಂಟರ್ ನಲ್ಲಿ  2 ನೇ ಹಂತದ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 8.59ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು.

ಮುಂಬೈನ ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​​ನಲ್ಲಿ ಬೆಂಕಿ; 8 ಅಗ್ನಿಶಾಮಕ ವಾಹನಗಳು ದೌಡು
ಮುಂಬೈನ ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​​ನಲ್ಲಿ ಬೆಂಕಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 15, 2021 | 11:18 PM

Share

ಮುಂಬೈ: ಮುಂಬೈ ಉಪನಗರ ಕಂಜುರ್ಮಾರ್ಗ್‌ನಲ್ಲಿರುವ (Kanjurmarg )ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​​ನಲ್ಲಿ(Samsung service centre) ಸೋಮವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ವರದಿಯಾಗಿಲ್ಲ. ಎಂಟು ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್‌ಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿವೆ. ಉರಿಯುತ್ತಿರುವ ಬೆಂಕಿಯ ನಡುವೆ ಮುಂಬೈ ಸ್ಕೈಲೈನ್‌ ಮುಂದೆ ದಟ್ಟಹೊಗೆ ಕಾಣಿಸಿಕೊಂಡಿದೆ. ಕಂಜುರ್ಮಾರ್ಗ್ ಪೂರ್ವ ಪೊಲೀಸ್ ಠಾಣೆ ಬಳಿಯ ಸ್ಯಾಮ್ ಸಂಗ್ ಸರ್ವೀಸ್  ಸೆಂಟರ್ ನಲ್ಲಿ  2 ನೇ ಹಂತದ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 8.59ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಮುಂಬೈ ಅಗ್ನಿಶಾಮಕ ದಳ 8 ಅಗ್ನಿಶಾಮಕ ವಾಹನಗಳು, 4 ನೀರಿನ ಟ್ಯಾಂಕರ್‌ಗಳು ಸ್ಥಳಕ್ಕೆ ಧಾವಿಸಿವೆ. ಯಾವುದೇ  ಪ್ರಾಣಹಾನಿ ವರದಿಯಾಗಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಬೆಂಕಿ ನಂದಿಸಲು ನಾಲ್ಕು ಅಗ್ನಿಶಾಮಕ ವಾಹನಗಳು, ನಾಲ್ಕು ನೀರಿನ ಟ್ಯಾಂಕರ್‌ಗಳು ಸ್ಥಳಕ್ಕೆ ಧಾವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಕೂಡ ಸ್ಥಳಕ್ಕೆ ಆಗಮಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ 9.42ಕ್ಕೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ಲಭಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಅಮರಾವತಿಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ಬೋಂಡೆ ಬಂಧನ

ಇದನ್ನೂ ಓದಿ: Rashmika Mandanna: ಮುಂಬೈನಲ್ಲಿ ಹೆಚ್ಚಿದೆ ರಶ್ಮಿಕಾ ಮಂದಣ್ಣ ತಿರುಗಾಟ; ಕೊಡಗಿನ ಕುವರಿ ಹೋದಲ್ಲೆಲ್ಲ ಕ್ಯಾಮೆರಾ ಕಣ್ಣು

Published On - 11:02 pm, Mon, 15 November 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್