AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಎರಡನೇ ಅಲೆ ನಡುವೆಯೇ ತೆಲಂಗಾಣದ ನಗರಸಭೆ ಚುನಾವಣೆಗಾಗಿ ಬಿಜೆಪಿ, ಟಿಆರ್​ಎಸ್ ,ಕಾಂಗ್ರೆಸ್ ಪಕ್ಷದಿಂದ ಅಬ್ಬರದ ಪ್ರಚಾರ

Telangana Civic Polls: ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆಯ ಪ್ರಚಾರದ ಕೊನೆಯ ದಿನ ಬಿಜೆಪಿ ಮಾತ್ರವಲ್ಲ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕೂಡಾ ಇದೇ ರೀತಿ  ಜನರನ್ನು ಸೇರಿಸಿ ಕೊವಿಡ್ ನಿಯಮ ಉಲ್ಲಂಘಿದೆ.

ಕೊವಿಡ್ ಎರಡನೇ ಅಲೆ ನಡುವೆಯೇ ತೆಲಂಗಾಣದ ನಗರಸಭೆ ಚುನಾವಣೆಗಾಗಿ ಬಿಜೆಪಿ, ಟಿಆರ್​ಎಸ್ ,ಕಾಂಗ್ರೆಸ್ ಪಕ್ಷದಿಂದ ಅಬ್ಬರದ ಪ್ರಚಾರ
ಬಿಜೆಪಿ - ಟಿಆರ್​ಎಸ್ ರ‍್ಯಾಲಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 28, 2021 | 7:20 PM

Share

ಹೈದರಾಬಾದ್: ಕೊವಿಡ್ ಎರಡನೇ ಅಲೆ ದೇಶದಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿರುವಾಗ ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆಯ ಪ್ರಚಾರದ ಕೊನೆಯ ದಿನ ಬಿಜೆಪಿ ಭರ್ಜರಿ ರ‍್ಯಾಲಿ ನಡೆಸಿದೆ. ತೆಲಂಗಾಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮಂಗಳವಾರ ಪ್ರಚಾರ ಕೊನೆಗೊಂಡಿದ್ದು, ರ‍್ಯಾಲಿಯ ಫೋಟೊವನ್ನು ಬಿಜೆಪಿ ಟ್ವೀಟ್ ಮಾಡಿದೆ. ನೂರಾರು ಜನರನ್ನು ಸೇರಿಸುವ ಮೂಲಕ ಕೊವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಆ ಟ್ವೀಟ್ ಡಿಲೀಟ್ ಮಾಡಿದೆ. ಬಿಜೆಪಿ ಮಾತ್ರವಲ್ಲ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕೂಡಾ ಇದೇ ರೀತಿ  ಜನರನ್ನು ಸೇರಿಸಿ ಕೊವಿಡ್ ನಿಯಮ ಉಲ್ಲಂಘಿದೆ.

ಕಳೆದ ಡಿಸೆಂಬರ್ ನಲ್ಲಿ ದೇಶದ ಹಲವೆಡೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಮಿತ್ ಶಾ, ಜೆಪಿ ನಡ್ಡಾ,ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೊದಲಾದವರು ಬೃಹತ್ ರ‍್ಯಾಲಿಗಳನ್ನು ಆಯೋಜಿಸಿ ಪ್ರಚಾರ ಮಾಡಿದ್ದರು. ಈ ಬಾರಿ ಏಪ್ರಿಲ್ 30ಕ್ಕೆ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಬಿಜೆಪಿ ಅಬ್ಬರದ ಪ್ರಚಾರ ನಡೆಸಿದೆ.

ವಾರಂಗಲ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ನೇತೃತ್ವ ನೀಡಿದ್ದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಅವರು ವಾರಂಗಲ್​ನಲ್ಲಿ ಬಿಜೆಪಿ ಧ್ವಜ ಮೇಲೆ ಹಾರಬೇಕು ಎಂದಿದ್ದರು.

ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರು ವಾರಂಗಲ್ ಮತ್ತು ಖಮ್ಮಂನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಯವರು ಆರೋಗ್ಯ ವ್ಯವಸ್ಥೆಯನ್ನು ನಿರ್ಲಕ್ಷಿಸಿದ್ದಾರೆ. ಆದರೆ ಪ್ರಧಾನಿ ಮೋದಿ ವಾರಂಗಲ್​ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಆಕ್ಸಿಜನ್ ಸ್ಥಾವರ ಸ್ಥಾಪಿಸಿದ್ದಾರೆ ಎಂದಿದ್ದಾರೆ.

ಆದಾಗ್ಯೂ, ತೆಲಂಗಾಣ ರಾಷ್ಟ್ರ ಸಮಿತಿ ಕೂಡಾ ಪ್ರಚಾರ ಕಾರ್ಯದಲ್ಲಿ ಹಿಂದೆ ಬಿದ್ದಿಲ್ಲ. ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮತ್ತು ಅವರ ಪುತ್ರ ನಗರಾಡಳಿತ ಸಚಿವ ಕೆ.ಟಿ ರಾಮ ಅವರಿಗೆ ಕೊವಿಡ್ ದೃಢಪಟ್ಟಿದ್ದ ಕಾರಣ ಇತರ ಸಚಿವರು ಚುನಾವಣಾ ಪ್ರಚಾರ ನಡೆಸಿದ್ದರು.

ನಾಗಾರ್ಜುನ ಸಾಗರ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಕೆಸಿಆರ್ ಅವರಿಗೆ ಕೊವಿಡ್ ದೃಢಪಟ್ಟಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ 60 ರಾಜಕಾರಣಿಗಳಿಗೆ ಕೊವಿಡ್ ರೋಗ ತಗುಲಿತ್ತು.

ದೇಶದಲ್ಲಿ ಕೊವಿಡ್ ಎರಡನೇ ಅಲೆಗೆ ಚುನಾವಣಾ ಆಯೋಗವೇ ಏಕೈಕ ಜವಾಬ್ದಾರರು, ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಗುಡುಗಿದ್ದ ಬೆನ್ನಲ್ಲೇ ರಾಜಕೀಯ  ಪಕ್ಷಗಳು ತೆಲಂಗಾಣದಲ್ಲಿ ಬೃಹತ್ ರ‍್ಯಾಲಿ ನಡೆಸಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದೆ.

ಖಮ್ಮಮ್ ಮತ್ತು ವಾರಂಗಲ್ ಮುನ್ಸಿಪಲ್ ಕಾರ್ಪೊರೇಷನ್  ಸೇರಿದಂತೆ  ಅಚಂಪೇಟ್ , ಸಿದ್ದಿಪೇಟ್, ನಕ್ರೆ ಕಲ್ ,ಜಡ್ ಚೆರ್ಲ,ಕೊಥೂರ್  ನಗರಸಭೆಯಲ್ಲಿ ಏಪ್ರಿಲ್  30ಕ್ಕೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಕೊವಿಡ್ 2ನೇ ಅಲೆಗೆ ಚುನಾವಣಾ ಆಯೋಗವೇ ಹೊಣೆ; ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್ ಹೈಕೋರ್ಟ್

(Huge rallies of TRS BJP Congress in Telangana for civic polls violated Covid appropriate norms )

Published On - 7:18 pm, Wed, 28 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!