AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ಕಂತು ಪಾವತಿ ವಿಳಂಬ, ಅವಮಾನ ತಾಳಲಾರದೆ ಬಾಲಕಿ ಆತ್ಮಹತ್ಯೆ

ಸಹೋದರ ಸಾಲದ ಕಂತು ಪಾವತಿ ಮಾಡುವಲ್ಲಿ ವಿಳಂಬ ಮಾಡಿದ್ದಕ್ಕೆ ಅವಮಾನ ಅನುಭವಿಸಿದ ಬಾಲಕಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಹೋದರನ 585 ರೂ. ಸಾಲದ ಕಂತು ಪಾವತಿಸಲು ಸ್ವಲ್ಪ ವಿಳಂಬ ಮಾಡಿದ ಕಾರಣಕ್ಕೆ 17 ವರ್ಷದ ಬಾಲಕಿಯೊಬ್ಬಳು ವಿಷ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್​ನ ಛತ್ರದಲ್ಲಿ ನಡೆದಿದೆ.

ಸಾಲದ ಕಂತು ಪಾವತಿ ವಿಳಂಬ, ಅವಮಾನ ತಾಳಲಾರದೆ ಬಾಲಕಿ ಆತ್ಮಹತ್ಯೆ
ಸಾವು-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Oct 03, 2023 | 11:30 AM

Share

ಸಹೋದರ ಸಾಲದ ಕಂತು ಪಾವತಿ ಮಾಡುವಲ್ಲಿ ವಿಳಂಬ ಮಾಡಿದ್ದಕ್ಕೆ ಅವಮಾನ ಅನುಭವಿಸಿದ ಬಾಲಕಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಹೋದರನ 585 ರೂ. ಸಾಲದ ಕಂತು ಪಾವತಿಸಲು ಸ್ವಲ್ಪ ವಿಳಂಬ ಮಾಡಿದ ಕಾರಣಕ್ಕೆ 17 ವರ್ಷದ ಬಾಲಕಿಯೊಬ್ಬಳು ವಿಷ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್​ನ ಛತ್ರದಲ್ಲಿ ನಡೆದಿದೆ.

ಸುಮಾರು 3 ತಿಂಗಳ ಹಿಂದೆ ಆಕೆಯ ಸಹೋದರ ಸಂಸ್ಥೆಯಿಂದ 25 ಸಾವಿರ ರೂ ಸಾಲ ಪಡೆದಿದ್ದ, ಮಾಸಿಕ ಹಣ ಪಾವತಿ ಮಾಡಲು ಕ್ಯಾಸ್ಪೋರ್ ಮೈಕ್ರೋ ಫೈನಾನ್ಸ್ ಕಂಪನಿಯ ಕಚೇರಿಗೆ ಭೇಟಿ ನೀಡಿದ್ದಳು. ಕಂಪನಿಯ ಉದ್ಯೋಗಿಯೊಬ್ಬರು ಬಾಲಕಿಯ ಕುಟುಂಬದವರು ಸೇರಿದಂತೆ ಗ್ರಾಮಸ್ಥರಿಂದ ಕಂತು ವಸೂಲಿ ಮಾಡಲು ಗ್ರಾಮಕ್ಕೆ ಬಂದಿದ್ದರು. ಆಕೆಯ ಸಹೋದರ ಮನೆಯಲ್ಲಿ ಇಲ್ಲದ ಕಾರಣ, ಕುಟುಂಬಕ್ಕೆ ಸಮಯಕ್ಕೆ ಪಾವತಿ ಮಾಡಲು ಸಾಧ್ಯವಾಗಲಿಲ್ಲ.

ಅದೇ ದಿನ, ಹುಡುಗಿ ಸ್ವತಃ ಹಣವನ್ನು ಠೇವಣಿ ಮಾಡಲು ಸಂಸ್ಥೆಯ ಕಚೇರಿಗೆ ಹೋದಳು. ಸುನೀಲ್ ಕುಮಾರ್ ಪಾಸ್ವಾನ್ ಎಂದು ಗುರುತಿಸಲಾದ ಉದ್ಯೋಗಿಯೊಬ್ಬರು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಮತ್ತು ತಡವಾಗಿ ಪಾವತಿಸಿದ್ದಕ್ಕಾಗಿ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯಿಂದ ಅವಮಾನಕ್ಕೊಳಗಾದ ಅವಳು ಮನೆಗೆ ಹಿಂದಿರುಗಿದಳು ಮತ್ತು ನಂತರ ವಿಷ ಕುಡಿದಿದ್ದಾಳೆ. ಆಸ್ಪತ್ರೆಗೆ ಸಾಗಿಸಿದರೂ, ಆಕೆಯ ಸ್ಥಿತಿಯು ಹದಗೆಟ್ಟಿದ್ದ ಕಾರಣ ಹಜಾರಿಬಾಗ್‌ನ ಶೇಖ್ ಭಿಖಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ಅವಳು ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದರು.

ಪೊಲೀಸರು ತನಿಖೆ ಆರಂಭಿಸಿದ್ದಾರೆ, ತಪ್ಪಿಗೆ ಕಾರಣರಾದವರನ್ನು ಪತ್ತೆ ಮಾಡಲು ನಾವು ಕ್ರಮ ಕೈಗೊಂಡಿದ್ದೇವೆ. ಯಾವುದೇ ದೂರು ದಾಖಲಿಸಿಕೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?