AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಅವಮಾನ ಮತ್ತು ಕೋಮುದ್ವೇಷದ ವಿರುದ್ಧ ದನಿಯೆತ್ತೋಣ: ರಾಹುಲ್ ಗಾಂಧಿ

ಮಹಿಳೆಯರ ಅವಮಾನ ಮತ್ತು ಕೋಮುದ್ವೇಷದ ವಿರುದ್ಧ ಎಲ್ಲರೂ ಒಂದೇ ಧ್ವನಿಯಲ್ಲಿ ನಿಂತಾಗ ಮಾತ್ರ ಅದು  ನಿಲ್ಲುತ್ತದೆ. "ವರ್ಷ ಬದಲಾಗಿದೆ, ಪರಿಸ್ಥಿತಿಯೂ ಬದಲಾಗಲಿ, ಈಗ ನಾವು ಮಾತನಾಡಬೇಕಾಗಿದೆ" ಎಂದು ರಾಹುಲ್  ಟ್ವೀಟ್ ಮಾಡಿದ್ದಾರೆ.

ಮಹಿಳೆಯರ ಅವಮಾನ ಮತ್ತು ಕೋಮುದ್ವೇಷದ ವಿರುದ್ಧ ದನಿಯೆತ್ತೋಣ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 02, 2022 | 4:22 PM

Share

ದೆಹಲಿ: ಈಗಾಗಲೇ ಕ್ರಮ ಮತ್ತು ಆಕ್ರೋಶಕ್ಕೆ ಕಾರಣವಾಗಿರುವ ಮುಸ್ಲಿಂ ಮಹಿಳೆಯರ ಹರಾಜು (auctioning’ Muslim women)ಮಾಡುವ ಆ್ಯಪ್  ವಿರುದ್ಧ ಭಾನುವಾರ ಧ್ವನಿ ಎತ್ತಿರುವ ರಾಹುಲ್ ಗಾಂಧಿ (Rahul Gandhi), ಮಹಿಳೆಯರ ಅವಮಾನ ಮತ್ತು ಕೋಮುದ್ವೇಷದ ವಿರುದ್ಧ ಎಲ್ಲರೂ ಒಂದೇ ಧ್ವನಿಯಲ್ಲಿ ನಿಂತಾಗ ಮಾತ್ರ ಅದು  ನಿಲ್ಲುತ್ತದೆ. “ವರ್ಷ ಬದಲಾಗಿದೆ, ಪರಿಸ್ಥಿತಿಯೂ ಬದಲಾಗಲಿ, ಈಗ ನಾವು ಮಾತನಾಡಬೇಕಾಗಿದೆ” ಎಂದು  ಟ್ವೀಟ್ ಮಾಡಿದ್ದಾರೆ. ದೆಹಲಿ ಮೂಲದ ಪತ್ರಕರ್ತೆಯೊಬ್ಬರು ತನ್ನ ತಿರುಚಿದ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಕ್ಕಾಗಿ ವೆಬ್‌ಸೈಟ್‌ ಒಂದರ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ, ಹಲವಾರು ರಾಜಕಾರಣಿಗಳು ಅದನ್ನು ಖಂಡಿಸಿದರು. ದೆಹಲಿ ಪೊಲೀಸರು ಶನಿವಾರ ರಾತ್ರಿ ಎಫ್‌ಐಆರ್ ದಾಖಲಿಸಿದ್ದಾರೆ. ಐಟಿ ಸಚಿವ ಅಶ್ವಿನಿ ವೈಷ್ಣವ್ (IT minister Ashwini Vaishnaw) ಅವರು ಆ್ಯಪ್ ಅನ್ನು ನಿರ್ಬಂಧಿಸಲಾಗಿದೆ ಮತ್ತು ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು. “ಇಂದು ಬೆಳಿಗ್ಗೆಯೇ ಬಳಕೆದಾರರನ್ನು ನಿರ್ಬಂಧಿಸುವುದನ್ನು GitHub ದೃಢಪಡಿಸಿದೆ.  ಸಿಇಆರ್​​ಟಿ (CERT) ಮತ್ತು ಪೊಲೀಸ್ ಅಧಿಕಾರಿಗಳು ಮುಂದಿನ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ” ಎಂದು ಸಚಿವರು ಹೇಳಿದರು.

“bulibai.github.io (ಅಳಿಸಲಾಗಿದೆ) ಎಂಬ ವೆಬ್‌ಸೈಟ್/ಪೋರ್ಟಲ್ ಅಸಮರ್ಪಕ, ಸ್ವೀಕಾರಾರ್ಹವಲ್ಲ ಮತ್ತು ಸ್ಪಷ್ಟವಾಗಿ ಅಶ್ಲೀಲ ಸನ್ನಿವೇಶದಲ್ಲಿ ನನ್ನ ಚಿತ್ರವನ್ನು ತಿರುಚಿರುವುದನ್ನು ಇಂದು ಬೆಳಿಗ್ಗೆ ಕಂಡು ನಾನು ಆಘಾತಕ್ಕೊಳಗಾಗಿದ್ದೇನೆ. ಇದಕ್ಕೆ ತಕ್ಷಣದ ಕ್ರಮದ ಅಗತ್ಯವಿದೆ. ನನಗೆ ಮತ್ತು ಅದೇ ರೀತಿಯ ಇತರ ಸ್ವತಂತ್ರ ಮಹಿಳೆಯರು ಮತ್ತು ಪತ್ರಕರ್ತರಿಗೆ ಕಿರುಕುಳ ನೀಡಲು ವಿನ್ಯಾಸಗೊಳಿಸಲಾಗಿದೆ” ಎಂದು ಪತ್ರಕರ್ತೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 (ಪದ, ಹಾವಭಾವ ಅಥವಾ ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ವರ್ತಿಸುವ ಉದ್ದೇಶ) ಮತ್ತು 354 ಎ (ಲೈಂಗಿಕ ಕಿರುಕುಳ ಮತ್ತು ಕಿರುಕುಳಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಬುಲ್ಲಿ ಬಾಯ್” ಪೋರ್ಟಲ್‌ನಲ್ಲಿ ಅಪರಿಚಿತ ಜನರ ಗುಂಪೊಂದು ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಪತ್ರಕರ್ತೆ ಆರೋಪಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ಮುಸ್ಲಿಂ ಮಹಿಳೆಯರು ಗುರಿಯಾಗುತ್ತಿರುವುದು ಇದೇ ಮೊದಲಲ್ಲ. ಸುಮಾರು ಆರು ತಿಂಗಳ ಹಿಂದೆ, ಸುಲ್ಲಿ ಡೀಲ್ಸ್ ( ಬುಲ್ಲಿ ಬಾಯ್ ಅದರ ತದ್ರೂಪಿ ಎಂದು ನಂಬಲಾಗಿದೆ) ಅವರ ಸಾಮಾಜಿಕ ಮಾಧ್ಯಮ ಖಾತೆಗಳಿಂದ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಸಂಗ್ರಹಿಸಿ ಅವುಗಳನ್ನು ‘ಹರಾಜು’ ಮಾಡುತ್ತಿದ್ದರು. ಎರಡೂ ಅಪ್ಲಿಕೇಶನ್‌ಗಳನ್ನು GitHub ನಲ್ಲಿ ಗುರುತಿಸದ ಗುಂಪುಗಳಿಂದ ರಚಿಸಲಾಗಿದೆ. ಸುಲ್ಲಿ ಡೀಲ್ಸ್ ವಿವಾದದಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಶನಿವಾರ ಪತ್ರಕರ್ತೆಯೊಬ್ಬರು ಬುಲ್ಲಿ ಬಾಯ್ ಅಪ್ಲಿಕೇಶನ್‌ನಲ್ಲಿ ‘ಡೀಲ್ ಆಫ್ ದಿ ಡೇ’ ಎಂದು ಮಾರಾಟವಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಪತ್ರಕರ್ತರು “ಮುಸ್ಲಿಂ ಮಹಿಳೆಯಾಗಿ ನಿಮ್ಮ ಹೊಸ ವರ್ಷವನ್ನು ಈ ಭಯ ಮತ್ತು ಅಸಹ್ಯತೆಯ ಭಾವನೆಯೊಂದಿಗೆ ಪ್ರಾರಂಭಿಸುವುದು ತುಂಬಾ ದುಃಖಕರವಾಗಿದೆ” ಎಂದು ಹೇಳಿದ್ದಾರೆ.

“ಯಾರನ್ನಾದರೂ ಆನ್‌ಲೈನ್‌ನಲ್ಲಿ “ಮಾರಾಟ” ಮಾಡುವುದು ಸೈಬರ್ ಕ್ರೈಮ್ ಮತ್ತು ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವಂತೆ ನಾನು ಪೊಲೀಸರನ್ನು ಕೇಳುತ್ತೇನೆ. ಅಪರಾಧಿಗಳು ಖಂಡನೀಯ ಶಿಕ್ಷೆಗೆ ಅರ್ಹರು, ”ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.  ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು “ಅತಿರೇಕದ ಸ್ತ್ರೀದ್ವೇಷ ಮತ್ತು ವೇದಿಕೆಗಳ ಮೂಲಕ ಮಹಿಳೆಯರನ್ನು ಕೋಮುವಾದಿ ಗುರಿಯಾಗಿಸುವ” ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಪದೇ ಪದೇ ಕೇಳಿಕೊಂಡಿದ್ದೇನೆ. “ಅದನ್ನು ನಿರ್ಲಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ; ಈ ವಿಶ್ವವಿದ್ಯಾಲಯವು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಲಿದೆ: ನರೇಂದ್ರ ಮೋದಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ