AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿಯಲ್ಲಿ ಕುತ್ತಿಗೆಯವರೆಗೆ ಮಣ್ಣು ಹಾಕಿಕೊಂಡು ಜೀವಂತ ಸಮಾಧಿಗೆ ಯತ್ನಿಸಿದ ಗಂಡ-ಹೆಂಡತಿ!

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಸರ್ಕಾರಿ ಭೂಮಿಯನ್ನು ಕಬಳಿಸಲು ಪತಿ ಮತ್ತು ಪತ್ನಿ 'ಭೂ ಸಮಾಧಿ'ಗೆ ಯತ್ನಿಸಿದ್ದಾರೆ. ರಾಮನರೇಶ್ ಮತ್ತು ಅವರ ಪತ್ನಿ ಗುಚ್ಚಿ ದೇವಿ ತಮ್ಮ ಮನೆಯ ಪಕ್ಕದಲ್ಲಿ ಗುಂಡಿ ತೋಡಿ ಅದರಲ್ಲಿ ಕುಳಿತು ಕುತ್ತಿಗೆಯವರೆಗೆ ಮಣ್ಣು ಹಾಕಿಕೊಂಡಿದ್ದಾರೆ. ಹಲವು ವರ್ಷಗಳಿಂದ ತಾವು ಆಕ್ರಮಿಸಿಕೊಂಡಿದ್ದ ಭೂಮಿಯಿಂದ ತಮ್ಮನ್ನು ಹೊರಹಾಕಲಾಗುತ್ತಿದೆ ಎಂದು ಆ ದಂಪತಿ ಆರೋಪಿಸಿದ್ದಾರೆ. ಅವರ ಈ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಗುಂಡಿಯಲ್ಲಿ ಕುತ್ತಿಗೆಯವರೆಗೆ ಮಣ್ಣು ಹಾಕಿಕೊಂಡು ಜೀವಂತ ಸಮಾಧಿಗೆ ಯತ್ನಿಸಿದ ಗಂಡ-ಹೆಂಡತಿ!
Husband Wife Bhu Samadhi
ಸುಷ್ಮಾ ಚಕ್ರೆ
|

Updated on:Apr 17, 2025 | 10:04 PM

Share

ಡಿಯೋರಿಯಾ, ಏಪ್ರಿಲ್ 17: ಉತ್ತರ ಪ್ರದೇಶದ (Uttar Pradesh) ಡಿಯೋರಿಯಾದಲ್ಲಿ ಒಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಡಿಯೋರಿಯಾ ಜಿಲ್ಲೆಯ ಸಲೆಂಪುರ ತಹಸಿಲ್ ಪ್ರದೇಶದ ಪಟ್ಲಾಪುರ ಗ್ರಾಮದಲ್ಲಿ ವೃದ್ಧ ದಂಪತಿ ಮಂಗಳವಾರ ತಮ್ಮ ಮನೆಯ ಪಕ್ಕದಲ್ಲಿನ ಭೂಮಿಯಲ್ಲಿ ಗುಂಡಿಯನ್ನು ನೋಡಿ ಅಲ್ಲೇ ತಮ್ಮನ್ನು ಜೀವಂತ ಸಮಾಧಿ ಮಾಡಿಕೊಳ್ಳಲು ಯತ್ನಿಸಿದ್ದಾರೆ.

ಗ್ರಾಮಸಭೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗದಿದ್ದಾಗ ದಂಪತಿಗಳು ಭೂ ಸಮಾಧಿಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಗ್ರಾಮದ ಮುಖ್ಯಸ್ಥರು ಭಯಭೀತರಾಗಿ ತಕ್ಷಣ ಆಡಳಿತ ಅಧಿಕಾರಿಗಳಿಗೆ ಅದರ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

ಇದನ್ನೂ ಓದಿ: ಪುಣೆ ಆಸ್ಪತ್ರೆಯಲ್ಲಿ ವೀಲ್‌ಚೇರ್ ಇಲ್ಲದೆ ಅಂಗವಿಕಲ ನೆಲದಲ್ಲಿ ತೆವಳಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್

ಸಲೇಂಪುರ ಎಸ್‌ಡಿಎಂ ದಿಶಾ ಶ್ರೀವಾಸ್ತವ ಸ್ಥಳಕ್ಕೆ ಧಾವಿಸಿ ದಂಪತಿಗೆ ಕಾನೂನನ್ನು ವಿವರಿಸಲು ಪ್ರಯತ್ನಿಸಿದರು. “ರಾಮನರೇಶ್ ಅವರ ಪತ್ನಿ ಗುಚ್ಚಿ ದೇವಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದರು. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗದಿದ್ದಾಗ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದರು. ಈ ದಂಪತಿಗೆ ಒಂದು ಅಂತಸ್ತಿನ ಮನೆ ಇದೆ. ಆದ್ದರಿಂದ, ಅವರಿಗೆ ಯಾವುದೇ ರೀತಿಯಲ್ಲಿ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶವಿಲ್ಲ ಎಂದು ಅವರು ಹೇಳಿದರು. ಹಲವು ಗಂಟೆಗಳ ಕಾಲ ಮನವೊಲಿಸಿ, ಕಷ್ಟಪಟ್ಟು ದಂಪತಿಯನ್ನು ಹೊರಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: Viral : ನಡುರಸ್ತೆಯಲ್ಲೇ ಪತಿಯ ಎದೆ ಮೇಲೆ ಕುಳಿತು ಹಿಗ್ಗಾಮುಗ್ಗ ಥಳಿಸಿದ ಪತ್ನಿ, ವಿಡಿಯೋ ವೈರಲ್

ರಾಮನರೇಶ್ ಮತ್ತು ಅವರ ಪತ್ನಿ ಗುಚ್ಚಿ ದೇವಿ ತಮ್ಮ ಮನೆಯ ಪಕ್ಕದಲ್ಲಿ ಒಂದು ಗುಂಡಿಯನ್ನು ಅಗೆದು ಅದರಲ್ಲಿ ಕುಳಿತು ತಮ್ಮ ಕುತ್ತಿಗೆಯವರೆಗೆ ಮಣ್ಣು ಹಾಕಿದರು. ವರ್ಷಗಳಿಂದ ತಾವು ಆಕ್ರಮಿಸಿಕೊಂಡಿದ್ದ ಭೂಮಿಯಿಂದ ತಮ್ಮನ್ನು ಹೊರಹಾಕಲಾಗುತ್ತಿದೆ ಎಂದು ದಂಪತಿಗಳು ಆರೋಪಿಸಿದ್ದಾರೆ. ನಮ್ಮ ಭೂಮಿಯನ್ನು ಈಗ ಖಾಲಿ ಮಾಡಲಾಗುತ್ತಿದೆ. ತಮ್ಮ ನೆರೆಹೊರೆಯವರು ಆಕ್ರಮಿಸಿಕೊಂಡಿರುವ ಭೂಮಿಯನ್ನು ಖಾಲಿ ಮಾಡುತ್ತಿಲ್ಲ. ಇದು “ತಾರತಮ್ಯ”ವಾದ್ದರಿಂದ ನಾವು ಭೂ ಸಮಾಧಿಗೆ ಪ್ರಯತ್ನಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Thu, 17 April 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ