AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಪ್ರಿಯಕರನೊಂದಿಗೆ ಮಲಗಿದ್ದನ್ನು ಕಂಡು ಹಾಸಿಗೆಯಲ್ಲೇ ಕೊಂದ ಗಂಡ

ಉತ್ತರಪ್ರದೇಶದ ಜಲೌನ್ ಗ್ರಾಮದಲ್ಲಿ ತನ್ನ ಮನೆಯಲ್ಲಿ ಹಾಸಿಗೆಯಲ್ಲಿ ಪ್ರೇಮಿಯೊಂದಿಗೆ ಮಲಗಿದ್ದನ್ನು ಕಂಡು ಆಕೆಯ ಗಂಡ ತನ್ನ ಅವರಿಬ್ಬರನ್ನೂ ಕೊಲೆ ಮಾಡಿದ್ದಾನೆ. ಈಗಾಗಲೇ ವಿಧಿವಿಜ್ಞಾನ ತಂಡವು ಪುರಾವೆಗಳನ್ನು ಸಂಗ್ರಹಿಸಿದೆ ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೊಲೆ ಮಾಡಿದ ಕುನ್ವರ್ ಸಿಂಗ್ ನಂತರ ಪೊಲೀಸರಿಗೆ ಶರಣಾಗಿದ್ದು, ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಹೆಂಡತಿ ಪ್ರಿಯಕರನೊಂದಿಗೆ ಮಲಗಿದ್ದನ್ನು ಕಂಡು ಹಾಸಿಗೆಯಲ್ಲೇ ಕೊಂದ ಗಂಡ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 06, 2024 | 9:54 PM

Share

ನವದೆಹಲಿ: ಉತ್ತರ ಪ್ರದೇಶದ ಜಲೌನ್‌ನಲ್ಲಿ ಗುರುವಾರ ರಾತ್ರಿ ಮನೆಯಲ್ಲಿ ಹಾಸಿಗೆಯಲ್ಲಿ ಒಟ್ಟಿಗೆ ಇದ್ದುದನ್ನು ಕಂಡ ಆಕೆಯ ಗಂಡ ತನ್ನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಂದಿದ್ದಾನೆ. ವರದಿಗಳ ಪ್ರಕಾರ, ಕುನ್ವರ್ ಸಿಂಗ್ ಕೂಲಿ ಕೆಲಸ ಮಾಡುತ್ತಿದ್ದ. ಆತ ತನ್ನ ಹೆಂಡತಿ ಆರತಿ ಮತ್ತು ಅವರ ಇಬ್ಬರು ಚಿಕ್ಕ ಮಕ್ಕಳೊಂದಿಗೆ ವಾಸಿಸುತ್ತಿದ್ದ. ಕಳೆದ ಕೆಲವು ತಿಂಗಳುಗಳಿಂದ ಕುನ್ವರ್ ತನ್ನ ಹೆಂಡತಿಯ ಚಾರಿತ್ರ್ಯದ ಬಗ್ಗೆ ಅನುಮಾನ ಹೊಂದಿದ್ದನು. ಇದರಿಂದ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು.

ಆತನ ಹೆಂಡತಿ ಹತ್ತಿರದ ಹಳ್ಳಿಯ ನಿವಾಸಿ ಛವಿನಾಥ್ ಸಿಂಗ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಇದರ ಬಗ್ಗೆ ಕುನ್ವರ್​ಗೂ ಅನುಮಾನವಿತ್ತು. ತನ್ನ ಊರಿಗೆ ಹೋಗುತ್ತಿದ್ದ ಕುನ್ವರ್ ಸಿಂಗ್ ಮನೆಯಲ್ಲಿ ಇಲ್ಲದಿದ್ದಾಗ ಆತನ ಹೆಂಡತಿ ತನ್ನ ಪ್ರೇಮಿಯೊಂದಿಗೆ ಇರುತ್ತಿದ್ದಳು. ಈ ವಿಚಾರಕ್ಕೆ ಸುಮಾರು ಹತ್ತು ದಿನಗಳ ಮೊದಲು ಕುನ್ವರ್ ಮತ್ತು ಆರತಿ ತೀವ್ರ ವಾಗ್ವಾದ ನಡೆಸಿದ್ದರು. ಈ ಘರ್ಷಣೆಯ ಬಳಿಕ ಆರತಿ ತನ್ನ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಳು. ಕುನ್ವರ್‌ಗಾಗಿ ಪೊಲೀಸರು ಹುಡುಕಾಡುತ್ತಿದ್ದರು. ಬಂಧನದ ಭೀತಿಯಿಂದ ಆತ ಅಧಿಕಾರಿಗಳಿಗೆ ಕಾಣದಂತೆ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಾಲುಗಳ ಮುರಿದು ಕೊಂದ ದುಷ್ಟ

ಗುರುವಾರ ತಡರಾತ್ರಿ, ಕುನ್ವರ್ ಸಿಂಗ್ ಸುಳಿವು ನೀಡದೆ ತನ್ನ ಮನೆಗೆ ಬಂದಾಗ ಆರತಿ ಮತ್ತು ಛವಿನಾಥ್ ಬೆಡ್​ ರೂಂನಲ್ಲಿ ಒಟ್ಟಿಗೇ ಮಲಗಿದ್ದರು. ಇದರಿಂದ ಸಿಟ್ಟಿಗೆದ್ದ ಆತ ಇಬ್ಬರ ಮೇಲೂ ಕೊಡಲಿಯಿಂದ ಹಲ್ಲೆ ನಡೆಸಿ, ಕೊಂದು ಹಾಕಿದ್ದಾನೆ.

ಈ ಘಟನೆಯ ವೇಳೆ ದಂಪತಿಯ 10 ಮತ್ತು 8 ವರ್ಷದ ಇಬ್ಬರು ಮಕ್ಕಳು ಮನೆಯಲ್ಲಿ ಮಲಗಿದ್ದರು. ಗಲಾಟೆಯಿಂದ ಎಚ್ಚೆತ್ತುಕೊಂಡ ಅವರು ಕಿರುಚಾಡುತ್ತಾ ಹೊರಗೆ ಓಡಿ ಬಂದು ಸಮೀಪದ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಕುನ್ವರ್ ಸಿಂಗ್ ನಂತರ ಪೊಲೀಸರಿಗೆ ಶರಣಾಗಿದ್ದು, ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!