Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಇನ್ಶೂರೆನ್ಸ್ ಹಣಕ್ಕಾಗಿ ಪತ್ನಿಯನ್ನು ಕೊಂದು ಪತಿ ಎಸ್ಕೇಪ್.. ಆರೋಪಿ ಪತ್ತೆಗಾಗಿ ಪೊಲೀಸರ ತಲಾಶ್

ಆ ಅಯೋಗ್ಯ ಪತ್ನಿ ಜೊತೆ ನೆಟ್ಟಗೆ ಸಂಸಾರ ಮಾಡಿಕೊಂಡು ಇರೋದನ್ನ ಬಿಟ್ಟು ದುಶ್ಚಟದ ದಾಸನಾಗಿದ್ದ. ಸಾಲದಕ್ಕೆ ಪರ ಸ್ತ್ರೀ ವ್ಯಾಮೋಹ ಬೇರೆ. ಹೀಗೆ ಹೆಂಡತಿ, ಮಕ್ಕಳನ್ನು ಅನಾಥ ಮಾಡಿದ್ದ ಆತ ಹಣಕ್ಕಾಗಿ ಮರಳಿ ಬಂದಿದ್ದ. ಆದರೆ ವಾಪಸ್ ಬಂದವನು ಎಸಗಿದ್ದು ಮಾತ್ರ ಘನಘೋರ ಕೃತ್ಯ.

ಮಗನ ಇನ್ಶೂರೆನ್ಸ್ ಹಣಕ್ಕಾಗಿ ಪತ್ನಿಯನ್ನು ಕೊಂದು ಪತಿ ಎಸ್ಕೇಪ್.. ಆರೋಪಿ ಪತ್ತೆಗಾಗಿ ಪೊಲೀಸರ ತಲಾಶ್
ಕೊಲೆಯಾದ ಘಟನಾ ಸ್ಥಳ
Follow us
ಆಯೇಷಾ ಬಾನು
|

Updated on: Apr 13, 2021 | 8:01 AM

ಆಂಧ್ರ ಪ್ರದೇಶದ ಕಡಪದಲ್ಲಿ ಪತಿ ಪತ್ನಿಯನ್ನೇ ಕೊಂದ ಘಟನೆ ನಡೆದಿದೆ. ಕೊಲೆಯಾದ ಮಹಿಳೆ ಹೆಸರು ಬೇಬಿ ಜಾನ್. ಈ ಮಹಿಳೆ ಪತಿ ದುಶ್ಚಟಗಳ ದಾಸನಾಗಿದ್ದ. ಕಡೆಗೆ ಮನೆಯವರನ್ನೂ ಬಿಟ್ಟು ಹೋಗಿದ್ದನಂತೆ. ಹೀಗಾಗಿ ಮಕ್ಕಳು, ತಾಯಿ ಎಲ್ಲರೂ ಸೇರಿಕೊಂಡು ದುಡಿದು ಮನೆ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ ಬೇಬಿ ಜಾನ್​ಳ ಮಗ ಅಪಘಾತದಲ್ಲಿ ಮೃತಪಟ್ಟಿದ್ದ.

ಆತನ ಇನ್ಶೂರೆನ್ಸ್ ಹಣಕ್ಕಾಗಿ ಬೇಬಿ ಜಾನ್ ಪತಿ ದಸ್ತಗೀರ್ ಮರಳಿ ಮನೆಗೆ ಬಂದಿದ್ದನಂತೆ. ಅಲ್ಲದೆ ಮನೆಯವರಿಗೆ ಕಾಟ ಕೊಡುತ್ತಾ, ಹಣ ತನಗೆ ಬೇಕು ಅಂತಾ ಪೀಡಿಸುತ್ತಿದ್ದ. ಆದರೆ ಹಣ ಕೊಡದೇ ಇದ್ದಾಗ ಪತ್ನಿ ಮೇಲೆ ಅಕ್ರಮ ಸಂಬಂಧದ ಆರೋಪ ಹೊರಿಸಿದ್ದ. ಕಡೆಗೆ ಹೆಂಡತಿಯನ್ನೇ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ.

ಕೊಲೆಮಾಡಿದ ಬಳಿಕ ಹೊರಗೆ ಬಂದು ತಾನೇ ತನ್ನ ಹೆಂಡತಿಯನ್ನ ಕೊಂದಿದ್ದು ಎಂದು ಹೇಳಿರುವ ದಸ್ತಿಗೀರ್ ಎಸ್ಕೇಪ್ ಆಗಿದ್ದಾನೆ. ಈತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

Kadapa Murder

ಕಡಪ

ಇದನ್ನೂ ಓದಿ: Husband Kills Wife: ಬಾಯಿಗೆ ಬಟ್ಟೆ ಇಟ್ಟು ಪತ್ನಿ ಕೊಲೆ ಮಾಡಿದ ಪತಿರಾಯ ಅರೆಸ್ಟ್

(Husband Kills His Wife For sons Insurance Money in Kadapa Andhra Pradesh)

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ