AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಪತಿರಾಯ ಮಾಡಿದ್ದೇನು?

ಕೊರೊನಾ, ಕೊರೊನಾ, ಕೊರೊನಾ. ಹೀಗೆ ಬರೀ ಕೊರೊನಾ ಪದವನ್ನೇ ಕೇಳಿ ಬೆಚ್ಚಿಬಿದ್ದಿದ್ದ ಭಾರತದಲ್ಲಿ ಈಗ ನಿಧಾನವಾಗಿ ಎಲ್ಲವೂ ಸಹಜಸ್ಥಿತಿಗೆ ಮರಳುತ್ತಿದೆ. ಹೀಗೆ ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಕೊರೊನಾ ಕಂಟಕದ ನಡುವೆ ಸಭೆಯನ್ನು ಆಯೋಜಿಸಲಾಗಿತ್ತು. ಹೀಗೆ ಸಭೆಯನ್ನುದ್ದೇಶಿಸಿ ಶಿಕ್ಷಕಿಯೊಬ್ಬರು ಮಾತನಾಡುವಾಗ, ಮಚ್ಚು ಹಿಡಿದು ಬಂದ ವ್ಯಕ್ತಿಯೊಬ್ಬ ಮನಸೋಯಿಚ್ಛೆ ಕೊಚ್ಚಿ ಅಲ್ಲಿಂದ ಪರಾರಿಯಾಗಿದ್ದಾನೆ. ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ವೆಲಮ ಕೊತ್ತೂರಿನ ಕಸ್ತೂರ ಬಾ ಶಾಲೆಯಲ್ಲಿ ಈ ಭೀಬತ್ಸ ಘಟನೆ ನಡೆದಿದೆ. ಸರ್ಕಾರದ […]

ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಪತಿರಾಯ ಮಾಡಿದ್ದೇನು?
ಸಾಧು ಶ್ರೀನಾಥ್​
|

Updated on: Sep 17, 2020 | 7:07 AM

Share

ಕೊರೊನಾ, ಕೊರೊನಾ, ಕೊರೊನಾ. ಹೀಗೆ ಬರೀ ಕೊರೊನಾ ಪದವನ್ನೇ ಕೇಳಿ ಬೆಚ್ಚಿಬಿದ್ದಿದ್ದ ಭಾರತದಲ್ಲಿ ಈಗ ನಿಧಾನವಾಗಿ ಎಲ್ಲವೂ ಸಹಜಸ್ಥಿತಿಗೆ ಮರಳುತ್ತಿದೆ. ಹೀಗೆ ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಕೊರೊನಾ ಕಂಟಕದ ನಡುವೆ ಸಭೆಯನ್ನು ಆಯೋಜಿಸಲಾಗಿತ್ತು. ಹೀಗೆ ಸಭೆಯನ್ನುದ್ದೇಶಿಸಿ ಶಿಕ್ಷಕಿಯೊಬ್ಬರು ಮಾತನಾಡುವಾಗ, ಮಚ್ಚು ಹಿಡಿದು ಬಂದ ವ್ಯಕ್ತಿಯೊಬ್ಬ ಮನಸೋಯಿಚ್ಛೆ ಕೊಚ್ಚಿ ಅಲ್ಲಿಂದ ಪರಾರಿಯಾಗಿದ್ದಾನೆ.

ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ವೆಲಮ ಕೊತ್ತೂರಿನ ಕಸ್ತೂರ ಬಾ ಶಾಲೆಯಲ್ಲಿ ಈ ಭೀಬತ್ಸ ಘಟನೆ ನಡೆದಿದೆ. ಸರ್ಕಾರದ ಆದೇಶದಂತೆ ಕೊರೊನಾ ನಂತರ ಶಾಲೆಗಳ ಆರಂಭದ ಬಗ್ಗೆ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಸಾಕಷ್ಟು ಪೋಷಕರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಿಕ್ಷಕಿ ಮಧುರಾಕ್ಷಿ ಮಾತನಾಡುತ್ತಿದ್ದರು, ಆದ್ರೆ ಅದೆಲ್ಲಿಂದ ಬಂದನೋ ರಾಕ್ಷಸ ಪತಿ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದ. ಮನಸೋಯಿಚ್ಛೆ ಕೊಚ್ಚಿ ಸ್ಥಳದಿಂದ ಪರಾರಿಯಾದ.

ಮಚ್ಚಿನ ಏಟು ತಿಂದ ಶಿಕ್ಷಕಿ ಸ್ಥಿತಿ ಗಂಭೀರ ಮಚ್ಚಿನಿಂದ ಭೀಕರವಾಗಿ ಹಲ್ಲೆಗೆ ಒಳಗಾಗಿದ್ದ ಶಿಕ್ಷಕಿ ಮಧುರಾಕ್ಷಿಯನ್ನ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾಕಿನಾಡ ಜಿಲ್ಲಾಸ್ಪತ್ರೆಗೆ‌ ರವಾನಿಸಲಾಗಿದೆ. ಆದರೆ ಮಚ್ಚಿನ ಏಟು ತಿಂದ ಶಿಕ್ಷಕಿ ಸ್ಥಿತಿ ಗಂಭೀರವಾಗಿದ್ದು, ಪರಾರಿಯಾಗಿರುವ ಪಾಪಿ ಪತಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಒಟ್ನಲ್ಲಿ ಶಾಲೆಗೆ ನುಗ್ಗಿ ಪಾಪಿ ಪತಿಯೊಬ್ಬ ಇಷ್ಟು ಭಯಾನಕವಾಗಿ ದಾಳಿ ನಡೆಸಿರೋದು ಆಂಧ್ರಪ್ರದೇಶದಲ್ಲಿ ಸಂಚಲವನ್ನೇ ಸೃಷ್ಟಿ ಮಾಡಿದೆ. ಆದರೆ ಆತ ಇಷ್ಟು ಭಯಾನಕವಾಗಿ ದಾಳಿ ನಡೆಸಲು ಕಾರಣ ಏನು ಅನ್ನೋದೆ ಈವರೆಗೂ ರಿವೀಲ್ ಆಗಿಲ್ಲ. ಹೀಗಾಗಿ ಪ್ರಕರಣದ ಬೆನ್ನುಬಿದ್ದಿರುವ ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ