AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಪತಿರಾಯ ಮಾಡಿದ್ದೇನು?

ಕೊರೊನಾ, ಕೊರೊನಾ, ಕೊರೊನಾ. ಹೀಗೆ ಬರೀ ಕೊರೊನಾ ಪದವನ್ನೇ ಕೇಳಿ ಬೆಚ್ಚಿಬಿದ್ದಿದ್ದ ಭಾರತದಲ್ಲಿ ಈಗ ನಿಧಾನವಾಗಿ ಎಲ್ಲವೂ ಸಹಜಸ್ಥಿತಿಗೆ ಮರಳುತ್ತಿದೆ. ಹೀಗೆ ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಕೊರೊನಾ ಕಂಟಕದ ನಡುವೆ ಸಭೆಯನ್ನು ಆಯೋಜಿಸಲಾಗಿತ್ತು. ಹೀಗೆ ಸಭೆಯನ್ನುದ್ದೇಶಿಸಿ ಶಿಕ್ಷಕಿಯೊಬ್ಬರು ಮಾತನಾಡುವಾಗ, ಮಚ್ಚು ಹಿಡಿದು ಬಂದ ವ್ಯಕ್ತಿಯೊಬ್ಬ ಮನಸೋಯಿಚ್ಛೆ ಕೊಚ್ಚಿ ಅಲ್ಲಿಂದ ಪರಾರಿಯಾಗಿದ್ದಾನೆ. ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ವೆಲಮ ಕೊತ್ತೂರಿನ ಕಸ್ತೂರ ಬಾ ಶಾಲೆಯಲ್ಲಿ ಈ ಭೀಬತ್ಸ ಘಟನೆ ನಡೆದಿದೆ. ಸರ್ಕಾರದ […]

ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಪತಿರಾಯ ಮಾಡಿದ್ದೇನು?
ಸಾಧು ಶ್ರೀನಾಥ್​
|

Updated on: Sep 17, 2020 | 7:07 AM

Share

ಕೊರೊನಾ, ಕೊರೊನಾ, ಕೊರೊನಾ. ಹೀಗೆ ಬರೀ ಕೊರೊನಾ ಪದವನ್ನೇ ಕೇಳಿ ಬೆಚ್ಚಿಬಿದ್ದಿದ್ದ ಭಾರತದಲ್ಲಿ ಈಗ ನಿಧಾನವಾಗಿ ಎಲ್ಲವೂ ಸಹಜಸ್ಥಿತಿಗೆ ಮರಳುತ್ತಿದೆ. ಹೀಗೆ ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಕೊರೊನಾ ಕಂಟಕದ ನಡುವೆ ಸಭೆಯನ್ನು ಆಯೋಜಿಸಲಾಗಿತ್ತು. ಹೀಗೆ ಸಭೆಯನ್ನುದ್ದೇಶಿಸಿ ಶಿಕ್ಷಕಿಯೊಬ್ಬರು ಮಾತನಾಡುವಾಗ, ಮಚ್ಚು ಹಿಡಿದು ಬಂದ ವ್ಯಕ್ತಿಯೊಬ್ಬ ಮನಸೋಯಿಚ್ಛೆ ಕೊಚ್ಚಿ ಅಲ್ಲಿಂದ ಪರಾರಿಯಾಗಿದ್ದಾನೆ.

ಹೆಂಡತಿ ಇದ್ದ ಶಾಲೆಗೆ ಮಚ್ಚು ಹಿಡಿದು ಬಂದ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ವೆಲಮ ಕೊತ್ತೂರಿನ ಕಸ್ತೂರ ಬಾ ಶಾಲೆಯಲ್ಲಿ ಈ ಭೀಬತ್ಸ ಘಟನೆ ನಡೆದಿದೆ. ಸರ್ಕಾರದ ಆದೇಶದಂತೆ ಕೊರೊನಾ ನಂತರ ಶಾಲೆಗಳ ಆರಂಭದ ಬಗ್ಗೆ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಸಾಕಷ್ಟು ಪೋಷಕರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಿಕ್ಷಕಿ ಮಧುರಾಕ್ಷಿ ಮಾತನಾಡುತ್ತಿದ್ದರು, ಆದ್ರೆ ಅದೆಲ್ಲಿಂದ ಬಂದನೋ ರಾಕ್ಷಸ ಪತಿ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದ. ಮನಸೋಯಿಚ್ಛೆ ಕೊಚ್ಚಿ ಸ್ಥಳದಿಂದ ಪರಾರಿಯಾದ.

ಮಚ್ಚಿನ ಏಟು ತಿಂದ ಶಿಕ್ಷಕಿ ಸ್ಥಿತಿ ಗಂಭೀರ ಮಚ್ಚಿನಿಂದ ಭೀಕರವಾಗಿ ಹಲ್ಲೆಗೆ ಒಳಗಾಗಿದ್ದ ಶಿಕ್ಷಕಿ ಮಧುರಾಕ್ಷಿಯನ್ನ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾಕಿನಾಡ ಜಿಲ್ಲಾಸ್ಪತ್ರೆಗೆ‌ ರವಾನಿಸಲಾಗಿದೆ. ಆದರೆ ಮಚ್ಚಿನ ಏಟು ತಿಂದ ಶಿಕ್ಷಕಿ ಸ್ಥಿತಿ ಗಂಭೀರವಾಗಿದ್ದು, ಪರಾರಿಯಾಗಿರುವ ಪಾಪಿ ಪತಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಒಟ್ನಲ್ಲಿ ಶಾಲೆಗೆ ನುಗ್ಗಿ ಪಾಪಿ ಪತಿಯೊಬ್ಬ ಇಷ್ಟು ಭಯಾನಕವಾಗಿ ದಾಳಿ ನಡೆಸಿರೋದು ಆಂಧ್ರಪ್ರದೇಶದಲ್ಲಿ ಸಂಚಲವನ್ನೇ ಸೃಷ್ಟಿ ಮಾಡಿದೆ. ಆದರೆ ಆತ ಇಷ್ಟು ಭಯಾನಕವಾಗಿ ದಾಳಿ ನಡೆಸಲು ಕಾರಣ ಏನು ಅನ್ನೋದೆ ಈವರೆಗೂ ರಿವೀಲ್ ಆಗಿಲ್ಲ. ಹೀಗಾಗಿ ಪ್ರಕರಣದ ಬೆನ್ನುಬಿದ್ದಿರುವ ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?