AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಸಾವು

ಹೈದರಾಬಾದ್​ನ ಅಪಾರ್ಟ್​ಮೆಂಟ್​ವೊಂದರ ಪಾರ್ಕಿಂಗ್​ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

Hyderabad: ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಸಾವು
ಮಗು
ನಯನಾ ರಾಜೀವ್
|

Updated on: May 26, 2023 | 9:36 AM

Share

ಹೈದರಾಬಾದ್​ನ ಅಪಾರ್ಟ್​ಮೆಂಟ್​ವೊಂದರ ಪಾರ್ಕಿಂಗ್​ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಪಾರ್ಕಿಂಗ್ ಸ್ಥಳದಲ್ಲಿ ಮಲಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯನ್ನು ಗಮನಿಸದೆ ಕಾರನ್ನು ಚಲಾಯಿಸಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರು ಅಬಕಾರಿ ಸಬ್‌ಇನ್‌ಸ್ಪೆಕ್ಟರ್‌ಗೆ ಸೇರಿದ್ದು, ಆಕೆಯ ಪತಿ ಕಾರು ಚಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Delhi: ಸುರಂಗ ಮಾರ್ಗದಲ್ಲಿ ಅಪಘಾತ, 15 ನಿಮಿಷಗಳ ಕಾಲ ಹರಿಯಿತು ರಕ್ತದ ಕೋಡಿ, ಮಾಹಿತಿ ನೀಡಲು ನೆಟ್​ವರ್ಕ್​ ಇಲ್ಲದೆ ಜೀವ ಹೋಯ್ತು

ಈ ಬಾಲಕಿ ನಗರದಲ್ಲಿ ಕೂಲಿ ಕೆಲಸ ಮಾಡಲು ಬಂದ ಮಹಿಳೆಯೊಬ್ಬರ ಮಗಳಾಗಿದ್ದು, ಬಿಸಿಲು ತಪ್ಪಿಸಲು ವಾಹನ ನಿಲುಗಡೆ ಸ್ಥಳದಲ್ಲಿ ಮಲಗಿದ್ದಾಳೆ. ಮಗು ಪಾರ್ಕಿಂಗ್ ಸ್ಥಳದಲ್ಲಿ ನೀಲಿ ಬಣ್ಣದ ಬಟ್ಟೆಯ ಮೇಲೆ ಮಲಗಿರುವುದನ್ನು ಕಾಣಬಹುದು.

ಆಗ ಬಿಳಿ ಬಣ್ಣದ ಎಸ್‌ಯುವಿ ಅಲ್ಲಿಗೆ ಬಂದು ಮಗುವಿನ ಮೇಲೆ ಹತ್ತುತ್ತದೆ ಚಾಲಕ ತಕ್ಷಣವೇ ಏನೋ ಆಗಿದೆ ಎಂದು ಅರಿತು ಕಾರನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ, ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ