AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್

Covaxin: 3 ನೇ ಹಂತದ ಪ್ರಯೋಗಗಳ ಡೇಟಾವನ್ನು ನಾವು ಸ್ವೀಕರಿಸಿದ್ದೇವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ವರದಿಗಳ ಪ್ರಕಾರ ಹಂತ 3ರ ದತ್ತಾಂಶವನ್ನು ಪರಿಶೀಲಿಸಲು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಮಂಗಳವಾರ ಸಭೆ ಸೇರುವ ಸಾಧ್ಯತೆ ಇದೆ.

ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್
ಕೊವ್ಯಾಕ್ಸಿನ್
TV9 Web
| Edited By: |

Updated on: Jun 22, 2021 | 12:14 PM

Share

ದೆಹಲಿ: ಕೊವಿಡ್ 19 ವಿರುದ್ಧ ಹೋರಾಡಲಿರುವ ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿ ಪಡಿಸಿರು ಹೈದರಾಬಾದ್ ಮೂಲದ ಔಷಧ ತಯಾರಕ ಭಾರತ್ ಬಯೋಟೆಕ್, ಲಸಿಕೆಯ 3 ನೇ ಹಂತದ ಪ್ರಯೋಗಗಳ ಡೇಟಾವನ್ನು ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯಕ್ಕೆ (DCGI)  ಸಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

3 ನೇ ಹಂತದ ಪ್ರಯೋಗಗಳ ಡೇಟಾವನ್ನು ನಾವು ಸ್ವೀಕರಿಸಿದ್ದೇವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ವರದಿಗಳ ಪ್ರಕಾರ ಹಂತ 3ರ ದತ್ತಾಂಶವನ್ನು ಪರಿಶೀಲಿಸಲು ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಮಂಗಳವಾರ ಸಭೆ ಸೇರುವ ಸಾಧ್ಯತೆ ಇದೆ.

ಕೊವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಗಳ ಮಾಹಿತಿಯ ವಿವಾದದ ಮಧ್ಯೆಯೇ ಜೂನ್‌ನಲ್ಲಿ ಇದನ್ನು ಸಾರ್ವಜನಿಕಗೊಳಿಸುವುದಾಗಿ ಭಾರತ್ ಬಯೋಟೆಕ್ ಹೇಳಿತ್ತು. ಆದರೆ ಈಗ ಜುಲೈನಲ್ಲಿ ಡೇಟಾವನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ಸಂಸ್ಥೆ ಹೇಳಿದೆ.

ಕೊವಿಡ್ -19 ವಿರುದ್ಧ ರಾಷ್ಟ್ರವ್ಯಾಪಿ ಚಾಲನೆಯಲ್ಲಿ ಬಳಸಲಾಗುವ ಮೂರು ಲಸಿಕೆಗಳಲ್ಲಿ ಕೊವ್ಯಾಕ್ಸಿನ್ ಕೂಡ ಸೇರಿದೆ. ಇದನ್ನು ಜನವರಿಯಲ್ಲಿ ಡಿಸಿಜಿಐ ಅನುಮೋದನೆ ನೀಡಿತು, ಜೊತೆಗೆ ಆಕ್ಸ್‌ಫರ್ಡ್ ಯೂನಿವರ್ಸಿಟಿ-ಅಸ್ಟ್ರಾಜೆನೆಕಾ ಲಸಿಕೆಯನ್ನು ನ್ನು ಸ್ಥಳೀಯವಾಗಿ ಪುಣೆ ಮೂಲದ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಕೊವಿಶೀಲ್ಡ್ ಎಂಬ ಹೆಸರಿನಲ್ಲಿ ತಯಾರಿಸುತ್ತಿದೆ. ಮೂರನೇ ಲಸಿಕೆ, ರಷ್ಯಾದ ಸ್ಪುಟ್ನಿಕ್ ವಿ, ಏಪ್ರಿಲ್ನಲ್ಲಿ ತುರ್ತು ಬಳಕೆಯ ಅಧಿಕಾರವನ್ನು (EUA) ನೀಡಿತ್ತು.

ಕೊರೊನಾವೈರಸ್ ಕಾಯಿಲೆಯ ವಿರುದ್ಧ ವ್ಯಾಕ್ಸಿನೇಷನ್ ಡ್ರೈವ್ ಜನವರಿ 16 ರಂದು ಪ್ರಾರಂಭವಾಯಿತು. ಆದಾಗ್ಯೂ, ಆರಂಭದಿಂದಲೂ, ಕೊವಾಕ್ಸಿನ್‌ನ ಪರಿಣಾಮಕಾರಿತ್ವದ ಬಗ್ಗೆ ಅನುಮಾನಗಳು ಮೂಡಿಬಂದವು, ಏಕೆಂದರೆ ಲಸಿಕೆಯನ್ನು ಅದರ ಮೂರನೇ ಹಂತದ ಪ್ರಯೋಗಗಳನ್ನು ಪೂರ್ಣಗೊಳಿಸದೆ ತುರ್ತು ಬಳಕೆಯ ಅಧಿಕಾರ ನೀಡಲಾಯಿತು. ಏಪ್ರಿಲ್​ನಲ್ಲಿ ಭಾರತ್ ಬಯೋಟೆಕ್ ಬಿಡುಗಡೆ ಮಾಡಿದ ಮಧ್ಯಂತರ ದತ್ತಾಂಶವು ರೋಗಲಕ್ಷಣದ ಕಾಯಿಲೆಯ ವಿರುದ್ಧ ಲಸಿಕೆ ಶೇ 7 ಮತ್ತು ಗಂಭೀರ ಅನಾರೋಗ್ಯದ ವಿರುದ್ಧ ಶೇ 100 ಪರಿಣಾಮಕಾರಿಯಾಗಿದೆ ಎಂದು ತೋರಿಸಿದೆ.

ಕಳೆದ ವಾರ ಭಾರತ್ ಬಯೋಟೆಕ್ ಜಾಗತಿಕ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (WHO) 3 ನೇ ಹಂತದ ಡೇಟಾವನ್ನು ಸಲ್ಲಿಸಿದೆ ಎಂಬ ವದಂತಿಗಳನ್ನು ನಿರಾಕರಿಸಿತು. ಅಂತಹ ವರದಿಗಳನ್ನು “ತಪ್ಪು ಮತ್ತು ಯಾವುದೇ ಪುರಾವೆಗಳಿಲ್ಲ” ಎಂದು ಅದು ಹೇಳಿದೆ ಭಾರತ್ ಬಯೋಟೆಕ್ ಅರ್ಜಿಯನ್ನು ಜೂನ್ 23 ರಂದು ಡಬ್ಲ್ಯುಎಚ್‌ಒ ಪರಿಶೀಲಿಸಲಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಕೊವ್ಯಾಕ್ಸಿನ್ ಲಸಿಕೆಯಲ್ಲಿ ಕರುವಿನ ಸೀರಮ್ ಬಳಸಿಲ್ಲ: ಭಾರತ್ ಬಯೋಟೆಕ್ ಸ್ಪಷ್ಟನೆ

ಇದನ್ನೂ ಓದಿ: ತುರ್ತು ಬಳಕೆ ಲಸಿಕಾ ಪಟ್ಟಿಯಲ್ಲಿ ಕೊವ್ಯಾಕ್ಸಿನ್ ಸೇರ್ಪಡೆ ವಿಚಾರ; ಜೂನ್ 23ಕ್ಕೆ ವಿಶ್ವ ಆರೋಗ್ಯ ಸಂಸ್ಥೆಗೆ ದಾಖಲೆ ಸಲ್ಲಿಸಲಿದೆ ಭಾರತ್ ಬಯೋಟೆಕ್

(Hyderabad-based drugmaker Bharat Biotech submits Covaxin data from phase 3 trials of the vaccine DCGI)

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?