AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಸಿನಡಿಗಾದ ವ್ಯಕ್ತಿ

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ಸಾವ್ನನ್ನಪ್ಪಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬಾಲನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ವ್ಯಕ್ತಿಯನ್ನು ಸಂಚಾರ ಪೊಲೀಸ ತಪಾಸಣೆಗಾಗಿ ತಡೆದರು. ಬೈಕ್ ಸವಾರ ಪರಾರಿಯಾಗಲು ಯತ್ನಿಸಿದ್ದ ಆಗ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾನೆ, ಕೂಡಲೇ ಹಿಂದಿನಿಂದ ಬಸ್ ಆತನ ಮೇಲೆ ಹರಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ನಂತರ, ಸ್ಥಳೀಯ ನಿವಾಸಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಸಿನಡಿಗಾದ ವ್ಯಕ್ತಿ
ಮೃತ ವ್ಯಕ್ತಿ
ನಯನಾ ರಾಜೀವ್
|

Updated on: Apr 14, 2025 | 10:39 AM

Share

ಹೈದರಾಬಾದ್, ಏಪ್ರಿಲ್ 14: ಟ್ರಾಫಿಕ್ ಪೊಲೀಸ(Traffic Police)ರಿಂದ ತಪ್ಪಿಸಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಜೀವವನ್ನೇ ಬೆಲೆಯಾಗಿ ತೆತ್ತಿರುವ ಘಟನೆ ಹೈದರಾಬಾದ್(Hyderabad)​ನಲ್ಲಿ ನಡೆದಿದೆ. ಎಂದಿನಿಂದ ಟ್ರಾಫಿಕ್ ಪೊಲೀಸರು ಅವರ ಕೆಲಸ ಮಾಡುತ್ತಿದ್ದರು. ವಾಹನಗಳ ತಪಾಸಣೆ ನಡೆಸುತ್ತಿದ್ದರು. ಸಿಗ್ನಲ್ ಬಳಿ ಹೋಗುತ್ತಿದ್ದ ಬೈಕ್ ಸವಾರನನ್ನು ತಡೆದಿದ್ದಾರೆ ಆತ ತಪ್ಪಿಸಿಕೊಳ್ಳಲು ಹೋಗಿ ಹಿಂದೆ ಬರುತ್ತಿದ್ದ ಬಸ್ಸಿನಡಿಗಾಗಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಬಾಲನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ವ್ಯಕ್ತಿಯನ್ನು ಸಂಚಾರ ಪೊಲೀಸ ತಪಾಸಣೆಗಾಗಿ ತಡೆದರು. ಬೈಕ್ ಸವಾರ ಪರಾರಿಯಾಗಲು ಯತ್ನಿಸಿದ್ದ ಆಗ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾನೆ, ಕೂಡಲೇ ಹಿಂದಿನಿಂದ ಬಸ್ ಆತನ ಮೇಲೆ ಹರಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ನಂತರ, ಸ್ಥಳೀಯ ನಿವಾಸಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಮತ್ತು ಅಪಘಾತಕ್ಕೆ ಸಂಚಾರಿ ಕಾನ್‌ಸ್ಟೆಬಲ್ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪ ಹೊರಿಸಿದರು. ಕಾನ್‌ಸ್ಟೆಬಲ್ ಕುಡಿದಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಬೈಕ್ ಸವಾರನೇ ಸ್ಕಿಡ್ ಆಗಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
Image
ಬೆಂಗಳೂರು: ಫ್ಲೈಓವರ್​ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ
Image
ಹಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ಟ್ರಾಫಿಕ್​ ಪೊಲೀಸ್​ ಹಲ್ಲೆ ಆರೋಪ
Image
ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!

ಮತ್ತಷ್ಟು ಓದಿ: ಶಿವಮೊಗ್ಗ: ಮಠದಲ್ಲಿ 300 ಕೋಟಿ ರೂ ದರೋಡೆಗೆ ಸ್ಕೇಚ್, ಸಿಕ್ಕಿದ್ದು 50 ಸಾವಿರ ರೂ, 12 ಜನರ ಬಂಧನ

ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಬಾಲನಗರ ಪೊಲೀಸ್ ಠಾಣೆಯಲ್ಲಿ ಸಂಚಾರ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರು ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಈ ಪ್ರಕ್ರಿಯೆಯಲ್ಲಿ ಹಲವಾರು ಜನರು ಗಾಯಗೊಂಡರು. ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ ನ್ಯಾಯಕ್ಕಾಗಿ ಒತ್ತಾಯಿಸುತ್ತಾ ಬೋಸುಬಾಬು ಅವರ ಕುಟುಂಬವೂ ಪ್ರತಿಭಟನೆಯಲ್ಲಿ ಸೇರಿಕೊಂಡಿತು.

ಡಿಸಿಪಿ ಮತ್ತು ಎಸಿಪಿ ಕೂಡ ಭಾಗಿಯಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು, ಈ ಪ್ರದೇಶದಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ