Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದ ಆರೋಪಿಯ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

Hyderabad Child Rape Case: ಸೈದಾಬಾದ್ ಪ್ರದೇಶದ ಸಿಂಗರೇಣಿ ಕಾಲೋನಿಯಲ್ಲಿ ಸೆಪ್ಟೆಂಬರ್ 9 ರಂದು ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಮಧ್ಯರಾತ್ರಿಯ ನಂತರ ಆತನ ಮನೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು

ಹೈದರಾಬಾದ್: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದ ಆರೋಪಿಯ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ
ಆರೋಪಿ ಪಲ್ಲಕೊಂಡ ರಾಜು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 16, 2021 | 1:15 PM

ಹೈದರಾಬಾದ್: ಸೆಪ್ಟೆಂಬರ್ 9 ರಂದು ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಸೈದಾಬಾದ್ ಅತ್ಯಾಚಾರ ಪ್ರಕರಣದ ಆರೋಪಿ ತೆಲಂಗಾಣದ  ಘನಪುರ ಸ್ಟೇಷನ್ ಬಳಿ  ರೈಲ್ವೆ ಹಳಿಯಲ್ಲಿ  ಶವವಾಗಿ ಪತ್ತೆಯಾಗಿದ್ದಾನೆ. ಈ ಬಗ್ಗೆ ದಿ ನ್ಯೂಸ್ ಮಿನಿಟ್ ಜತೆ ಮಾತನಾಡಿದ ಹೈದರಾಬಾದ್ ಪೂರ್ವ ವಲಯದ ಉಪ ಪೊಲೀಸ್ ಆಯುಕ್ತರು (ಡಿಸಿಪಿ) ರಮೇಶ್, “ಆರೋಪಿ ಸಾವನ್ನಪ್ಪಿರುವುದು ನಿಜ. ನಾನು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯೊಂದಿಗೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಬೇಕು. ಪೊಲೀಸರು ಆತನನ್ನು ಹಿಂಬಾಲಿಸುತ್ತಿದ್ದಾಗ ಎಚ್ಚರಿಕೆಗೆ ಕಿವಿಗೊಡದೆ ಆತ ರೈಲಿನ ಮುಂದೆ ಹಾರಿದ್ದಾನೆ ಎಂದು ನನಗೆ ಹೇಳಲಾಗಿದೆ. ಎಲ್ಲಾ ವಿವರಗಳನ್ನು ಖಚಿತಪಡಿಸಿಕೊಂಡ ನಂತರ ಅದನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳಲಾಗುತ್ತದೆ ಎಂದಿದ್ದಾರೆ. ಪಲ್ಲಕೊಂಡ ರಾಜು ಎಂಬ 30 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿರುವ ಆರೋಪಿ, ಘಟನೆ ವರದಿಯಾದಾಗಿನಿಂದ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಲು ಪೊಲೀಸರು ಒಂಬತ್ತು ವಿಶೇಷ ತಂಡಗಳನ್ನು ರಚಿಸಿದ್ದರು. ಸೆಪ್ಟೆಂಬರ್ 14 ರಂದು ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಆರೋಪಿಯ ದೈಹಿಕ ನೋಟದ ವಿವರಗಳೊಂದಿಗೆ ನೋಟಿಸ್ ನೀಡಿದ್ದರು ಮತ್ತು ಆತನ ಬಗ್ಗೆ ಮಾಹಿತಿ ಇರುವ ಯಾರಾದರೂ ಪೊಲೀಸರ ಮುಂದೆ ಬರುವಂತೆ ಮನವಿ ಮಾಡಿದರು. ಜತೆಗೆ ವಿಶ್ವಾಸಾರ್ಹ ಮಾಹಿತಿಗಾಗಿ 10 ಲಕ್ಷ ಬಹುಮಾನ ಘೋಷಿಸಿದ್ದರು.

ಹೈದರಾಬಾದ್, ಸೈಬರಾಬಾದ್ ಮತ್ತು ರಾಚಕೊಂಡ ಎಂಬ ಮೂರು ಪೊಲೀಸ್ ಕಮಿಷನರೇಟ್‌ಗಳ ವ್ಯಾಪ್ತಿಯಲ್ಲಿ ನೂರಾರು ಪೊಲೀಸರನ್ನು ಒಳಗೊಂಡ ಹಲವಾರು ತಂಡಗಳು ಶೋಧ ಕಾರ್ಯದಲ್ಲಿ ನಿರತವಾಗಿವೆ. 10 ಲಕ್ಷ ಬಹುಮಾನವನ್ನು ಘೋಷಿಸಿದ ಒಂದು ದಿನದ ನಂತರ, ಪೋಲಿಸರು ಆತನ ಚಿತ್ರಗಳೊಂದಿಗೆ ವಾಟೆಂಡ್ ಪೋಸ್ಟರ್‌ಗಳನ್ನು ಸೆಪ್ಟೆಂಬರ್ 15 ರಂದು ಬಿಡುಗಡೆ ಮಾಡಿದರು. ಪೋಲಿಸ್ ಸಿಬ್ಬಂದಿ ಗೋಡೆಗಳು, ಬಸ್‌ಗಳು ಮತ್ತು ಆಟೋ-ರಿಕ್ಷಾಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸುತ್ತಿರುವುದು ಕಂಡುಬಂತು. ಆರೋಪಿಗಳು ಹೇಗೆ ಕಾಣುತ್ತಾರೆ ಎಂಬುದರ ಕುರಿತು ಕೆಲವರು ನಾಗರಿಕರಿಗೆ ವಿವರಿಸಿದರು.ನೆರೆಯ ರಾಜ್ಯಗಳಿಗೆ ಪಲಾಯನ ಮಾಡುವುದನ್ನು ತಡೆಯಲು ಪೊಲೀಸರು ರಾಜ್ಯದ ಗಡಿಗಳಲ್ಲಿ ವಾಹನ ತಪಾಸಣೆಯನ್ನು ಸಹ ಕೈಗೊಂಡಿದ್ದರು.

ಏನಿದು ಪ್ರಕರಣ? ಸೈದಾಬಾದ್ ಪ್ರದೇಶದ ಸಿಂಗರೇಣಿ ಕಾಲೋನಿಯಲ್ಲಿ ಸೆಪ್ಟೆಂಬರ್ 9 ರಂದು ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಮಧ್ಯರಾತ್ರಿಯ ನಂತರ ಆತನ ಮನೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಈ ಕೃತ್ಯವು ನಗರ ಮತ್ತು ರಾಜ್ಯದಾದ್ಯಂತ ಭಾರೀ ಆಕ್ರೋಶವನ್ನು ಹುಟ್ಟುಹಾಕಿತು, ಕಳೆದ ವರ್ಷ ಹೈದರಾಬಾದಿನಲ್ಲಿ ನಡೆದ ದಿಶಾ ಪ್ರಕರಣದ ಆರೋಪಿಗಳಂತೆ ಆರೋಪಿಗಳನ್ನು ‘ಎನ್ ಕೌಂಟರ್’ ಮಾಡಬೇಕೆಂದು ಹಾಲಿ ರಾಜ್ಯ ಮಂತ್ರಿಗಳು ಸೇರಿದಂತೆ ಹಲವರು ಒತ್ತಾಯಿಸಿದ್ದರು.

ಆರೋಪಿಯನ್ನು ಹಿಡಿಯಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದಂತೆ, ಪೊಲೀಸ್ ಮಹಾನಿರ್ದೇಶಕ ಎಂ.ಮಹೇಂದರ್ ರೆಡ್ಡಿ ವೈಯಕ್ತಿಕವಾಗಿ ಪ್ರಕರಣವನ್ನು ಮೇಲ್ವಿಚಾರಣೆ ಮಾಡುತ್ತಿದ್ದರು. ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಅವರು ಪೊಲೀಸ್ ಆಯುಕ್ತರಿಗೆ ಸೂಚಿಸಿದರು. ಆಯುಕ್ತರ ಕಾರ್ಯಪಡೆ ಮತ್ತು ವಿಶೇಷ ಕಾರ್ಯಾಚರಣೆ ತಂಡದ (ಎಸ್‌ಒಟಿ) ಸಿಬ್ಬಂದಿಯನ್ನು ಬೃಹತ್ ಶೋಧ ಕಾರ್ಯಾಚರಣೆಗಾಗಿ ಬಳಸಿಕೊಳ್ಳಲಾಗಿದೆ.

ಅಪರಾಧ ವರದಿಯಾದ ಒಂದು ದಿನದ ನಂತರ ಎಲ್‌ಬಿ ನಗರ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಕಾಣಿಸಿಕೊಂಡಿದ್ದ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಟ್ವಿಟರ್​​ನಲ್ಲಿ justice Served ಟ್ರೆಂಡ್ ಹೈದರಾಬಾದ್ ಅತ್ಯಾಚಾರ ಪ್ರಕರಣದ ಆರೋಪಿಯ ಸಾವಿನ ಸುದ್ದಿ ಬಿತ್ತರವಾಗುತ್ತಿದ್ದಂತೆ ಟ್ವಿಟರ್ ನಲ್ಲಿ justice Served ಟ್ರೆಂಡ್ ಆಗಿದೆ.

ಇದನ್ನೂ ಓದಿ: ಹೈದರಾಬಾದ್ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡುವುದಾಗಿ ಭರವಸೆ ನೀಡಿದ ತೆಲಂಗಾಣ ಸಚಿವ

(Hyderabad child rape and murder accused Pallakonda Raju found dead at Station Ghanapur railway tracks in Telangana)

Published On - 1:13 pm, Thu, 16 September 21

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್